AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಬಾಬು ನಾಯ್ಡು ಪ್ರಮಾಣವಚನ ಕಾರ್ಯಕ್ರಮದಲ್ಲಿ ಆಪ್ತತೆಯಿಂದ ಮಾತನಾಡಿದ ರಜನಿ-ಚಿರಂಜೀವಿ

ರಜನಿಕಾಂತ್ ಹಾಗೂ ಚಿರಂಜೀವಿ ಹಲವು ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. ಇವರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಚಂದ್ರಬಾಬು ನಾಯ್ಡು ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಜನಿಕಾಂತ್ ಹಾಗೂ ಚಿರಂಜೀವಿ ಅವರು ವೇದಿಕೆ ಮೇಲೆ ಅಕ್ಕ-ಪಕ್ಕ ಕುಳಿತಿದ್ದರು. ಈ ವೇಳೆ ರಜನಿಕಾಂತ್ ಕೈನ ಚಿರಂಜೀವಿ ಅವರು ಹಿಡಿದಿದ್ದಾರೆ.

ಚಂದ್ರಬಾಬು ನಾಯ್ಡು ಪ್ರಮಾಣವಚನ ಕಾರ್ಯಕ್ರಮದಲ್ಲಿ ಆಪ್ತತೆಯಿಂದ ಮಾತನಾಡಿದ ರಜನಿ-ಚಿರಂಜೀವಿ
ರಜನಿ-ಚಿರಂಜೀವಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 13, 2024 | 10:54 AM

Share

ಚಂದ್ರಬಾಬು ನಾಯ್ಡು (Chandrababu Naidu) ಅವರ ಪ್ರಮಾಣವಚನ ಕಾರ್ಯಕ್ರಮ ವಿಜಯವಾಡದಲ್ಲಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ತಮಿಳು ಸೂಪರ್​ಸ್ಟಾರ್ ರಜನಿಕಾಂತ್ ಅವರು ಚೆನ್ನೈನಿಂದ ವಿಜಯವಾಡಕ್ಕೆ ಆಗಮಿಸಿದ್ದಾರೆ. ರಜನಿಕಾಂತ್ ಹಾಗೂ ಚಿರಂಜೀವಿ ಅವರು ವೇದಿಕೆ ಮೇಲೆ ಕೈ ಕೈ ಹಿಡಿದುಕೊಂಡು ಚರ್ಚೆ ಮಾಡುತ್ತಿರುವುದು ಕಂಡು ಬಂತು. ಈ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಜನಿಕಾಂತ್ ಹಾಗೂ ಚಿರಂಜೀವಿ ಅವರು ವೇದಿಕೆ ಮೇಲೆ ಅಕ್ಕ-ಪಕ್ಕ ಕುಳಿತಿದ್ದರು. ಈ ವೇಳೆ ರಜನಿಕಾಂತ್ ಕೈನ ಚಿರಂಜೀವಿ ಅವರು ಹಿಡಿದಿದ್ದಾರೆ. ಇಬ್ಬರೂ ಪರಸ್ಪರ ಚರ್ಚೆ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ರಜನಿಕಾಂತ್ ಜೊತೆ ಅವರ ಪತ್ನಿ ಲತಾ ಕೂಡ ಇದ್ದರು. ವೇದಿಕೆ ಮೇಲೆ ಇನ್ನೂ ಪ್ರಮಾಣವಚನ ಕಾರ್ಯಕ್ರಮ ಆರಂಭ ಆಗಿರಲಿಲ್ಲ. ಆಗ ಚಿರಂಜೀವಿ ಜೊತೆ ರಜನಿಕಾಂತ್ ಚರ್ಚೆ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ನಂದಮೂರಿ ಬಾಲಕೃಷ್ಣ, ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಇದ್ದರು.

ಈ ಬಾರಿ ಆಂಧ್ರ ಪ್ರದೇಶ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ 135 ಸ್ಥಾನಗಳನ್ನು ಪಡೆದಿದೆ. ಈ ಮೂಲಕ ಚಂದ್ರಬಾಬು ನಾಯ್ಡು ಆಂಧ್ರದ ಸಿಎಂ ಆಗುತ್ತಿದ್ದಾರೆ. ಅವರು ಸಿಎಂ ಆಗಿರುವುದು ನಾಲ್ಕನೇ ಬಾರಿಗೆ. ಗವರ್ನರ್ ಎಸ್ ಅಬ್ದುಲ್ ನಜೀರ್ ಅವರು ಪ್ರತಿಜ್ಞಾವಿಧಿ ಮಾಡಿಸಿದರು. ಈ ವಿಡಿಯೋಗಳು ವೈರಲ್ ಆಗುತ್ತಿದೆ. ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಆಗಮಿಸಿದ್ದರು.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ರಜನಿಕಾಂತ್; ಅದೊಂದು ಕನಸು ಎಲ್ಲವನ್ನೂ ಬದಲಿಸಿತು 

ರಜನಿಕಾಂತ್ ಅವರು ಈಗ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಅವರ ನಟನೆಯ ‘ವೆಟ್ಟೈಯನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಟಿಜಿ ಜ್ಞಾನವೇಲ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಅಕ್ಟೋಬರ್​ನಲ್ಲಿ ರಿಲೀಸ್ ಆಗೋ ಸಾಧ್ಯತೆ ಇದೆ. ಈ ಚಿತ್ರದ ಬಜೆಟ್ 160 ಕೋಟಿ ರೂಪಾಯಿ ಎನ್ನಲಾಗಿದೆ. ಇದಾದ ಬಳಿಕ ಅವರು ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆ ಸಿನಿಮಾ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:08 pm, Wed, 12 June 24

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ