Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿ ಬಗ್ಗೆ ತಪ್ಪಾಗಿ ಹೇಳಿ ವಿವಾದ ಸೃಷ್ಟಿಸಿದ ವಿಜಯ್ ದೇವರಕೊಂಡ; ‘ನಿಮ್ಮ ಅಭಿಪ್ರಾಯ ಬೇಕಿಲ್ಲ’ ಎಂದ ಫ್ಯಾನ್ಸ್ 

ವಿಜಯ್​ಗೆ ಇನ್ನುಮುಂದೆ ಒಳ್ಳೆಯ ಆಫರ್​ಗಳು ಬರುವುದಿಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು. ಈ ಬಗ್ಗೆ ವಿಜಯ್​ಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಅವರು ಉತ್ತರಿಸುವಾಗ ರಜನಿಕಾಂತ್ ಹಾಗೂ ಚಿರಂಜೀವಿ ಉದಾಹರಣೆ ನೀಡಿದ್ದಾರೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ರಜನಿ ಬಗ್ಗೆ ತಪ್ಪಾಗಿ ಹೇಳಿ ವಿವಾದ ಸೃಷ್ಟಿಸಿದ ವಿಜಯ್ ದೇವರಕೊಂಡ; ‘ನಿಮ್ಮ ಅಭಿಪ್ರಾಯ ಬೇಕಿಲ್ಲ’ ಎಂದ ಫ್ಯಾನ್ಸ್ 
ರಜನಿ-ವಿಜಯ್
Follow us
ರಾಜೇಶ್ ದುಗ್ಗುಮನೆ
|

Updated on:Aug 22, 2023 | 2:55 PM

ಸೆಲೆಬ್ರಿಟಿಗಳು ಮಾತನಾಡುವಾಗ ಹೆಚ್ಚು ಎಚ್ಚರಿಕೆ ವಹಿಸಬೇಕು. ಇಲ್ಲವಾದಲ್ಲಿ ವಿವಾದಗಳು ಹುಟ್ಟಿಕೊಳ್ಳುತ್ತವೆ. ಈಗ ವಿಜಯ್ ದೇವರಕೊಂಡ ಅವರು ಇದೇ ರೀತಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ರಜನಿ ಫ್ಯಾನ್ಸ್ ವಿಜಯ್ ವಿರುದ್ಧ ಸಿಟ್ಟಿಗೆದ್ದಿದ್ದಾರೆ. ಈ ವಿವಾದದ ಎಫೆಕ್ಟ್ ಅವರ ನಟನೆಯ ‘ಖುಷಿ’ (Kushi Movie) ಚಿತ್ರದ ಕಲೆಕ್ಷನ್  ಮೇಲೆ ಉಂಟಾಗುವ ಎಲ್ಲಾ ಸಾಧ್ಯತೆ ಇದೆ ಎಂದು ಕೆಲವರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಏನಿದು ವಿವಾದ? ವಿಜಯ್ ದೇವರಕೊಂಡ (Vijay Devarakonda) ನಿಜಕ್ಕೂ ಹೇಳಿದ್ದೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ವಿಜಯ್ ದೇವರಕೊಂಡ ಅವರ ನಟನೆಯ ‘ಲೈಗರ್’ ಸಿನಿಮಾ ಹೀನಾಯವಾಗಿ ಸೋತಿದೆ. ಈ ಚಿತ್ರದಿಂದ ವಿಜಯ್ ಅವರ ವೃತ್ತಿ ಜೀವನದ ವೇಗಕ್ಕೆ ತಡೆ ಬಿದ್ದಂತೆ ಆಗಿದೆ. ವಿಜಯ್​ಗೆ ಇನ್ನುಮುಂದೆ ಒಳ್ಳೆಯ ಆಫರ್​ಗಳು ಬರುವುದಿಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು. ಈ ಬಗ್ಗೆ ವಿಜಯ್​ಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಅವರು ಉತ್ತರಿಸುವಾಗ ರಜನಿಕಾಂತ್ ಹಾಗೂ ಚಿರಂಜೀವಿ ಉದಾಹರಣೆ ನೀಡಿದ್ದಾರೆ.

‘ಸೂಪರ್​ಸ್ಟಾರ್​ಗಳು ಹಿಟ್-ಫ್ಲಾಪ್​ಗಳನ್ನೂ ಮೀರಿದವರು. ರಜನಿ ಅವರು ಬ್ಯಾಕ್​ ಟು ಬ್ಯಾಕ್ ಆರು ಫ್ಲಾಪ್ ಸಿನಿಮಾಗಳನ್ನು ನೀಡಬಹುದು. ಆದರೆ, ‘ಜೈಲರ್’ ಅಂಥ ಸಿನಿಮಾ ಮಾಡಿದರೆ 500 ಕೋಟಿ ರೂಪಾಯಿ ಕಲೆಕ್ಷನ್ ಆಗುತ್ತದೆ. ನಾವು ಬಾಯಿಮುಚ್ಚಿಕೊಂಡು ನೋಡಬೇಕು’ ಎಂದಿದ್ದಾರೆ ವಿಜಯ್ ದೇವರಕೊಂಡ. ಚಿರಂಜೀವಿ ಬಗ್ಗೆ ಮಾತನಾಡಿರುವ ಅವರು, ‘ಚಿರಂಜೀವಿ ಕೂಡ ಬ್ಯಾಕ್ ಟು ಬ್ಯಾಕ್ ಫ್ಲಾಪ್ ನೀಡಬಹುದು. ಆದರೆ, ಒಳ್ಳೆಯ ನಿರ್ದೇಶಕರು ಸಿಕ್ಕರೆ ಅವರು ಅದ್ಭುತ ಕಂಬ್ಯಾಕ್ ಮಾಡುತ್ತಾರೆ. ಚಿರಂಜೀವಿ ಅವರು ಇಂಡಸ್ಟ್ರಿಯನ್ನೇ ಬದಲಾಯಿಸಿದವರು. ಅವರು ಅನೇಕರಿಗೆ ಸ್ಫೂರ್ತಿ’ ಎಂದಿದ್ದಾರೆ ವಿಜಯ್.

ಇದನ್ನೂ ಓದಿ: ಯೋಗಿ ಆದಿತ್ಯನಾಥ್​ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದಕ್ಕೆ ಸ್ಪಷ್ಟನೆ ನೀಡಿದ ರಜನಿಕಾಂತ್

ರಜನಿಕಾಂತ್ ಅಭಿಮಾನಿಗಳಿಗೆ ಈ ಉದಾಹರಣೆ ಇಷ್ಟವಾಗಿಲ್ಲ. ‘ರಜನಿಕಾಂತ್ ಅವರು ಬ್ಯಾಕ್ ಟು ಬ್ಯಾಕ್ ಆರು ಫ್ಲಾಪ್ ಸಿನಿಮಾಗಳನ್ನು ಎಲ್ಲಿ ನೀಡಿದ್ದಾರೆ? ದರ್ಬಾರ್ ಹಾಗೂ ಅಣ್ಣಾಥೆ ಸಾಮಾನ್ಯ ಹಿಟ್ ಸಿನಿಮಾಗಳು. ಅವು ಫ್ಲಾಪ್ ಅಲ್ಲ’ ಎಂದು ಕೆಲವರು ಹೇಳಿದ್ದಾರೆ. ವಿಜಯ್ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಕೆಲವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:42 pm, Tue, 22 August 23

ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್