AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಮನೆಗೆ ಮರಳಿದ ರಜನಿಕಾಂತ್​; ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಸೂಪರ್ ಸ್ಟಾರ್

ರಜನಿಕಾಂತ್​ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿದ ಎಲ್ಲರಿಗೂ ಅವರು ಧನ್ಯವಾದ ತಿಳಿಸಿದ್ದಾರೆ. ಅಮಿತಾಭ್​ ಬಚ್ಚನ್​, ನರೇಂದ್ರ ಮೋದಿ, ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಗಣ್ಯರಿಗೆ ರಜನಿ ಥ್ಯಾಂಕ್ಸ್​ ಹೇಳಿದ್ದಾರೆ. ಅಲ್ಲದೇ ಅಭಿಮಾನಿಗಳು, ಸೆಲೆಬ್ರಿಟಿಗಳು ಹಾಗೂ ಆಪ್ತರಿಗೂ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಆಸ್ಪತ್ರೆಯಿಂದ ಮನೆಗೆ ಮರಳಿದ ರಜನಿಕಾಂತ್​; ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಸೂಪರ್ ಸ್ಟಾರ್
ರಜನಿಕಾಂತ್​, ನರೇಂದ್ರ ಮೋದಿ
ಮದನ್​ ಕುಮಾರ್​
|

Updated on: Oct 04, 2024 | 9:08 PM

Share

‘ಸೂಪರ್​ ಸ್ಟಾರ್​’ ರಜನಿಕಾಂತ್ ಅವರಿಗೆ ಇತ್ತೀಚೆಗೆ ಆರೋಗ್ಯ ಸಮಸ್ಯೆ ಎದುರಾಗಿತ್ತು. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತು. ಹೃದಯ ಸಂಬಂಧಿ ಸಮಸ್ಯೆ ಉಂಟಾಗಿದ್ದರಿಂದ ಅವರಿಗೆ ಸ್ಟೆಂಟ್​ ಹಾಕಲಾಗಿದೆ. ಈಗ ರಜನಿಕಾಂತ್​ ಅವರು ಡಿಸ್ಚಾರ್ಜ್​ ಆಗಿ ಮನೆಗೆ ಬಂದಿದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ಅವರು ವಿಶ್ರಾಂತಿ ಪಡೆಯಬೇಕಿದೆ. ರಜನಿಕಾಂತ್​ ಆಸ್ಪತ್ರೆಗೆ ಸೇರಿದಾಗ ಅವರ ಆರೋಗ್ಯಕ್ಕಾಗಿ ಅನೇಕರು ಪ್ರಾರ್ಥಿಸಿದ್ದರು. ಅವರೆಲ್ಲರಿಗೂ ಈಗ ರಜನಿ ಧನ್ಯವಾದ ತಿಳಿಸಿದ್ದಾರೆ. ನರೇಂದ್ರ ಮೋದಿ, ಅಮಿತಾಭ್​ ಬಚ್ಚನ್​ ಸೇರಿದಂತೆ ಹಲವರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಗುರುವಾರ (ಅ.3) ರಾತ್ರಿ ರಜನಿಕಾಂತ್ ಅವರ ಡಿಸ್ಚಾರ್ಜ್​ ಆಗಿದೆ. ಮನೆಗೆ ಮರಳಿದ ಬಳಿಕ ಸ್ವಲ್ಪ ಚೇತರಿಸಿಕೊಂಡ ಅವರು ಸೋಶಿಯಲ್​ ಮೀಡಿಯಾದಲ್ಲಿ ಸರಣಿ ಪೋಸ್ಟ್​ ಮಾಡಿದ್ದಾರೆ. ತಮ್ಮ ಬಗ್ಗೆ ಕಾಳಜಿ ತೋರಿಸಿ ರಾಜಕೀಯದ ಗಣ್ಯರು, ಅಭಿಮಾನಿಗಳು, ಮಾಧ್ಯಮದವರು, ಸಿನಿಮಾದ ಸೆಲೆಬ್ರಿಟಿಗಳು ಹಾಗೂ ಆಪ್ತರಿಗೆ ಧನ್ಯವಾದ ಎಂದು ಅವರು ತಮಿಳಿನಲ್ಲಿ ಪೋಸ್ಟ್​ ಮಾಡಿದ್ದಾರೆ.

ವಿಶೇಷವಾಗಿ ನರೇಂದ್ರ, ಅಮಿತಾಭ್​ ಬಚ್ಚನ್​, ಚಂದ್ರಬಾಬು ನಾಯ್ಡು, ತಮಿಳುನಾಡು ಗವರ್ನರ್​ ರವಿ ಅವರಿಗೆ ರಜನಿಕಾಂತ್ ಧನ್ಯವಾದ ತಿಳಿಸಿದ್ದಾರೆ. ‘ನನ್ನ ಆರೋಗ್ಯದ ಬಗ್ಗೆ ಕಾಳಜಿ ತೋರಿಸಿದ್ದಕ್ಕೆ ಮತ್ತು ವೈಯಕ್ತಿಕವಾಗಿ ವಿಚಾರಿಸಿದ್ದಕ್ಕಾಗಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು’ ಎಂದು ರಜನಿಕಾಂತ್​ ಅವರು ‘ಎಕ್ಸ್​’ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಜನಿಕಾಂತ್​ಗೆ ಹೃದಯ ಸಮಸ್ಯೆ: ಸ್ಟೆಂಟ್ ಹಾಕಲಾಗಿದೆ; ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಮಾಹಿತಿ

‘ಅಮಿತಾಭ್ ಬಚ್ಚನ್​ ಅವರೇ.. ನೀವು ತೋರಿಸಿದ ಪ್ರೀತಿ ಮತ್ತು ಕಾಳಜಿಗೆ ಧನ್ಯವಾದಗಳು’ ಎಂದು ಕೂಡ ರಜನಿಕಾಂತ್ ಅವರು ಪೋಸ್ಟ್ ಮಾಡಿದ್ದಾರೆ. ಅವರಿಗೆ ಈಗ 73 ವರ್ಷ ವಯಸ್ಸು. ಈ ಮೊದಲು ಅವರು ಅನೇಕ ಬಾರಿ ಆಸ್ಪತ್ರೆಗೆ ತೆರಳಿದ್ದರು. ವಯೋ ಸಹಜವಾಗಿ ಅವರಿಗೆ ಆರೋಗ್ಯ ಆಗಾಗ ಕೈಕೊಡುತ್ತಿದೆ. ಆದ್ದರಿಂದ ಅಭಿಮಾನಿಗಳಿಗೆ ಆತಂಕ ಆಗಿತ್ತು. ಈಗ ಅವರು ಡಿಸ್ಚಾರ್ಜ್​ ಆಗಿ ಮನೆಗೆ ಮರಳಿರುವ ವಿಷಯ ತಿಳಿದು ಅಭಿಮಾನಿಗಳಿಗೆ ಸಮಾಧಾನ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ