AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ಬರಲಿದೆ ರಜನಿಕಾಂತ್ ಬಯೋಪಿಕ್; ಬಾಲಿವುಡ್ ನಿರ್ಮಾಪಕನ ಬಂಡವಾಳ

ಬಾಲಿವುಡ್​ನಲ್ಲಿ ಹಲವು ಸೂಪರ್ ಹಿಟ್​ ಹಾಗೂ ದೊಡ್ಡ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದವರು ಸಾಜಿದ್ ನಾಡಿಯಾದ್ವಾಲ. ಅವರು ರಜನಿಕಾಂತ್ ಬಯೋಪಿಕ್​ಗೆ ಬಂಡವಾಳ ಹೂಡುತ್ತಿದ್ದಾರೆ. ಭಾರತದ ಪ್ರಮುಖ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ ಎಂದು ವರದಿ ಆಗಿದೆ.

Rajinikanth: ಬರಲಿದೆ ರಜನಿಕಾಂತ್ ಬಯೋಪಿಕ್; ಬಾಲಿವುಡ್ ನಿರ್ಮಾಪಕನ ಬಂಡವಾಳ
ರಜಿನಿಕಾಂತ್
Follow us
ರಾಜೇಶ್ ದುಗ್ಗುಮನೆ
|

Updated on: May 01, 2024 | 12:01 PM

ರಜನಿಕಾಂತ್ (Rajinikanth) ಅವರು ಬೆಂಗಳೂರಿನಲ್ಲಿ ಹುಟ್ಟಿ ಬೆಳೆದವರು. ಬೆಂಗಳೂರಿನಲ್ಲಿ ಅವರು ಬಸ್ ಕಂಡಕ್ಟರ್ ಆಗಿದ್ದರು. ಆ ಬಳಿಕ ಅವರು ರಾತ್ರೋರಾತ್ರಿ ಚೆನ್ನೈಗೆ ಹೋದರು. ಅಲ್ಲಿ ಸ್ಟಾರ್ ಹೀರೋ ಆದರು. ಕನ್ನಡ ಚಿತ್ರಗಳಲ್ಲೂ ರಜನಿಕಾಂತ್ ನಟಿಸಿದ್ದಾರೆ. ಅವರ ಜೀವನ ಅನೇಕರಿಗೆ ಸ್ಫೂರ್ತಿ. ಇದನ್ನು ತೆರೆಮೇಲೆ ತರುವ ಪ್ರಯತ್ನಗಳು ನಡೆಯುತ್ತಿವೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಬಾಲಿವುಡ್​ನಲ್ಲಿ ಹಲವು ಸೂಪರ್ ಹಿಟ್​ ಹಾಗೂ ದೊಡ್ಡ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದವರು ಸಾಜಿದ್ ನಾಡಿಯಾದ್ವಾಲ. ಅವರು ರಜನಿಕಾಂತ್ ಬಯೋಪಿಕ್​ಗೆ ಬಂಡವಾಳ ಹೂಡುತ್ತಿದ್ದಾರೆ. ಭಾರತದ ಪ್ರಮುಖ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ ಎಂದು ವರದಿ ಆಗಿದೆ.

ರಜನಿಕಾಂತ್ ಬಯೋಪಿಕ್ ಸದ್ಯ ಆರಂಭದ ಹಂತದಲ್ಲಿದೆ. ಈ ಚಿತ್ರವನ್ನು ಯಾರು ನಿರ್ದೇಶನ ಮಾಡಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ರಜನಿಕಾಂತ್ ಬಯೋಪಿಕ್ ಎಂದಾಗ ಕುತೂಹಲ ಜಾಸ್ತಿ. ಹೀಗಾಗಿ, ಹೀರೋ ಪಾತ್ರದಲ್ಲಿ ನಟಿಸೋದು ಯಾರು ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ರಜನಿಕಾಂತ್ ಅಳಿಯ ಧನುಷ್ ಅವರು ಮುಖ್ಯಭೂಮಿಕೆಯಲ್ಲಿ ನಟಿಸಲಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.

ರಜನಿಕಾಂತ್ ಬಯೋಪಿಕ್ ಮಾಡಬೇಕು ಎಂದರೆ ಸಾಕಷ್ಟು ಸಿದ್ಧತೆ ಬೇಕು. ರಜನಿಕಾಂತ್​ನ ಮಾತನಾಡಿಸಿ ಹಳೆಯ ಘಟನೆಗಳ ಬಗ್ಗೆ ಚರ್ಚಿಸಬೇಕು. ಇದಾದ ಬಳಿಕ ಸ್ಕ್ರಿಪ್ಟ್ ಕೆಲಸಗಳನ್ನು ಮಾಡಬೇಕು. ಇದಕ್ಕೆ ಸಾಕಷ್ಟು ಸಮಯ ಹಿಡಿಯಲಿದೆ. 2025ರ ವೇಳೆಗೆ ಸಿನಿಮಾ ಸೆಟ್ಟೇರಬಹುದು ಎನ್ನಲಾಗುತ್ತಿದೆ. ರೆಟ್ರೋ ಕಾಲದ ಬೆಂಗಳೂರು ಹಾಗೂ ಚೆನ್ನೈನ ಮರುಸೃಷ್ಟಿ ಮಾಡುವುದು ಕೂಡ ತಂಡಕ್ಕೆ ದೊಡ್ಡ ಚಾಲೆಂಜ್.

ಇದನ್ನೂ ಓದಿ: ನಿರಾಸೆ ಮೂಡಿಸಿತಾ ರಜನಿಕಾಂತ್ ನಟನೆಯ ‘ಕೂಲಿ’ ಟೀಸರ್? ಇಲ್ಲಿವೆ ಕಾರಣ

ಸಾಜಿದ್ ನಾಡಿಯಾದ್ವಾಲ ಅವರು ಸದ್ಯ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸಲ್ಮಾನ್ ಖಾನ್ ಹೀರೋ. ಸಿನಿಮಾದ ಪಾತ್ರವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ