AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth Birthday: 72ನೇ ವರ್ಷದ ಬರ್ತ್​ಡೇ ಸಂಭ್ರಮದಲ್ಲಿ ಸೂಪರ್​ ಸ್ಟಾರ್​ ರಜನಿಕಾಂತ್​; ಫ್ಯಾನ್ಸ್​ಗೆ ‘ಬಾಬಾ’ ಗಿಫ್ಟ್​

Happy Birthday Rajinikanth: ಇಂದಿಗೂ ರಜನಿಕಾಂತ್​ ಅವರು ‘ಸೂಪರ್​ ಸ್ಟಾರ್​’ ಆಗಿ ತಮ್ಮ ಚಾರ್ಮ್​ ಉಳಿಸಿಕೊಂಡಿದ್ದಾರೆ. 72ನೇ ವಯಸ್ಸಿನಲ್ಲೂ ​ಅವರ ಉತ್ಸಾಹ ತಗ್ಗಿಲ್ಲ.

Rajinikanth Birthday: 72ನೇ ವರ್ಷದ ಬರ್ತ್​ಡೇ ಸಂಭ್ರಮದಲ್ಲಿ ಸೂಪರ್​ ಸ್ಟಾರ್​ ರಜನಿಕಾಂತ್​; ಫ್ಯಾನ್ಸ್​ಗೆ ‘ಬಾಬಾ’ ಗಿಫ್ಟ್​
ರಜನಿಕಾಂತ್
TV9 Web
| Edited By: |

Updated on: Dec 12, 2022 | 7:37 AM

Share

ಖ್ಯಾತ ನಟ ರಜನಿಕಾಂತ್​ (Rajinikanth) ಅವರು ಇಂದು (ಡಿ.12) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. 72ನೇ ವರ್ಷದ ಬರ್ತ್​ಡೇ ಪ್ರಯುಕ್ತ ಎಲ್ಲರೂ ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಅಭಿಮಾನಿಗಳಿಗೆ ಈ ದಿನ ನಿಜಕ್ಕೂ ಹಬ್ಬವೇ ಸರಿ. ತಮ್ಮ ಹೆಚ್ಚಿನ ನಟನ ಜನ್ಮದಿನವನ್ನು (Rajinikanth Birthday) ಫ್ಯಾನ್ಸ್​ ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಅವರ ಸಂಭ್ರಮವನ್ನು ಇಮ್ಮಡಿಗೊಳಿಸಲು ರಜನಿಕಾಂತ್​ ನಟನೆಯ ‘ಬಾಬಾ’ ಸಿನಿಮಾ (Baba Movie) ಮರು ಬಿಡುಗಡೆ ಆಗಿದೆ. ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡುವ ಮೂಲಕ ತಲೈವಾ ಅಭಿಮಾನಿಗಳು ಎಂಜಾಯ್​ ಮಾಡುತ್ತಿದ್ದಾರೆ. ಆಪ್ತರು ಮತ್ತು ಸೆಲೆಬ್ರಿಟಿಗಳು ಕೂಡ ರಜನಿಕಾಂತ್​ ಬರ್ತ್​ಡೇಗೆ ಶುಭ ಕೋರುತ್ತಿದ್ದಾರೆ. ಅವರ ಮುಂಬರುವ ಸಿನಿಮಾಗಳು ಸೂಪರ್​ ಹಿಟ್​ ಆಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಭಾರತೀಯ ಚಿತ್ರರಂಗಕ್ಕೆ ರಜನಿಕಾಂತ್ ನೀಡಿದ ಕೊಡುಗೆ ಅಪಾರ. ಕಳೆದ 5 ದಶಕಗಳಿಂದಲೂ ಅವರು ಜನರನ್ನು ರಂಜಿಸುತ್ತಾ ಬಂದಿದ್ದಾರೆ. 72ನೇ ವಯಸ್ಸಿನಲ್ಲೂ ರಜನಿಕಾಂತ್​ ಅವರ ಉತ್ಸಾಹ ತಗ್ಗಿಲ್ಲ. ಇಂದಿಗೂ ‘ಸೂಪರ್​ ಸ್ಟಾರ್​’ ಆಗಿ ತಮ್ಮ ಚಾರ್ಮ್​ ಉಳಿಸಿಕೊಂಡಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ. ‘ಜೈಲರ್​’, ‘ಲಾಲ್​ ಸಲಾಂ’ ಮುಂತಾದ ಸಿನಿಮಾಗಳು ರಜನಿಕಾಂತ್​ ಕೈಯಲ್ಲಿವೆ.

ಬರ್ತ್​ಡೇ ಪ್ರಯುಕ್ತ ‘ಬಾಬಾ’ ಮರುಬಿಡುಗಡೆ:

ಇದನ್ನೂ ಓದಿ
Image
Jailer: ಶಿವಣ್ಣ-ರಜನಿಕಾಂತ್​ ಸಿನಿಮಾಗೆ ‘ಜೈಲರ್​’ ಶೀರ್ಷಿಕೆ: ಅಭಿಮಾನಿಗಳಲ್ಲಿ ಕ್ರೇಜ್​ ಹೆಚ್ಚಿಸಿದ ಪೋಸ್ಟರ್​
Image
ರಜನಿಕಾಂತ್​ಗೆ ನಾಯಕಿ ಆದ ಐಶ್ವರ್ಯಾ ರೈ; ಹೊಸ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ
Image
ಡಿವೋರ್ಸ್​ ಬಳಿಕ ರಜನಿ ಪುತ್ರಿಗೆ ಮತ್ತೆ ಕಂಟಕ; ಆಸ್ಪತ್ರೆಗೆ ದಾಖಲಾದ ಐಶ್ವರ್ಯಾ ರಜನಿಕಾಂತ್​
Image
ಕೋಟ್ಯಂತರ ರೂ. ಸಂಭಾವನೆ ಪಡೆಯುವ ರಜನಿಕಾಂತ್​ ಎಷ್ಟು ಆಸ್ತಿ ಹೊಂದಿದ್ದಾರೆ? ಇಲ್ಲಿದೆ ವಿವರ..

ಸ್ಟಾರ್​ ನಟರ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾಗಳು ರಿಲೀಸ್​ ಆಗುವುದು ಸಹಜ. ಆದರೆ ರಜನಿಕಾಂತ್​ ಅವರ ಹಳೇ ಸಿನಿಮಾ ‘ಬಾಬಾ’ ಇಂದು ಮರು ಬಿಡುಗಡೆ ಆಗಿದೆ. ಹೊಸ ತಂತ್ರಜ್ಞಾನ ಅಳವಡಿಸಿ, ಹೊಸ ರೂಪದಲ್ಲಿ ಈ ಚಿತ್ರವನ್ನು ತೆರೆಗೆ ತರಲಾಗಿದೆ. ಈ ಸಿನಿಮಾಗಾಗಿ ರಜನಿಕಾಂತ್​ ಅವರು ಹೊಸದಾಗಿ ಡಬ್ಬಿಂಗ್​ ಕೂಡ ಮಾಡಿದ್ದಾರೆ. ಈ ಚತ್ರದಲ್ಲಿ ಅವರಿಗೆ ಎರಡು ಶೇಡ್​ನ ಪಾತ್ರ ಇದೆ.

ಇದನ್ನೂ ಓದಿ: Puneeth Rajkumar: ರಜನಿಕಾಂತ್​ ಮೊದಲ ಸಲ ಪುನೀತ್​ ಅವರನ್ನು ನೋಡಿದ್ದು ಎಲ್ಲಿ? ದೇವರ ಸನ್ನಿಧಿಯ ಆ ಘಟನೆಯೇ ರೋಮಾಂಚಕ

ರಜನಿಗೆ ಆಪ್ತವಾದ ಸಿನಿಮಾ ‘ಬಾಬಾ’:

2002ರಲ್ಲಿ ತೆರೆಕಂಡಿದ್ದ ‘ಬಾಬಾ’ ಸಿನಿಮಾ ಹೀನಾಯವಾಗಿ ಸೋತಿತ್ತು. ವಿಶೇಷ ಏನೆಂದರೆ ಆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು ಸ್ವತಃ ರಜನಿಕಾಂತ್​! ನಿರ್ಮಾಣದ ಜವಾಬ್ದಾರಿ ಕೂಡ ಅವರದ್ದೇ. ಹಾಗಿದ್ದರೂ ಕೂಡ ಗಲ್ಲಾಪೆಟ್ಟಿಗೆಯಲ್ಲಿ ‘ಬಾಬಾ’ ಗೆಲ್ಲಲಿಲ್ಲ. ವಿತರಕರಿಗೆ ನಷ್ಟ ಆಗಿದೆ ಎಂದು ರಜನಿಕಾಂತ್​ ಅವರು ತಮ್ಮ ಸ್ವಂತ ಹಣ ನೀಡಿ ನಷ್ಟ ಭರಿಸುವ ಕೆಲಸ ಮಾಡಿದ್ದರು. ಹಾಗಿದ್ದರೂ ಕೂಡ ಇದು ರಜನಿಗೆ ಆಪ್ತವಾದ ಸಿನಿಮಾ. ಯಾಕೆಂದರೆ ಇದು ಅವರು ನಂಬುವ ದೇವರ ಕುರಿತಾಗಿ ಇರುವ ಚಿತ್ರ.

ಇದನ್ನೂ ಓದಿ: Rajinikanth: ‘ಅಪ್ಪು ದೇವರ ಮಗು’ ಎಂದು ಕನ್ನಡದಲ್ಲೇ ಮಾತಾಡಿದ ರಜನಿಕಾಂತ್​; ಮಳೆ ಸುರಿದರೂ ಕದಲಲಿಲ್ಲ ತಲೈವಾ

ಕೌತುಕ ಮೂಡಿಸಿದೆ ‘ಜೈಲರ್​’:

ಹಲವು ಕಾರಣಗಳಿಂದಾಗಿ ‘ಜೈಲರ್​’ ಸಿನಿಮಾ ಹೆಚ್ಚು ನಿರೀಕ್ಷೆ ಹುಟ್ಟುಹಾಕಿದೆ. ಈ ಚಿತ್ರದಲ್ಲಿ ರಜನಿಕಾಂತ್​ ಜೊತೆ ಶಿವರಾಜ್​ಕುಮಾರ್​ ಕೂಡ ನಟಿಸುತ್ತಿರುವುದು ವಿಶೇಷ. ‘ಸನ್​ ಪಿಕ್ಚರ್ಸ್​’ ಮೂಲಕ ಈ ಚಿತ್ರ ಅದ್ದೂರಿಯಾಗಿ ನಿರ್ಮಾಣ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ