AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜೊತೆ ‘ಜೈಲರ್’ ವೀಕ್ಷಿಸಲಿದ್ದಾರೆ ರಜನಿ; ಅಯೋಧ್ಯೆಗೂ ಭೇಟಿ ನೀಡಲಿರುವ ತಲೈವಾ

ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಅವರನ್ನು ರಜನಿಕಾಂತ್ ಅವರು ರಾಜಭವನದಲ್ಲಿ ಭೇಟಿ ಮಾಡಿದ್ದಾರೆ. ಈ ಭೇಟಿಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  ಇನ್ನು ರಜನಿಕಾಂತ್ ಅವರು ಭಾನುವಾರ (ಆಗಸ್ಟ್ 19) ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜೊತೆ ‘ಜೈಲರ್’ ವೀಕ್ಷಿಸಲಿದ್ದಾರೆ ರಜನಿ; ಅಯೋಧ್ಯೆಗೂ ಭೇಟಿ ನೀಡಲಿರುವ ತಲೈವಾ
ಯೋಗಿ-ರಜನಿ
TV9 Web
| Edited By: |

Updated on:Aug 19, 2023 | 3:10 PM

Share

ರಜನಿಕಾಂತ್ ನಟನೆಯ ಜೈಲರ್’ ಸಿನಿಮಾ ಕೇವಲ ದಕ್ಷಿಣ ಮಾತ್ರವಲ್ಲದೆ ಉತ್ತರ ಭಾರತದಲ್ಲೂ ಸಖತ್ ಸದ್ದು ಮಾಡುತ್ತಿದೆ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಗಳಿಕೆ ಮಾಡುವ ಸನಿಹದಲ್ಲಿದೆ. ಸದ್ಯ ರಜನಿಕಾಂತ್ (Rajinikanth) ಅವರು ಉತ್ತರ ಪ್ರದೇಶದಲ್ಲಿದ್ದಾರೆ. ಲಖನೌನಲ್ಲಿ ತಂಗಿರುವ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆ ‘ಜೈಲರ್’ (Jailer Movie) ವೀಕ್ಷಣೆ ಮಾಡಲಿದ್ದಾರೆ. ಈ ವಿಚಾರವನ್ನು ಸ್ವತಃ ರಜನಿಕಾಂತ್ ಅವರೇ ಖಚಿತಪಡಿಸಿದ್ದಾರೆ.

‘ಜೈಲರ್’ ಚಿತ್ರದಲ್ಲಿ ರಜನಿ ಆ್ಯಕ್ಟಿಂಗ್ ಗಮನ ಸೆಳೆದಿದೆ. ನಿವೃತ್ತ ಜೈಲರ್ ಪಾತ್ರದಲ್ಲಿ ಅವರು ಮೋಡಿ ಮಾಡಿದ್ದಾರೆ. ಮಗನಿಗಾಗಿ ಮಿಡಿಯುವ ತಂದೆಯಾಗಿ ಅವರು ಮಿಂಚಿದ್ದಾರೆ. ಈ ಚಿತ್ರವನ್ನು ಯೋಗಿ ಆದಿತ್ಯನಾಥ್ ಕೂಡ ನೋಡಲಿದ್ದಾರೆ ಅನ್ನೋದು ವಿಶೇಷ. ಈ ಬಗ್ಗೆ ಮಾಹಿತಿ ನೀಡಿರುವ ರಜನಿಕಾಂತ್ ಅವರು, ‘ನಾನು ಸಿಎಂ ಯೋಗಿ ಆದಿತ್ಯನಾಥ್ ಜೊತೆ ಜೈಲರ್ ಸಿನಿಮಾ ವೀಕ್ಷಿಸುತ್ತೇನೆ. ದೇವರ ಆಶೀರ್ವಾದದಿಂದ ಸಿನಿಮಾ ಹಿಟ್ ಆಗಿದೆ’ ಎಂದು ರಜನಿಕಾಂತ್ ಅವರು ಎಎನ್​ಐಗೆ ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಕೂಡ ವಿಶೇಷ ಶೋನಲ್ಲಿ ಭಾಗಿ ಆಗಲಿದ್ದಾರೆ.

ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಅವರನ್ನು ರಜನಿಕಾಂತ್ ಅವರು ರಾಜಭವನದಲ್ಲಿ ಭೇಟಿ ಮಾಡಿದ್ದಾರೆ. ಈ ಭೇಟಿಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  ಇನ್ನು ರಜನಿಕಾಂತ್ ಅವರು ಭಾನುವಾರ (ಆಗಸ್ಟ್ 19) ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ರಜನಿಕಾಂತ್ ಅವರು ಸದ್ಯ ಆಧ್ಯಾತ್ಮದ ಪ್ರವಾಸದಲ್ಲಿದ್ದಾರೆ. ‘ಜೈಲರ್’ ರಿಲೀಸ್​ಗೂ ಮೊದಲೇ ಅವರು ಹಿಮಾಲಯಕ್ಕೆ ತೆರಳಿದ್ದರು. ಪ್ರಮುಖ ಅಧ್ಯಾತ್ಮ ಕೇಂದ್ರಗಳಿಗೆ ಭೇಟಿ ನೀಡಿ ಅವರು ಧ್ಯಾನ ಮಾಡಿದ್ದರು. ಹಲವು ಅಧ್ಯಾತ್ಮ ಗುರುಗಳನ್ನು ಅವರು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಈ ಟ್ರಿಪ್​ನ ಭಾಗವಾಗಿ ಅವರು ಅಯೋಧ್ಯೆಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕೊನೆಗೂ ತಪ್ಪು ಒಪ್ಪಿಕೊಂಡ ‘ಜೈಲರ್’ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್

‘ಜೈಲರ್’ ಚಿತ್ರವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಸನ್ ಪಿಕ್ಚರ್ಸ್ ಚಿತ್ರವನ್ನು ನಿರ್ಮಾಣ ಮಾಡಿದೆ. ಕನ್ನಡದ ನಟ ಶಿವರಾಜ್​ಕುಮಾರ್, ಮಲಯಾಳಂ ಸ್ಟಾರ್ ನಟ ಮೋಹನ್​ಲಾಲ್ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:08 pm, Sat, 19 August 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು