AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೆಟ್ಟೈಯಾನ್’ ಚಿತ್ರಕ್ಕೆ ರಜನಿಕಾಂತ್ ಹಾಗೂ ಅಮಿತಾಭ್ ಸಂಭಾವನೆ ಎಷ್ಟು?

‘ಜೈಲರ್’ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಾಣ ಮಾಡಿತ್ತು. ಈ ಚಿತ್ರಕ್ಕೆ ರಜನಿಕಾಂತ್ 100 ಕೋಟಿ ರೂಪಾಯಿ ಪಡೆದಿದ್ದರು. ‘ವೆಟ್ಟೈಯಾನ್’ ಚಿತ್ರವನ್ನು ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಅಡಿಯಲ್ಲೇ ನಿರ್ಮಾಣ ಆಗುತ್ತಿದ್ದು, ಇದಕ್ಕಾಗಿ ರಜನಿಕಾಂತ್ 125 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ.

‘ವೆಟ್ಟೈಯಾನ್’ ಚಿತ್ರಕ್ಕೆ ರಜನಿಕಾಂತ್ ಹಾಗೂ ಅಮಿತಾಭ್ ಸಂಭಾವನೆ ಎಷ್ಟು?
ರಾಜೇಶ್ ದುಗ್ಗುಮನೆ
|

Updated on: Oct 05, 2024 | 2:40 PM

Share

‘ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಅವರು ನಟಿಸಿದ್ದಾರೆ. ಈ ಸಿನಿಮಾನ ಟಿಜಿ ಜ್ಞಾನವೇಲ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಅಕ್ಟೋಬರ್ 10ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ‘ಜೈಲರ್’ ಬಳಿಕ ರಜನಿಕಾಂತ್ ಹೀರೋ ಆಗಿ ತೆರೆಮೇಲೆ ಬರುತ್ತಿರುವ ಸಿನಿಮಾ ಇದು. ಈ ಕಾರಣದಿಂದಲೂ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾಗಾಗಿ ರಜನಿಕಾಂತ್ ಪಡೆದ ಸಂಭಾವನೆ ವಿಚಾರ ಶಾಕಿಂಗ್ ಎನಿಸಿದೆ.

ರಜನಿಕಾಂತ್ ಅವರು ‘ವೆಟ್ಟೈಯಾನ್’ ಚಿತ್ರಕ್ಕಾಗಿ ಬರೋಬ್ಬರಿ 125 ಕೋಟಿ ರೂಪಾಯಿ ಪಡೆದಿದ್ದಾರಂತೆ. ಅಮಿತಾಭ್ ಬಚ್ಚನ್ ಅವರು ಈ ಚಿತ್ರಕ್ಕಾಗಿ 7 ಕೋಟಿ ರೂಪಾಯಿ ಪಡೆದಿದ್ದಾರೆ. ಫಹಾದ್ ಫಾಸಿಲ್ ಅವರ ಸಂಭಾವನೆ 3 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ. ಮಂಜು ವಾರಿಯರ್ ಸಂಭಾವನೆ 85 ಲಕ್ಷ ರೂಪಾಯಿ. ರಿತಿಕಾ ಸಿಂಗ್ ಅವರಿಗೆ 25 ಲಕ್ಷ ರೂಪಾಯಿ ಪಾವತಿಸಲಾಗಿದೆ.

‘ಜೈಲರ್’ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಾಣ ಮಾಡಿತ್ತು. ಈ ಚಿತ್ರಕ್ಕೆ ರಜನಿಕಾಂತ್ 100 ಕೋಟಿ ರೂಪಾಯಿ ಪಡೆದಿದ್ದರು. ‘ವೆಟ್ಟೈಯಾನ್’ ಚಿತ್ರವನ್ನು ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಅಡಿಯಲ್ಲೇ ನಿರ್ಮಾಣ ಆಗುತ್ತಿದ್ದು, ಇದಕ್ಕಾಗಿ ರಜನಿಕಾಂತ್ 125 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ.

ರಜನಿಕಾಂತ್ ಎನ್​ಕೌಂಟರ್ ಸ್ಪೆಷಲಿಸ್ಟ್ ಆಗಿರುತ್ತಾರೆ. ಅವರು ಕ್ರಿಮಿನಿಲ್​ಗಳ ವಿರುದ್ಧ ತಿರುಗಿ ಬೀಳುತ್ತಾರೆ. ಇದು ಸಿನಿಮಾದ ಕಥೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದ್ದು, ಮಿಶ್ರ ಪ್ತಿಕ್ರಿಯೆ ಪಡೆದುಕೊಂಡಿದೆ.  ‘ವೆಟ್ಟೈಯಾನ್’ ಸಿನಿಮಾ ವಿದೇಶದಲ್ಲೂ ಒಳ್ಳೆಯ ಬಿಸ್ನೆಸ್ ಮಾಡುತ್ತಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯಿಂದ ಮನೆಗೆ ಮರಳಿದ ರಜನಿಕಾಂತ್​; ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಸೂಪರ್ ಸ್ಟಾರ್

ರಜನಿಕಾಂತ್ ಅವರ ನಟನೆಯ ‘ಜೈಲರ್’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಸಿನಿಮಾ ಭರ್ಜರಿ ಗೆಲುವು ಕಂಡಿತು. ಈ ಚಿತ್ರದಲ್ಲಿ ರಜನಿ ಅವರ ಆ್ಯಕ್ಷನ್ ಪ್ರೇಕ್ಷಕರಿಗೆ ಇಷ್ಟ ಆಗಿತ್ತು. ಈಗ ‘ವೆಟ್ಟೈಯಾನ್’ ಚಿತ್ರದಿಂದ ಜನರು ಇದೇ ರೀತಿಯದ್ದನ್ನು ನಿರೀಕ್ಷೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ