ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದ ‘ಜೈಲರ್’ ಸಿನಿಮಾ; ಮೊದಲ ದಿನದ ಕಲೆಕ್ಷನ್ ವಿವರ ಇಲ್ಲಿದೆ

Jailer Movie First Day Collection: ‘ಜೈಲರ್’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ನಿರೀಕ್ಷೆಯನ್ನು ಮೀರಿ ಸಿನಿಮಾ ಮೂಡಿ ಬಂದಿದೆ. ‘ಜೈಲರ್’ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ ಮೊದಲ ದಿನ 52 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಕರ್ನಾಟಕದಲ್ಲೂ ಭರ್ಜರಿ ಕಲೆಕ್ಷನ್ ಆಗಿದೆ.

ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದ ‘ಜೈಲರ್’ ಸಿನಿಮಾ; ಮೊದಲ ದಿನದ ಕಲೆಕ್ಷನ್ ವಿವರ ಇಲ್ಲಿದೆ
ರಜನಿ
Follow us
|

Updated on: Aug 11, 2023 | 7:10 AM

ರಜನಿಕಾಂತ್ (Rajinikanth) ನಟನೆಯ ‘ಜೈಲರ್’ ಸಿನಿಮಾ ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ಮೊದಲ ದಿನ ಹಲವು ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಂಡಿದೆ. ತಮಿಳುನಾಡು ಮಾತ್ರವಲ್ಲದೆ ಕರ್ನಾಟಕ, ಆಂಧ್ರ, ತೆಲಂಗಾಣದಲ್ಲೂ ಸಿನಿಮಾಗೆ ಮೆಚ್ಚುಗೆ ಸಿಕ್ಕಿದೆ. ಹೀಗಾಗಿ ಮೊದಲ ದಿನ ಈ ಚಿತ್ರ ಭರ್ಜರಿ ಕಲೆಕ್ಷನ್ ಮಾಡಿದೆ. ತಮಿಳುನಾಡು ಒಂದರಲ್ಲೇ ‘ಜೈಲರ್’ 23 ಕೋಟಿ ರೂಪಾಯಿ ಗಳಿಕೆ ಮಾಡಿದ ಎಂಬುದು ವಿಶೇಷ. ಮುಂದಿನ ದಿನಗಳಲ್ಲಿ ಸಿನಿಮಾ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

‘ಜೈಲರ್’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ನಿರೀಕ್ಷೆಯನ್ನು ಮೀರಿ ಸಿನಿಮಾ ಮೂಡಿ ಬಂದಿದೆ. ‘ಜೈಲರ್’ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ ಮೊದಲ ದಿನ 52 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತಮಿಳುನಾಡಿನಲ್ಲಿ 23 ಕೋಟಿ ರೂಪಾಯಿ, ಕರ್ನಾಟಕದಲ್ಲಿ 11 ಕೋಟಿ ರೂಪಾಯಿ, ಕೇರಳದಲ್ಲಿ 5 ಕೋಟಿ ರೂಪಾಯಿ, ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ 10 ಕೋಟಿ ರೂಪಾಯಿ ಬಾಚಿಕೊಂಡಿದೆ. ಉಳಿದ ರಾಜ್ಯಗಳಿಂದ 3 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ಮೂಲಕ ಸಿನಿಮಾ ಹಲವು ದಾಖಲೆ ಬರೆದಿದೆ.

ತಮಿಳುನಾಡಿನಲ್ಲಿ 2023ರಲ್ಲಿ ದೊಡ್ಡ ಓಪನಿಂಗ್ ಪಡೆದ ಸಿನಿಮಾ ಎಂಬ ಹೆಗ್ಗಳಿಕೆ ‘ಜೈಲರ್’ ಚಿತ್ರಕ್ಕೆ ಸಿಕ್ಕಿದೆ. ಕೇರಳದಲ್ಲೂ ಈ ಸಿನಿಮಾ ದೊಡ್ಡ ಓಪನಿಂಗ್ ಪಡೆದಿದೆ. ಮೋಹನ್​ಲಾಲ್ ನಟಿಸಿದ್ದಾರೆ ಎಂಬ ಕಾರಣಕ್ಕೆ ಕೇರಳದಲ್ಲಿ ಸಿನಿಮಾಗೆ ಭರ್ಜರಿ ಕಲೆಕ್ಷನ್ ಆಗಿದೆ. ಕರ್ನಾಟಕದಲ್ಲೂ ಸಿನಿಮಾ ಅಬ್ಬರಿಸಿದೆ. ಶಿವರಾಜ್​ಕುಮಾರ್ ಈ ಚಿತ್ರದಲ್ಲಿ ನಟಿಸಿರೋದು ಸಿನಿಮಾಗೆ ಮತ್ತಷ್ಟು ಬಲ ನೀಡಿದೆ.

ಇದನ್ನೂ ಓದಿ: Jailer Movie Review: ಇದು ಮಾಸ್ ಮಸಾಲ ‘ಜೈಲರ್’; ಇಷ್ಟವಾಗುತ್ತೆ ರಜನಿ, ಶಿವಣ್ಣನ ಖದರ್

ಶನಿವಾರ (ಆಗಸ್ಟ್ 12) ಹಾಗೂ ಭಾನುವಾರ (ಆಗಸ್ಟ್ 13) ಚಿತ್ರ ಒಳ್ಳೆಯ ಗಳಿಕೆ ಮಾಡಲಿದೆ. ಆಗಸ್ಟ್ 15ರಂದು ಸರ್ಕಾರಿ ರಜೆ ಇರಲಿದೆ. ಅಂದು ಕೂಡ ಸಿನಿಮಾ ಒಳ್ಳೆಯ ಗಳಿಕೆ ಮಾಡಲಿದೆ. ಹೀಗಾಗಿ, ಚಿತ್ರದ ಒಟ್ಟಾರೆ ಕಲೆಕ್ಷನ್ ನೂರಾರು ಕೋಟಿ ರೂಪಾಯಿ ಆಗಲಿದೆ. ‘ಜೈಲರ್’ ಚಿತ್ರದಲ್ಲಿ ರಜನಿಕಾಂತ್, ಶಿವರಾಜ್​ಕುಮಾರ್, ಮೋಹನ್​ಲಾಲ್, ಜಾಕಿ ಶ್ರಾಫ್, ತಮನ್ನಾ ಮೊದಲಾದವರು ನಟಿಸಿದ್ದಾರೆ. ದಕ್ಷಿಣ ಭಾರತದ ಪ್ರಮುಖ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ