ಒಟ್ಟಾಗಿ ಪೋಸ್​ ಕೊಟ್ಟ ರಜನಿಕಾಂತ್-ಅಮಿತಾಭ್ ಬಚ್ಚನ್; ಫೋಟೋ ವೈರಲ್

ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿದೆ. ‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ’ ಎಂದು ಲೈಕಾ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದೆ.

ಒಟ್ಟಾಗಿ ಪೋಸ್​ ಕೊಟ್ಟ ರಜನಿಕಾಂತ್-ಅಮಿತಾಭ್ ಬಚ್ಚನ್; ಫೋಟೋ ವೈರಲ್
ರಜಿನಿ-ಅಮಿತಾಭ್
Follow us
|

Updated on: May 04, 2024 | 10:34 AM

ಬಾಲಿವುಡ್ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರು ಸದ್ಯ ಸಖತ್ ಬ್ಯುಸಿ ಇದ್ದಾರೆ. ಅವರು ‘ಕೌನ್ ಬನೇಗಾ ಕರೋಡ್ಪತಿ’ ಶೋ ಜೊತೆಗೆ ಸಿನಿಮಾಗಳ ಶೂಟ್​ನಲ್ಲೂ ತೊಡಗಿಕೊಂಡಿದ್ದಾರೆ. ಈಗ ಅವರು ಮುಂದಿನ ಸಿನಿಮಾ ‘ವೆಟ್ಟೈಯನ್’ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ತಮಿಳಿನ ಸಿನಿಮಾ ಇದಾಗಿದ್ದು, ರಜನಿಕಾಂತ್ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸ್ವತಃ ‘ವೆಟ್ಟೈಯನ್’ ಸಿನಿಮಾ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಈ ಫೋಟೋಗಳನ್ನು ಶೇರ್ ಮಾಡಿಕೊಂಡಿದೆ.

ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿದೆ. ‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ’ ಎಂದು ಲೈಕಾ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದೆ. ರಜನಿಕಾಂತ್ ಹಾಗೂ ಅಮಿತಾಭ್ ಇಬ್ಬರೂ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಅನೇಕರು ಈ ಫೋಟೋಗೆ ಹಾರ್ಟ್ ಎಮೋಜಿ ಹಾಕಿದ್ದಾರೆ.

ಇತ್ತೀಚೆಗೆ ಚಿತ್ರತಂಡದವರು ಸಿನಿಮಾದ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ. ರಜನಿಕಾಂತ್ ಅವರು ಗನ್ ಹಿಡಿದು ಪೋಸ್ ಕೊಟ್ಟಿದ್ದರು. ಈ ಸಿನಿಮಾದಲ್ಲಿ ರಜನಿ ಹಾಗೂ ಅಮಿತಾಭ್ ಕಾಂಬಿನೇಷನ್ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ.

ಇದನ್ನೂ ಓದಿ: ಮೇ ತಿಂಗಳಿಂದ ಡಿಸೆಂಬರ್​ವರೆಗೆ ಸಿನಿಪ್ರಿಯರಿಗೆ ಸುಗ್ಗಿ; ರಿಲೀಸ್ ಆಗಲಿವೆ ದಕ್ಷಿಣದ ಈ ಬಿಗ್​ ಬಜೆಟ್ ಸಿನಿಮಾಗಳು

ಕಳೆದ ವರ್ಷ ‘ಜೈಲರ್’ ಸಿನಿಮಾದಲ್ಲಿ ರಜನಿಕಾಂತ್ ನಟಿಸಿದ್ದರು. ಈ ಸಿನಿಮಾ ಪವರ್​ಫುಲ್ ಆ್ಯಕ್ಷನ್​ನೊಂದಿಗೆ ಕೂಡಿತ್ತು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತ್ತು. ರೆಟ್ರೋ ಕಾಲದ ರಜನಿಕಾಂತ್ ಅವರು ಕಾಣಿಸಿದ್ದರು. ಈ ಸಿನಿಮಾದಿಂದ ರಜನಿಕಾಂತ್ ಖ್ಯಾತಿ ಹೆಚ್ಚಿದೆ. ಇದೇ ರೀತಿಯ ಸಿನಿಮಾಗಳನ್ನು ಅವರು ಆಯ್ಕೆ ಮಾಡಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ