AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ದಂತಕತೆ ಕಪಿಲ್ ದೇವ್​ ಜೊತೆ ರಜನೀಕಾಂತ್ ನಟನೆ: ಸಿನಿಮಾ ಯಾವುದು?

Rajinikanth-Kapil Dev: ನಟ ರಜನೀಕಾಂತ್ ಹಾಗೂ ಕಪಿಲ್ ದೇವ್ ಒಟ್ಟಿಗೆ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ. ಈ ವಿಷಯವನ್ನು ಸ್ವತಃ ರಜನೀಕಾಂತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕ್ರಿಕೆಟ್ ದಂತಕತೆ ಕಪಿಲ್ ದೇವ್​ ಜೊತೆ ರಜನೀಕಾಂತ್ ನಟನೆ: ಸಿನಿಮಾ ಯಾವುದು?
ರಜನೀಕಾಂತ್-ಕಪಿಲ್ ದೇವ್
ಮಂಜುನಾಥ ಸಿ.
|

Updated on: May 18, 2023 | 9:40 PM

Share

ಕ್ರಿಕೆಟ್ (Cricket) ಹಾಗೂ ಸಿನಿಮಾ (Cinema) ಪರಸ್ಪರ ಹತ್ತಿರದ ಸಂಬಂಧ ಹೊಂದಿವೆ. ಕ್ರಿಕೆಟಿಗರು ಸಿನಿಮಾ ಮಂದಿಯನ್ನು ಮದುವೆಯಾಗುವುದು ಬಹು ದಶಕಗಳಿಂದಲೂ ನಡೆದು ಬಂದಿದೆ. ಕ್ರಿಕೆಟ್ ತಾರೆಯರು ಸಿನಿಮಾ ನಟರಾಗುವುದು, ಸಿನಿಮಾ ತಾರೆಯರು ಕ್ರಿಕೆಟ್ ಪಂದ್ಯಾವಳಿಗಳನ್ನು ಆಡುವುದು ಸಹ ಸಾಮಾನ್ಯವೇ. ಈ ಹಿಂದೆ ಕೆಲವಾರು ಕ್ರಿಕೆಟಿಗರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೆಲವು ಕ್ರಿಕೆಟರ್​ಗಳ ಜೀವನ ಸಿನಿಮಾ ಸಹ ಆಗಿದೆ. ಅವರಲ್ಲಿ ಕಪಿಲ್ ದೇವ್ (Kapil Dev) ಸಹ ಒಬ್ಬರು. ಆದರೆ ಇದೀಗ ಸ್ವತಃ ಕಪಿಲ್ ದೇವ್ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ ಅದೂ ರಜನೀಕಾಂತ್ (Rajinikanth) ಜೊತೆ!

ಕಪಿಲ್ ದೇವ್​ಗೆ ಸಿನಿಮಾ ಹೊಸತಲ್ಲ. ಈ ಹಿಂದೆ ಕೆಲವು ಸಿನಿಮಾಗಳಲ್ಲಿ ಕಪಿಲ್ ದೇವ್ ಕಾಣಿಸಿಕೊಂಡಿದ್ದಾರೆ. ಅವರ ನಾಯಕತ್ವದಲ್ಲಿ 1983 ರಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದ ಘಟನೆ 83 ಹೆಸರಿನಲ್ಲಿ ಸಿನಿಮಾ ಆಗಿದೆ. ಸಿನಿಮಾದಲ್ಲಿ ಅವರ ಪಾತ್ರಕ್ಕೆ ಪ್ರಧಾನ ಪಾತ್ರ. ಇದೀಗ ರಜನೀಕಾಂತ್​ರ ಹೊಸ ಸಿನಿಮಾ ಲಾಲ್ ಸಲಾಮ್​ನಲ್ಲಿ ಕಪಿಲ್ ದೇವ್ ನಟಿಸುತ್ತಿದ್ದಾರೆ. ಈ ಬಗ್ಗೆ ಸ್ವತಃ ರಜನೀಕಾಂತ್ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

ಕಪಿಲ್ ದೇವ್ ಹಾಗೂ ತಾವು ಒಟ್ಟಿಗೆ ನಿಂತಿರುವ ಚಿತ್ರ ಹಂಚಿಕೊಂಡಿರುವ ನಟ ರಜನೀಕಾಂತ್, ”ಭಾರತಕ್ಕೆ ಮೊದಲ ಬಾರಿಗೆ ಕ್ರಿಕೆಟ್ ವಿಶ್ವಕಪ್ ಗೆದ್ದು ಹೆಮ್ಮೆ ತಂದ ಲೆಜೆಂಡರಿ, ಅತ್ಯಂತ ಗೌರವಾನ್ವಿತ ಮತ್ತು ಅದ್ಭುತ ವ್ಯಕ್ತಿತ್ವದ ಕಪಿಲ್‌ದೇವ್ ಅವರೊಂದಿಗೆ ಕೆಲಸ ಮಾಡುವುದು ನನಗೆ ಗೌರವ ತಂದಿದೆ” ಎಂದು ಬರೆದುಕೊಂಡಿದ್ದಾರೆ. ಇಬ್ಬರೂ ಯಾವುದೋ ಕ್ರಿಕೆಟ್ ಗ್ರೌಂಡ್​ನಲ್ಲಿ ನಿಂತುಕೊಂಡಿರುವ ಚಿತ್ರವನ್ನು ರಜನೀಕಾಂತ್ ಹಂಚಿಕೊಂಡಿದ್ದಾರೆ. ಇಬ್ಬರು ಲೆಜೆಂಡ್​ಗಳು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದನ್ನು ಅಭಿಮಾನಿಗಳು ಸ್ವಾಗತಿಸಿದ್ದಾರೆ, ಸಂಭ್ರಮಿಸುತ್ತಿದ್ದಾರೆ.

ರಜನೀಕಾಂತ್ ಪ್ರಸ್ತುತ ಲಾಲ್ ಸಲಾಮ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾದ ಪೋಸ್ಟರ್ ಒಂದು ಈಗಾಗಲೇ ಬಿಡುಗಡೆ ಆಗಿದೆ. ಸಿನಿಮಾವು ತಮಿಳುನಾಡಿನ ಕ್ರಿಕೆಟ್ ಬೋರ್ಡ್​ನಲ್ಲಿ ಜಾತಿ ರಾಜಕೀಯ ಕುರಿತಾದ ಕತೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ. ಜೊತೆಗೆ ತಮಿಳುನಾಡು ಮಾಫಿಯಾ ಕತೆಯನ್ನು ಸಹ ಸಿನಿಮಾ ಒಳಗೊಂಡಿದೆ. ಸಿನಿಮಾದಲ್ಲಿ ಮುಸ್ಲಿಂ ಮಾಫಿಯಾ ಡಾನ್ ಪಾತ್ರದಲ್ಲಿ ರಜನೀಕಾಂತ್ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:ರಜನೀಕಾಂತ್ ಸೂಪರ್ ಸ್ಟಾರ್ ಅಲ್ಲ, ಚಿರಂಜೀವಿ ನಮ್ಮ ಸೂಪರ್ ಸ್ಟಾರ್: ಪೋಸಾನಿ

ಲಾಲ್ ಸಲಾಮ್ ಸಿನಿಮಾವನ್ನು ರಜನೀಕಾಂತ್ ಪುತ್ರಿ, ಧನುಶ್ ಪತ್ನಿ ಐಶ್ವರ್ಯಾ ನಿರ್ದೇಶನ ಮಾಡುತ್ತಿದ್ದಾರೆ. ಐಶ್ವರ್ಯಾ ಈ ಹಿಂದೆ ‘3’, ವಾಯ್ ರಾಜಾ ವಾಯ್ ಸಿನಿಮಾ ಹಾಗೂ ಸಿನಿಮಾ ವೀರನ್ ಹೆಸರಿನ ಡಾಕ್ಯುಮೆಂಟರಿ ನಿರ್ದೇಶನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ತಂದೆ ರಜನೀಕಾಂತ್​ಗಾಗಿ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಮಕ್ಕಳ ನಿರ್ದೇಶನದ ಸಿನಿಮಾದಲ್ಲಿ ರಜನೀ ನಟಿಸುತ್ತಿರುವುದು ಇದು ಮೊದಲೇನಲ್ಲ. ಮತ್ತೊಬ್ಬ ಮಗಳು ಸೌಂದರ್ಯ ನಿರ್ದೇಶನದ ಕೊಚಾಡಿಯನ್ ಸಿನಿಮಾದಲ್ಲಿ ರಜನೀಕಾಂತ್ ನಟಿಸಿದ್ದರು. ಆ ಸಿನಿಮಾ ಫ್ಲಾಪ್ ಆಗಿತ್ತು.

ರಜನೀಕಾಂತ್ ಈ ವಯಸ್ಸಿನಲ್ಲಿಯೂ ಬಹಳ ಬ್ಯುಸಿ ನಟ. ಇತ್ತೀಚೆಗಷ್ಟೆ ಜೈಲರ್ ಸಿನಿಮಾದ ಚಿತ್ರೀಕರಣವನ್ನು ಅವರು ಮುಗಿಸಿದ್ದಾರೆ. ಈ ಸಿನಿಮಾದಲ್ಲಿ ರಜನೀಕಾಂತ್ ಜೊತೆಗೆ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್, ಮಲಯಾಳಂನ ಮೋಹನ್​ಲಾಲ್, ಹಿಂದಿಯ ಜಾಕಿ ಶ್ರಾಫ್, ತೆಲುಗಿನ ಸುನಿಲ್ ನಟಿಸಿದ್ದಾರೆ. ನಾಯಕಿಯರಾಗಿ ತಮನ್ನಾ ಭಾಟಿಯಾ ಇದ್ದಾರೆ. ಸಿನಿಮಾದಲ್ಲಿ ರಮ್ಯಾ ಕೃಷ್ಣ ಸಹ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ