AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ವರ್ಷದ ಹಿಂದೆ ಒಂದೇ ರಾತ್ರಿ 1.30 ಕೋಟಿ ಹಂಚಿದ್ದ ರಜನೀಕಾಂತ್

Rajinikanth: ಸಿನಿಮಾ ಚೆನ್ನಾಗಿ ಓಡಿ ಬಂದ ಲಾಭದಲ್ಲಿ ಚಿತ್ರತಂಡಕ್ಕೆ ಬೋನಸ್ ಕೊಡುವ ಪದ್ಧತಿಯನ್ನು ಕೆಲವೇ ನಿರ್ಮಾಪಕರು ಇಟ್ಟುಕೊಂಡಿದ್ದಾರೆ. ಆದರೆ ರಜನೀಕಾಂತ್, ತಾವು ನಿರ್ಮಾಣ ಮಾಡಿದ ಸಿನಿಮಾದಲ್ಲಿ ಕೆಲಸ ಮಾಡಿದವರಿಗೆ ಬರೋಬ್ಬರಿ 1.30 ಕೋಟಿ ಹಂಚಿದ್ದರಂತೆ ಅದೂ ಸಿನಿಮಾ ಬಿಡುಗಡೆ ಆಗುವ ಮುಂಚೆಯೇ.

25 ವರ್ಷದ ಹಿಂದೆ ಒಂದೇ ರಾತ್ರಿ 1.30 ಕೋಟಿ ಹಂಚಿದ್ದ ರಜನೀಕಾಂತ್
ಪಡೆಯಪ್ಪ
ಮಂಜುನಾಥ ಸಿ.
|

Updated on: Aug 30, 2023 | 5:57 PM

Share

ರಜನೀಕಾಂತ್ (Rajinikanth) ನಟನೆಯ ಸಿನಿಮಾಗಳು ಈಗ ಕೆಲವೇ ದಿನಗಳಲ್ಲಿ ನೂರು ಕೋಟಿ ಗಳಿಸುತ್ತವೆ. ಪ್ರತಿ ಸಿನಿಮಾಕ್ಕೆ ನೂರಾರು ಕೋಟಿ ಸಂಭಾವನೆಯನ್ನು ರಜನೀಕಾಂತ್ ಈಗ ಗಳಿಸುತ್ತಾರೆ. ಗಳಿಸಿದ ಹಣವನ್ನು ಸಮಾಜ ಸೇವೆಗೂ ಖರ್ಚು ಮಾಡುತ್ತಾರೆ. ಕಷ್ಟದಲ್ಲಿರುವ ಸಹ ನಟರಿಗೆ, ಕಲಾವಿದರಿಗೆ ನೆರವಿನ ಹಸ್ತ ಚಾಚುತ್ತಲೇ ಇರುತ್ತಾರೆ. ರಜನೀಕಾಂತ್ ಈಗಷ್ಟೆ ಈ ರೀತಿಯ ಹೃದಯ ವೈಶಾಲ್ಯ ಪ್ರದರ್ಶಿಸುತ್ತಿರುವುದಲ್ಲ. ಮೊದಲಿನಿಂದಲೂ ರಜನೀಕಾಂತ್ ಇದ್ದದ್ದು ಹೀಗೆಯೇ. 23 ವರ್ಷಗಳ ಹಿಂದೆಯೇ ಒಂದೇ ರಾತ್ರಿ 1.30 ಕೋಟಿ ರೂಪಾಯಿ ಹಣವನ್ನು ಹಂಚಿದ್ದರಂತೆ ರಜನೀಕಾಂತ್.

1999 ರಲ್ಲಿ ಬಿಡುಗಡೆ ಆಗಿ ಸೂಪರ್-ಡೂಪರ್ ಹಿಟ್ ಆದ ‘ಪಡೆಯಪ್ಪ’ ಸಿನಿಮಾವನ್ನು ರಜನೀಕಾಂತ್ ನಿರ್ಮಾಣ ಮಾಡಿದ್ದರು. ರಜನೀಕಾಂತ್ ಜೊತೆಗೆ ಕೆಲವು ಸಹ ನಿರ್ಮಾಪಕರು ಸಹ ಇದ್ದರು. ಸಿನಿಮಾ ನಿರ್ಮಾಣಕ್ಕೆ ಮುಂಚೆ ಆ ಸಿನಿಮಾಕ್ಕೆಂದು 4 ಕೋಟಿ ಬಜೆಟ್ ಮೀಸಲಿಡಲಾಗಿತ್ತಂತೆ. ಆದರೆ ಅಂದುಕೊಂಡಿದ್ದಕ್ಕಿಂತಲೂ ಕಡಿಮೆ ಬಜೆಟ್​ನಲ್ಲಿ ಸಿನಿಮಾ ಮುಗಿದು ಬಿಟ್ಟಿದೆ. ಉಳಿದ ಹಣವನ್ನು ಸ್ವಂತಕ್ಕೆ ಇಟ್ಟುಕೊಳ್ಳುವ ಬದಲಿಗೆ ಇಡೀ ಚಿತ್ರತಂಡಕ್ಕೆ ಹಂಚಿಬಿಟ್ಟರಂತೆ ರಜನೀಕಾಂತ್.

ಈ ವಿಷಯವನ್ನು ಆ ಸಿನಿಮಾದ ಸಹ ನಿರ್ಮಾಪಕರಾಗಿದ್ದ ಪಿಎಲ್ ತೇನಪ್ಪನ್ ಸಂದರ್ಶನವೊಂದರಲ್ಲಿ ಈ ವಿಷಯ ಹೇಳಿಕೊಂಡಿದ್ದು, ”ನಾಲ್ಕು ಕೋಟಿ ಬಜೆಟ್ ಅನ್ನು ‘ಪಡೆಯಪ್ಪ’ ಸಿನಿಮಾಕ್ಕಾಗಿ ಮೀಸಲಿಡಲಾಗಿತ್ತು. ಆದರೆ 2.70 ಕೋಟಿಗೆ ಸಿನಿಮಾ ಮುಗಿದು ಬಿಟ್ಟಿತು. ಶೂಟಿಂಗ್ ಮುಗಿದ ನಾಲ್ಕೈದು ದಿನಗಳ ಬಳಿಕ ರಜನೀಕಾಂತ್ ನನಗೆ ಕರೆ ಮಾಡಿ, ಸಿನಿಮಾದಲ್ಲಿ ಕೆಲಸ ಮಾಡಿದ ಎಲ್ಲ ತಂತ್ರಜ್ಙರು, ನಟ-ನಟಿಯರ ಮಾಹಿತಿ ತೆಗೆದುಕೊಂಡು ಬರುವಂತೆ ಹೇಳಿದರು. ನಾನೂ ಸಹ ಹೋದೆ. ಉಳಿದ ಹಣವನ್ನು ಸಿನಿಮಾಕ್ಕಾಗಿ ಕೆಲಸ ಮಾಡಿದ ಎಲ್ಲರಿಗೂ ಹಂಚಿಬಿಡುವಂತೆ ರಜನೀಕಾಂತ್ ಹೇಳಿದ್ದರು” ಎಂದು ನೆನಪು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಈ ಫೋಟೊಕ್ಕೆ ಫ್ರೇಮ್ ಹಾಕಿಸು: ಗೆಳೆಯನಿಗೆ ಆದೇಶ ಕೊಟ್ಟು ಹೊರಟ ರಜನೀಕಾಂತ್

”ಕಲಾವಿದರು, ತಂತ್ರಜ್ಞರು ಎಲ್ಲ ಕಷ್ಟಪಟ್ಟು ಹಗಲು ರಾತ್ರಿ ಕೆಲಸ ಮಾಡಿದ್ದರಿಂದಲೇ ನಮ್ಮ ಸಿನಿಮಾ ಇಷ್ಟು ಕಡಿಮೆ ಹಣದಲ್ಲಿ ಇಷ್ಟು ಬೇಗ ಮುಗಿದಿದೆ ಹಾಗಾಗಿ ಉಳಿಕೆ ಹಣವನ್ನು ನಾವು ಇಟ್ಟುಕೊಳ್ಳುವುದು ಬೇಡ. ಉಳಿಕೆ ಹಣವನ್ನು ಎಲ್ಲರಿಗೂ ಹಂಚಿಬಿಡು. ಯಾರ ಸಂಭಾವನೆ ಎಷ್ಟಿರುತ್ತದೆಯೋ ಅದರ ದುಪ್ಪಟ್ಟ ಹಣ ಕೊಟ್ಟುಬಿಡು ಎಂದರು. ನಾನು 1.30 ಕೋಟಿ ಹಣವನ್ನು ಕಾರಿನಲ್ಲಿಟ್ಟುಕೊಂಡು ಮಧ್ಯರಾತ್ರಿ ಎಲ್ಲ ಕಲಾವಿದರು ತಂತ್ರಜ್ಙರ ಮನೆಗಳಿಗೆ ಹೋಗಿ ಅವರಿಗೆ ಹಣ ಕೊಟ್ಟು ಬಂದಿದ್ದೆ” ಎಂದು ನೆನಪು ಮಾಡಿಕೊಂಡಿದ್ದಾರೆ.

‘ಪಡೆಯಪ್ಪ’ ಸಿನಿಮಾ ರಜನೀಕಾಂತ್ ವೃತ್ತಿ ಜೀವನದಲ್ಲಿ ಸೂಪರ್-ಡೂಪರ್ ಸಿನಿಮಾಗಳಲ್ಲಿ ಒಂದಾಯ್ತು. ಶಿವಾಜಿ ಗಣೇಶನ್, ರಮ್ಯಾ ಕೃಷ್ಣ, ಸೌಂದರ್ಯ ಇನ್ನೂ ಹಲವರು ಆ ಸಿನಿಮಾದಲ್ಲಿ ನಟಿಸಿದ್ದರು. ಎ.ಆರ್.ರೆಹಮಾನ್ ಸಂಗೀತ ನೀಡಿದ್ದರು. 1999 ರಲ್ಲಿ ಬಿಡುಗಡೆ ಆದ ಆ ಸಿನಿಮಾ ತಮಿಳುನಾಡಿನ 86 ಚಿತ್ರಮಂದಿರಗಳಲ್ಲಿ ನೂರು ದಿನ ಓಡಿತ್ತು. ತೆಲುಗಿಗೆ ‘ನರಸಿಂಹ’ ಹೆಸರಲ್ಲಿ ಡಬ್ ಆಗಿ ಬಿಡುಗಡೆ ಆಗಿ ಅಲ್ಲಿಯೂ ಸೂಪರ್-ಡೂಪರ್ ಹಿಟ್ ಆಯಿತು. ತೆಲುಗಿನಲ್ಲಿ 50ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ನೂರು ದಿನ ಓಡಿತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು