AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟ್ಟಾಗಿ ಪೋಸ್​ ಕೊಟ್ಟ ರಜನಿಕಾಂತ್-ಅಮಿತಾಭ್ ಬಚ್ಚನ್; ಫೋಟೋ ವೈರಲ್

ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿದೆ. ‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ’ ಎಂದು ಲೈಕಾ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದೆ.

ಒಟ್ಟಾಗಿ ಪೋಸ್​ ಕೊಟ್ಟ ರಜನಿಕಾಂತ್-ಅಮಿತಾಭ್ ಬಚ್ಚನ್; ಫೋಟೋ ವೈರಲ್
ರಜಿನಿ-ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on: May 04, 2024 | 10:34 AM

Share

ಬಾಲಿವುಡ್ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರು ಸದ್ಯ ಸಖತ್ ಬ್ಯುಸಿ ಇದ್ದಾರೆ. ಅವರು ‘ಕೌನ್ ಬನೇಗಾ ಕರೋಡ್ಪತಿ’ ಶೋ ಜೊತೆಗೆ ಸಿನಿಮಾಗಳ ಶೂಟ್​ನಲ್ಲೂ ತೊಡಗಿಕೊಂಡಿದ್ದಾರೆ. ಈಗ ಅವರು ಮುಂದಿನ ಸಿನಿಮಾ ‘ವೆಟ್ಟೈಯನ್’ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ತಮಿಳಿನ ಸಿನಿಮಾ ಇದಾಗಿದ್ದು, ರಜನಿಕಾಂತ್ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸ್ವತಃ ‘ವೆಟ್ಟೈಯನ್’ ಸಿನಿಮಾ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಈ ಫೋಟೋಗಳನ್ನು ಶೇರ್ ಮಾಡಿಕೊಂಡಿದೆ.

ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿದೆ. ‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ’ ಎಂದು ಲೈಕಾ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದೆ. ರಜನಿಕಾಂತ್ ಹಾಗೂ ಅಮಿತಾಭ್ ಇಬ್ಬರೂ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಅನೇಕರು ಈ ಫೋಟೋಗೆ ಹಾರ್ಟ್ ಎಮೋಜಿ ಹಾಕಿದ್ದಾರೆ.

ಇತ್ತೀಚೆಗೆ ಚಿತ್ರತಂಡದವರು ಸಿನಿಮಾದ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ. ರಜನಿಕಾಂತ್ ಅವರು ಗನ್ ಹಿಡಿದು ಪೋಸ್ ಕೊಟ್ಟಿದ್ದರು. ಈ ಸಿನಿಮಾದಲ್ಲಿ ರಜನಿ ಹಾಗೂ ಅಮಿತಾಭ್ ಕಾಂಬಿನೇಷನ್ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ.

ಇದನ್ನೂ ಓದಿ: ಮೇ ತಿಂಗಳಿಂದ ಡಿಸೆಂಬರ್​ವರೆಗೆ ಸಿನಿಪ್ರಿಯರಿಗೆ ಸುಗ್ಗಿ; ರಿಲೀಸ್ ಆಗಲಿವೆ ದಕ್ಷಿಣದ ಈ ಬಿಗ್​ ಬಜೆಟ್ ಸಿನಿಮಾಗಳು

ಕಳೆದ ವರ್ಷ ‘ಜೈಲರ್’ ಸಿನಿಮಾದಲ್ಲಿ ರಜನಿಕಾಂತ್ ನಟಿಸಿದ್ದರು. ಈ ಸಿನಿಮಾ ಪವರ್​ಫುಲ್ ಆ್ಯಕ್ಷನ್​ನೊಂದಿಗೆ ಕೂಡಿತ್ತು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತ್ತು. ರೆಟ್ರೋ ಕಾಲದ ರಜನಿಕಾಂತ್ ಅವರು ಕಾಣಿಸಿದ್ದರು. ಈ ಸಿನಿಮಾದಿಂದ ರಜನಿಕಾಂತ್ ಖ್ಯಾತಿ ಹೆಚ್ಚಿದೆ. ಇದೇ ರೀತಿಯ ಸಿನಿಮಾಗಳನ್ನು ಅವರು ಆಯ್ಕೆ ಮಾಡಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?