AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಬಳಿಕ ದೊಡ್ಡ ಘೋಷಣೆ ಮಾಡಿದ ರಜನಿಕಾಂತ್​; ಲೋಕೇಶ್​ ಕನಗರಾಜ್​ ಜತೆ ಸಿನಿಮಾ

ರಜನಿಕಾಂತ್​ ಮತ್ತು ಲೋಕೇಶ್​ ಕನಗರಾಜ್​ ಅವರು ಒಟ್ಟಿಗೆ ಸಿನಿಮಾ ಮಾಡುತ್ತಾರೆ ಎಂಬ ಗಾಸಿಪ್​ ಬಹಳ ದಿನಗಳಿಂದ ಕೇಳಿಬರುತ್ತಿತ್ತು. ಅದೀಗ ನಿಜವಾಗಿದೆ. ಸ್ವತಃ ನಿರ್ಮಾಣ ಸಂಸ್ಥೆಯ ಕಡೆಯಿಂದಲೇ ಈ ಬಗ್ಗೆ ಘೋಷಣೆ ಆಗಿದೆ. ‘ಜೈಲರ್​’ಗೆ ಸಂಗೀತ ನೀಡಿದ ಅನಿರುದ್ಧ್​ ರವಿಚಂದರ್​ ಅವರೇ ‘ತಲೈವರ್ 171’ ಚಿತ್ರಕ್ಕೂ ಸಂಗೀತ ಸಂಯೋಜನೆ ಮಾಡಲಿದ್ದಾರೆ.

‘ಜೈಲರ್’ ಬಳಿಕ ದೊಡ್ಡ ಘೋಷಣೆ ಮಾಡಿದ ರಜನಿಕಾಂತ್​; ಲೋಕೇಶ್​ ಕನಗರಾಜ್​ ಜತೆ ಸಿನಿಮಾ
ರಜನಿಕಾಂತ್​, ಲೋಕೇಶ್​ ಕನಗರಾಜ್​
ಮದನ್​ ಕುಮಾರ್​
|

Updated on: Sep 11, 2023 | 4:14 PM

Share

ನಟ ರಜನಿಕಾಂತ್​ (Rajinikanth) ಅವರಿಗೆ 2023ರ ವರ್ಷ ಸಖತ್​ ಸ್ಪೆಷಲ್​. ಅವರು ನಟಿಸಿದ ‘ಜೈಲರ್​’ ಸಿನಿಮಾ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. 72ನೇ ವಯಸ್ಸಿನಲ್ಲೂ ಅವರು ಆ್ಯಕ್ಷನ್​ ಸಿನಿಮಾ ಮಾಡಿ ಇಷ್ಟು ದೊಡ್ಡ ಗೆಲುವು ಕಂಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಈಗ ರಜನಿಕಾಂತ್​ ಅವರ ಹೊಸ ಸಿನಿಮಾದ ಬಗ್ಗೆ ಅಪ್​ಡೇಟ್​ ಸಿಕ್ಕಿದೆ. ಖ್ಯಾತ ನಿರ್ದೇಶಕ ಲೋಕೇಶ್​ ಕನಗರಾಜ್​ (Lokesh Kanagaraj) ಜೊತೆ ರಜನಿಕಾಂತ್​ ಕೈ ಜೋಡಿಸುತ್ತಿದ್ದಾರೆ. ಇದು ರಜನಿ ನಟನೆಯ 171ನೇ ಸಿನಿಮಾ ಆಗಲಿದೆ. ಇದನ್ನು ತಾತ್ಕಾಲಿಕವಾಗಿ ‘ತಲೈವರ್ 171’ (Thalaivar 171) ಎಂದು ಕರೆಯಲಾಗುತ್ತಿದೆ. ‘ಜೈಲರ್​’ ಚಿತ್ರವನ್ನು ನಿರ್ಮಾಣ ಮಾಡಿದ ‘ಸನ್​ ಪಿಕ್ಚರ್ಸ್​’ ಸಂಸ್ಥೆಯೇ ‘ತಲೈವರ್ 171’ ಸಿನಿಮಾಗೆ ಬಂಡವಾಳ ಹೂಡಲಿದೆ.

ರಜನಿಕಾಂತ್​ ಮತ್ತು ಲೋಕೇಶ್​ ಕನಗರಾಜ್​ ಅವರು ಒಟ್ಟಿಗೆ ಸಿನಿಮಾ ಮಾಡುತ್ತಾರೆ ಎಂಬ ಗಾಸಿಪ್​ ಬಹಳ ದಿನಗಳಿಂದ ಕೇಳಿಬರುತ್ತಿತ್ತು. ಅದೀಗ ನಿಜವಾಗಿದೆ. ಸ್ವತಃ ನಿರ್ಮಾಣ ಸಂಸ್ಥೆಯ ಕಡೆಯಿಂದಲೇ ಈ ಬಗ್ಗೆ ಘೋಷಣೆ ಆಗಿದೆ. ‘ಜೈಲರ್​’ಗೆ ಸಂಗೀತ ನೀಡಿದ ಅನಿರುದ್ಧ್​ ರವಿಚಂದರ್​ ಅವರೇ ‘ತಲೈವರ್ 171’ ಚಿತ್ರಕ್ಕೂ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಅನ್ಬರಿವ್​ ಅವರು ಸಾಹಸ ನಿರ್ದೇಶನ ಮಾಡಲಿದ್ದಾರೆ. ಇದು ಭರ್ಜರಿ ಆ್ಯಕ್ಷನ್​ ಸಿನಿಮಾ ಆಗಿರಲಿದೆ ಎಂದು ಫ್ಯಾನ್ಸ್ ನಿರೀಕ್ಷಿಸುತ್ತಿದ್ದಾರೆ.

ಕಾಲಿವುಡ್​ನಲ್ಲಿ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರಿಗೆ ಸಖತ್​ ಬೇಡಿಕೆ ಇದೆ. ‘ಕೈದಿ’, ‘ವಿಕ್ರಮ್​’ ಮುಂತಾದ ಸೂಪರ್​ ಹಿಟ್​ ಸಿನಿಮಾಗಳನ್ನು ಅವರು ನೀಡಿದ್ದಾರೆ. ಅವರು ಈಗ ದಳಪತಿ ವಿಜಯ್​ ನಟನೆಯ ‘ಲಿಯೋ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಕಥೆ ಒಂದಕ್ಕೊಂದು ಕನೆಕ್ಟ್​ ಆಗಿವೆ. ಆದ್ದರಿಂದ ‘ತಲೈವರ್ 171’ ಸಿನಿಮಾದ ಕಥೆ ಕೂಡ ಈ ಚಿತ್ರಗಳಿಗೆ ಲಿಂಕ್​ ಹೊಂದಿರಲಿದೆ ಎಂದು ಬಹುತೇಕರು ಊಹಿಸುತ್ತಿದ್ದಾರೆ. ಕಾಲಿವುಡ್​ನ ಎಲ್ಲ ದಾಖಲೆಗಳನ್ನು ಈ ಸಿನಿಮಾ ಮುರಿದುಹಾಕಲಿದೆ ಎಂದು ಕೂಡ ಫ್ಯಾನ್ಸ್​ ಹೇಳುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಜನಿಕಾಂತ್

ಇದು ರಜನಿಕಾಂತ್​ ಅವರ ಕೊನೇ ಸಿನಿಮಾ ಆಗಲಿದೆ ಎಂಬ ಗುಮಾನಿ ಕೂಡ ಇದೆ. ‘ತಲೈವರ್ 171’ ಬಳಿಕ ಅವರು ಬೇರೆ ಯಾವುದೇ ಸಿನಿಮಾವನ್ನು ಒಪ್ಪಿಕೊಳ್ಳುವುದಿಲ್ಲ ಎಂಬ ಗಾಸಿಪ್​ ಸಹ ಹರಿದಾಡಿದೆ. ಒಂದು ವೇಳೆ ಅದು ನಿಜವೇ ಹೌದಾದರೆ ಈ ಸಿನಿಮಾದಲ್ಲಿ ರಜನಿಕಾಂತ್​ ಜೊತೆ ಸೂರ್ಯ, ಕಮಲ್​ ಹಾಸನ್​, ದಳಪತಿ ವಿಜಯ್​ ಮುಂತಾದವರು ನಟಿಸಲಿ ಎಂದು ಅಭಿಮಾನಿಗಳು ಆಸೆ ವ್ಯಕ್ತಪಡಿಸುತ್ತಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!