AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ಯುವಕರಿಗೆ ರಜನಿಕಾಂತ್ ಕಿವಿಮಾತು: ಸೂಪರ್ ಸ್ಟಾರ್ ಹೇಳಿದ್ದೇನು?

Rajinikanth on Youth: ರಜನೀಕಾಂತ್ ಅವರು ಸಿನಿಮಾ ಪರದೆಯ ಮೇಲೆ ನಾಯಕನಷ್ಟೇ ಅಲ್ಲದೆ ಸಾಮಾಜಿಕ ಕಾಳಜಿಯುಳ್ಳ ವ್ಯಕ್ತಿಯೂ ಹೌದು ರಜನೀಕಾಂತ್. ಇತ್ತೀಚೆಗಂತೂ ತಮ್ಮ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಸಹ ರಜನೀಕಾಂತ್ ಅವರು ಸಾಕಷ್ಟು ಸಂದೇಶಗಳನ್ನು, ಕಿವಿಮಾತುಗಳನ್ನು ಹೇಳುತ್ತಾರೆ. ಇದೀಗ ರಜನೀಕಾಂತ್ ಅವರು ಯುವಕರಿಗಾಗಿ ಸಂದೇಶವೊಂದನ್ನು ನೀಡಿದ್ದಾರೆ.

Rajinikanth: ಯುವಕರಿಗೆ ರಜನಿಕಾಂತ್ ಕಿವಿಮಾತು: ಸೂಪರ್ ಸ್ಟಾರ್ ಹೇಳಿದ್ದೇನು?
Rajinikanth
ಮಂಜುನಾಥ ಸಿ.
| Edited By: |

Updated on:Apr 08, 2026 | 12:56 PM

Share

ತಮ್ಮ ವಿಶಿಷ್ಟ ಮ್ಯಾನರಿಸಂ ಮತ್ತು ಅಭಿನಯದ ಮೂಲಕ ದಶಕಗಳಿಂದ ಚಿತ್ರರಂಗವನ್ನು ಆಳುತ್ತಿರುವ ನಟ ರಜನಿಕಾಂತ್ (Rajinikanth), ಭಾರತದ ಅತ್ಯಂತ ಪ್ರಭಾವಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ ಅವರು. ಕೇವಲ ಸಿನಿಮಾ ಪರದೆಯ ಮೇಲೆ ನಾಯಕನಷ್ಟೇ ಅಲ್ಲದೆ ಸಾಮಾಜಿಕ ಕಾಳಜಿಯುಳ್ಳ ವ್ಯಕ್ತಿಯೂ ಹೌದು ರಜನೀಕಾಂತ್. ಇತ್ತೀಚೆಗಂತೂ ತಮ್ಮ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಸಹ ರಜನೀಕಾಂತ್ ಅವರು ಸಾಕಷ್ಟು ಸಂದೇಶಗಳನ್ನು, ಕಿವಿಮಾತುಗಳನ್ನು ಹೇಳುತ್ತಾರೆ. ಇದೀಗ ರಜನೀಕಾಂತ್ ಅವರು ಯುವಕರಿಗಾಗಿ ಸಂದೇಶವೊಂದನ್ನು ನೀಡಿದ್ದಾರೆ.

ಇದೀಗ ನಟ ರಜನೀಕಾಂತ್ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದು, ‘ಯುವಜನತೆಯು ತಮ್ಮ ವಿದ್ಯಾಭ್ಯಾಸ ಮತ್ತು ಭವಿಷ್ಯದ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು’ ಎಂದು ಅವರು ಹೇಳಿದ್ದಾರೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಶಿಕ್ಷಣವೇ ಅಡಿಪಾಯ ಎಂಬುದನ್ನು ಅವರು ಒತ್ತಿ ಹೇಳಿದ್ದಾರೆ. ಇಂದಿನ ಕಾಲಘಟ್ಟದಲ್ಲಿ ಯುವಕರು ಬೇಗನೆ ಆಕರ್ಷಿತರಾಗುತ್ತಿರುವ ಮದ್ಯಪಾನ ಮತ್ತು ಮಾದಕವಸ್ತುಗಳ ಬಗ್ಗೆ ರಜನಿಕಾಂತ್ ಕಳವಳ ವ್ಯಕ್ತಪಡಿಸಿದ್ದಾರೆ.

‘ನಾನು ಯುವಜನತೆಯಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ದಯವಿಟ್ಟು ಮದ್ಯ ಮತ್ತು ಮಾದಕವಸ್ತುಗಳಿಂದ ದೂರವಿರಿ. ಒಂದು ವೇಳೆ ನೀವು ಈ ವ್ಯಸನಕ್ಕೆ ಬಲಿಯಾದರೆ, ನಿಮ್ಮ ಜೀವನ ಕೇವಲ ನಿಮಗಷ್ಟೇ ಅಲ್ಲ, ನಿಮ್ಮನ್ನು ನಂಬಿರುವ ಪೋಷಕರಿಗೆ ಮತ್ತು ಪ್ರೀತಿಪಾತ್ರರಿಗೂ ನರಕವಾಗಿ ಪರಿಣಮಿಸುತ್ತದೆ. ವ್ಯಸನಿಯಾದ ಒಬ್ಬ ವ್ಯಕ್ತಿ ಕೇವಲ ತನ್ನ ಆರೋಗ್ಯವನ್ನಷ್ಟೇ ಹಾಳುಮಾಡಿಕೊಳ್ಳುವುದಿಲ್ಲ, ಬದಲಾಗಿ ಇಡೀ ಕುಟುಂಬವನ್ನು ಬೀದಿಗೆ ತರುತ್ತಾನೆ. ಪೋಷಕರು ತಮ್ಮ ಮಕ್ಕಳ ಮೇಲೆ ಇಟ್ಟಿರುವ ಕನಸುಗಳು ನುಚ್ಚುನೂರಾಗುತ್ತವೆ. ಈ ಭಾವನಾತ್ಮಕ ಅಂಶವನ್ನು ರಜನಿಕಾಂತ್ ತಮ್ಮ ಸಂದೇಶದಲ್ಲಿ ಬಹಳ ತೀಕ್ಷ್ಣವಾಗಿ ಪ್ರಸ್ತಾಪಿಸಿದ್ದಾರೆ’ ಎಂದಿದ್ದಾರೆ ರಜನೀಕಾಂತ್.

ಇದನ್ನೂ ಓದಿ:ರಜನೀಕಾಂತ್​​ಗೆ ಕೈಕೊಟ್ಟ ಶಾರುಖ್ ಖಾನ್, ‘ಜೈಲರ್ 2’ಗೆ ನೋ?

ರಜನೀಕಾಂತ್ ಪ್ರಸ್ತುತ ‘ಜೈಲರ್ 2’ ಸಿನಿಮಾನಲ್ಲಿ ನಟಿಸುತ್ತಿದ್ದು, ಇದೀಗ ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಅದಾದ ಬಳಿಕ ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರು ಒಟ್ಟಿಗೆ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾ ಅನ್ನು ನೆಲ್ಸನ್ ನಿರ್ದೇಶನ ಮಾಡಲಿದ್ದು, ಕಮಲ್ ಹಾಸನ್ ಅವರೇ ನಿರ್ಮಾಣ ಮಾಡಲಿದ್ದಾರೆ. ಅದಾದ ಬಳಿಕ ಐತಿಹಾಸಿಕ ಸಿನಿಮಾ ಒಂದರಲ್ಲಿ ರಜನೀಕಾಂತ್ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:41 pm, Wed, 8 April 26

Follow Us