AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್​ಗೆ ಹೃದಯ ಸಮಸ್ಯೆ: ಸ್ಟೆಂಟ್ ಹಾಕಲಾಗಿದೆ; ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಮಾಹಿತಿ

ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ರಜನಿಕಾಂತ್ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಸ್ಟೆಂಟ್​ ಹಾಕಲಾಗಿದೆ. ಈ ಬಗ್ಗೆ ಆಸ್ಪತ್ರೆಯವರು ಹೆಲ್ತ್​ ಅಪ್​ಡೇಟ್​ ನೀಡಿದ್ದಾರೆ. 73 ವರ್ಷ ವಯಸ್ಸಿನ ರಜನಿಕಾಂತ್​ ಅವರ ಆರೋಗ್ಯ ಈಗ ಸ್ಥಿರವಾಗಿದೆ. ಅವರು ಯಾವಾಗ ಡಿಸ್ಚಾರ್ಜ್​ ಆಗಬಹುದು ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.

ರಜನಿಕಾಂತ್​ಗೆ ಹೃದಯ ಸಮಸ್ಯೆ: ಸ್ಟೆಂಟ್ ಹಾಕಲಾಗಿದೆ; ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಮಾಹಿತಿ
ರಜನಿಕಾಂತ್​
ಮದನ್​ ಕುಮಾರ್​
|

Updated on: Oct 01, 2024 | 6:26 PM

Share

ನಟ ರಜನಿಕಾಂತ್​ ಅವರು ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು ಅಭಿಮಾನಿಗಳಿಗೆ ಆತಂಕ ಆಗಿದೆ. ಅವರ ಆರೋಗ್ಯದ ಬಗ್ಗೆ ಹಲವು ಬಗೆಯ ವರದಿಗಳು ಪ್ರಕಟ ಆಗಿವೆ. ನಿಜಕ್ಕೂ ರಜನಿಕಾಂತ್ ಅವರಿಗೆ ಎದುರಾಗಿರುವ ಆರೋಗ್ಯ ಸಮಸ್ಯೆ ಏನು ಎಂಬ ಬಗ್ಗೆ ಈಗ ಆಸ್ಪತ್ರೆಯ ಕಡೆಯಿಂದಲೇ ಅಧಿಕೃತ ಮಾಹಿತಿ ಹೊರಬಿದ್ದಿದೆ. ‘ಸೂಪರ್​ ಸ್ಟಾರ್​’ ರಜನಿಕಾಂತ್​ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದೆ. ಅದಕ್ಕೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ತನಾಳ ಉಬ್ಬಿದ್ದರಿಂದ ಸ್ಟೆಂಟ್​ ಹಾಕಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

‘ರಜನಿಕಾಂತ್​ ಅವರನ್ನು ಅಪೋಲೋ ಆಸ್ಪತ್ರೆಗೆ ಸೆಪ್ಟೆಂಬರ್​ 30ರಂದು ದಾಖಲಿಸಲಾಗಿತ್ತು. ಅವರ ರಕ್ತನಾಳದಲ್ಲಿ ಊತ ಕಾಣಿಸಿಕೊಂಡಿತ್ತು. ಅದಕ್ಕೆ ಚಿಕಿತ್ಸೆ ನೀಡಲಾಗಿದೆ. ಹಿರಿಯ ವೈದ್ಯ ಡಾ. ಸಾಯಿ ಸತೀಶ್ ಅವರು ರಜನಿಕಾಂತ್​ ಅವರಿಗೆ ಸ್ಟೆಂಟ್​ ಹಾಕಿದ್ದಾರೆ. ಅಂದುಕೊಂಡ ರೀತಿಯೇ ಚಿಕಿತ್ಸೆ ಫಲಕಾರಿ ಆಗಿದೆ ಎಂದು ಅಭಿಮಾನಿಗಳಿಗೆ ಮತ್ತು ಹಿತೈಷಿಗಳಿಗೆ ತಿಳಿಸುತ್ತೇವೆ’ ಎಂದು ಆಸ್ಪತ್ರೆಯ ಕಡೆಯಿಂದ ಹೆಲ್ತ್​ ಅಪ್​ಡೇಟ್​ ನೀಡಲಾಗಿದೆ.

ಆದಷ್ಟು ಬೇಗ ರಜನಿಕಾಂತ್​ ಅವರು ಗುಣಮುಖರಾಗಲಿ ಎಂದು ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಪ್ರಾರ್ಥಿಸುತ್ತಿದ್ದಾರೆ. ‘ರಜನಿಕಾಂತ್​ ಆರೋಗ್ಯ ಸ್ಥಿರವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಎರಡು ದಿನಗಳಲ್ಲಿ ಅವರು ಮನೆಗೆ ತೆರಳಲಿದ್ದಾರೆ’ ಎಂದು ಕೂಡ ಆಸ್ಪತ್ರೆಯ ಕಡೆಯಿಂದ ಮಾಹಿತಿ ಹಂಚಿಕೊಳ್ಳಲಾಗಿದೆ. ವಿಷಯ ತಿಳಿದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: ರಜನಿಕಾಂತ್​ ನಟನೆಯ ‘ಕೂಲಿ’ ಸಿನಿಮಾದಿಂದ ಉಪೇಂದ್ರ ಫಸ್ಟ್​ ಲುಕ್​ ಪೋಸ್ಟರ್ ಬಿಡುಗಡೆ

ರಜನಿಕಾಂತ್​ ಅವರಿಗೆ ಈಗ 73 ವರ್ಷ ವಯಸ್ಸು. ವಯೋ ಸಹಜವಾಗಿ ಅವರು ಒಂದಷ್ಟು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ದಿಢೀರ್​ ಅಂತ ಆಸ್ಪತ್ರೆಗೆ ದಾಖಲಾಗಿದ್ದರಿಂದ ಎಲ್ಲರಿಗೂ ಆತಂಕ ಹೆಚ್ಚಿತ್ತು. ಸದ್ಯ ಕೆಲವು ದಿನಗಳ ಕಾಲ ರಜನಿಕಾಂತ್ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್​ ನೀಡಲಿದ್ದಾರೆ. ಸಂಪೂರ್ಣ ಗುಣಮುಖರಾದ ನಂತರವೇ ಅವರು ಸಿನಿಮಾದ ಕೆಲಸಗಳತ್ತ ಮರಳಿದ್ದಾರೆ.

‘ವೆಟ್ಟಯ್ಯನ್’, ‘ಕೂಲಿ’ ಸಿನಿಮಾದಲ್ಲಿ ರಜನಿಕಾಂತ್ ನಟಿಸಿದ್ದಾರೆ. ಅಕ್ಟೋಬರ್​ 10ರಂದು ‘ವೆಟ್ಟಯ್ಯನ್’ ಸಿನಿಮಾ ಬಿಡುಗಡೆ ಆಗಲಿದೆ. ಇನ್ನೇನು ಅವರು ಈ ಚಿತ್ರದ ಪ್ರಚಾರದಲ್ಲಿ ಪಾಲ್ಗೊಳ್ಳಬೇಕು ಎನ್ನುವಾಗಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?