AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟ್ಟಾಗಿ ಪೋಸ್​ ಕೊಟ್ಟ ರಜನಿಕಾಂತ್-ಅಮಿತಾಭ್ ಬಚ್ಚನ್; ಫೋಟೋ ವೈರಲ್

ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿದೆ. ‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ’ ಎಂದು ಲೈಕಾ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದೆ.

ಒಟ್ಟಾಗಿ ಪೋಸ್​ ಕೊಟ್ಟ ರಜನಿಕಾಂತ್-ಅಮಿತಾಭ್ ಬಚ್ಚನ್; ಫೋಟೋ ವೈರಲ್
ರಜಿನಿ-ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on: May 04, 2024 | 10:34 AM

Share

ಬಾಲಿವುಡ್ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರು ಸದ್ಯ ಸಖತ್ ಬ್ಯುಸಿ ಇದ್ದಾರೆ. ಅವರು ‘ಕೌನ್ ಬನೇಗಾ ಕರೋಡ್ಪತಿ’ ಶೋ ಜೊತೆಗೆ ಸಿನಿಮಾಗಳ ಶೂಟ್​ನಲ್ಲೂ ತೊಡಗಿಕೊಂಡಿದ್ದಾರೆ. ಈಗ ಅವರು ಮುಂದಿನ ಸಿನಿಮಾ ‘ವೆಟ್ಟೈಯನ್’ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ತಮಿಳಿನ ಸಿನಿಮಾ ಇದಾಗಿದ್ದು, ರಜನಿಕಾಂತ್ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸ್ವತಃ ‘ವೆಟ್ಟೈಯನ್’ ಸಿನಿಮಾ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಈ ಫೋಟೋಗಳನ್ನು ಶೇರ್ ಮಾಡಿಕೊಂಡಿದೆ.

ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿದೆ. ‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ’ ಎಂದು ಲೈಕಾ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದೆ. ರಜನಿಕಾಂತ್ ಹಾಗೂ ಅಮಿತಾಭ್ ಇಬ್ಬರೂ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಅನೇಕರು ಈ ಫೋಟೋಗೆ ಹಾರ್ಟ್ ಎಮೋಜಿ ಹಾಕಿದ್ದಾರೆ.

ಇತ್ತೀಚೆಗೆ ಚಿತ್ರತಂಡದವರು ಸಿನಿಮಾದ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ. ರಜನಿಕಾಂತ್ ಅವರು ಗನ್ ಹಿಡಿದು ಪೋಸ್ ಕೊಟ್ಟಿದ್ದರು. ಈ ಸಿನಿಮಾದಲ್ಲಿ ರಜನಿ ಹಾಗೂ ಅಮಿತಾಭ್ ಕಾಂಬಿನೇಷನ್ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ.

ಇದನ್ನೂ ಓದಿ: ಮೇ ತಿಂಗಳಿಂದ ಡಿಸೆಂಬರ್​ವರೆಗೆ ಸಿನಿಪ್ರಿಯರಿಗೆ ಸುಗ್ಗಿ; ರಿಲೀಸ್ ಆಗಲಿವೆ ದಕ್ಷಿಣದ ಈ ಬಿಗ್​ ಬಜೆಟ್ ಸಿನಿಮಾಗಳು

ಕಳೆದ ವರ್ಷ ‘ಜೈಲರ್’ ಸಿನಿಮಾದಲ್ಲಿ ರಜನಿಕಾಂತ್ ನಟಿಸಿದ್ದರು. ಈ ಸಿನಿಮಾ ಪವರ್​ಫುಲ್ ಆ್ಯಕ್ಷನ್​ನೊಂದಿಗೆ ಕೂಡಿತ್ತು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತ್ತು. ರೆಟ್ರೋ ಕಾಲದ ರಜನಿಕಾಂತ್ ಅವರು ಕಾಣಿಸಿದ್ದರು. ಈ ಸಿನಿಮಾದಿಂದ ರಜನಿಕಾಂತ್ ಖ್ಯಾತಿ ಹೆಚ್ಚಿದೆ. ಇದೇ ರೀತಿಯ ಸಿನಿಮಾಗಳನ್ನು ಅವರು ಆಯ್ಕೆ ಮಾಡಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!