AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲರ್ 2: ರಜನಿಕಾಂತ್ ಸಿನಿಮಾದಲ್ಲಿ ಶಾರುಖ್ ಖಾನ್ ಬದಲು ಹೃತಿಕ್ ರೋಷನ್ ನಟನೆ?

ಶಾರುಖ್ ಖಾನ್ ಅವರು ಡೇಟ್ಸ್ ಇಲ್ಲದ ಕಾರಣ ‘ಜೈಲರ್ 2’ ಸಿನಿಮಾದಲ್ಲಿ ನಟಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಚಿತ್ರತಂಡ ಈಗ ಹೃತಿಕ್ ರೋಷನ್ ಜೊತೆ ಮಾತುಕಥೆ ನಡೆಸುತ್ತಿದೆ ಎಂದು ವರದಿ ಆಗಿದೆ. ಆದರೆ ಈ ಬಗ್ಗೆ ತಂಡದ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.

ಜೈಲರ್ 2: ರಜನಿಕಾಂತ್ ಸಿನಿಮಾದಲ್ಲಿ ಶಾರುಖ್ ಖಾನ್ ಬದಲು ಹೃತಿಕ್ ರೋಷನ್ ನಟನೆ?
Hrithik Roshan, Rajinikanth
ಮದನ್​ ಕುಮಾರ್​
|

Updated on: May 27, 2026 | 10:34 PM

Share

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದ ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ ‘ಜೈಲರ್’ ಚಿತ್ರದ ಸೀಕ್ವೆಲ್ ‘ಜೈಲರ್ 2’ (Jailer 2) ಸದ್ಯದಲ್ಲೇ ತೆರೆಗೆ ಬರಲು ಸಜ್ಜಾಗುತ್ತಿದೆ. ಸಿನಿಮಾ ಬಿಡುಗಡೆಯ ದಿನಗಳು ಹತ್ತಿರವಾಗುತ್ತಿದ್ದಂತೆ ಚಿತ್ರದ ಬಗ್ಗೆ ದಿನಕ್ಕೊಂದು ರೋಚಕ ಸುದ್ದಿಗಳು ಹೊರಬೀಳುತ್ತಿವೆ. ಸದ್ಯ ಕಾಲಿವುಡ್ ಅಂಗಳದಿಂದ ಕೇಳಿಬರುತ್ತಿರುವ ಬಿಸಿಬಿಸಿ ಸುದ್ದಿಯೆಂದರೆ, ಈ ಬಿಗ್ ಬಜೆಟ್ ಚಿತ್ರದ ಒಂದು ಅತಿಥಿ ಪಾತ್ರಕ್ಕಾಗಿ ಬಾಲಿವುಡ್ ಸ್ಟಾರ್ ನಟ ಹೃತಿಕ್ ರೋಷನ್ (Hrithik Roshan) ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ‘ಜೈಲರ್ 2’ ಚಿತ್ರತಂಡವು ಹೃತಿಕ್ ರೋಷನ್ ಅವರನ್ನು ವಿಶೇಷ ಪಾತ್ರವೊಂದಕ್ಕಾಗಿ ಸಂಪರ್ಕಿಸಿದೆ. ಆದರೆ ಚಿತ್ರತಂಡವು ಮೊದಲಿಗೆ ಈ ಪಾತ್ರಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಸಂಪರ್ಕಿಸಿತ್ತು ಎಂಬ ಮಾಹಿತಿ ಇದೆ. ಆದರೆ, ಶಾರುಖ್ ಖಾನ್ ಅವರು ಬಹುನಿರೀಕ್ಷಿತ ‘ಕಿಂಗ್’ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿ ಆಗಿರುವುದರಿಂದ ‘ಜೈಲರ್ 2’ ಸಿನಿಮಾದಲ್ಲಿ ನಟಿಸಲು ಸಾಧ್ಯವಾಗಲಿಲ್ಲ.

ಶಾರುಖ್ ಖಾನ್ ಅವರ ಅಲಭ್ಯತೆಯಿಂದಾಗಿ, ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಈಗ ಈ ಪವರ್‌ಫುಲ್ ಪಾತ್ರಕ್ಕೆ ಹೃತಿಕ್ ರೋಷನ್ ಅವರನ್ನು ಕರೆತರಲು ಮಾತುಕತೆ ನಡೆಸುತ್ತಿದ್ದಾರೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಒಂದು ವೇಳೆ ಹೃತಿಕ್ ರೋಷನ್ ಅವರು ಒಪ್ಪಿಕೊಂಡರೆ ‘ಜೈಲರ್ 2’ ಸಿನಿಮಾದ ಸ್ಟಾರ್ ಮೆರುಗು ಹೆಚ್ಚಲಿದೆ.

ರಜನಿಕಾಂತ್ ಅವರು ‘ಜೈಲರ್ 2’ ಚಿತ್ರದಲ್ಲಿ ಮತ್ತೊಮ್ಮೆ ಮುತ್ತುವೇಲ್ ಪಾಂಡಿಯನ್ ಆಗಿ ಅಬ್ಬರಿಸಲಿದ್ದಾರೆ. ಮೊದಲ ಭಾಗದಲ್ಲಿದ್ದಂತೆ ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಮತ್ತು ಕನ್ನಡದ ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಈ ಸೀಕ್ವೆಲ್‌ನಲ್ಲೂ ತಮ್ಮ ಪಾತ್ರಗಳನ್ನು ಮುಂದುವರಿಸಲಿದ್ದಾರೆ ಎಂಬ ನಿರೀಕ್ಷೆ ಇದೆ. ಇದರೊಂದಿಗೆ ಈ ಬಾರಿ ಮಿಥುನ್ ಚಕ್ರವರ್ತಿ, ವಿದ್ಯಾ ಬಾಲನ್, ಎಸ್.ಜೆ. ಸೂರ್ಯ ಮತ್ತು ಸೂರಜ್ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ನನ್ನನ್ನು ಯಾರೂ ಕಣ್ಣೆತ್ತಿ ನೋಡಲಿಲ್ಲ: ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಅನುಭವ ಬಿಚ್ಚಿಟ್ಟ ರಜನಿಕಾಂತ್

‘ಜೈಲರ್ 2’ ಚಿತ್ರದ ಅಧಿಕೃತ ಬಿಡುಗಡೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲವಾದರೂ, ಚಿತ್ರವು ಇದೇ ವರ್ಷ ಸೆಪ್ಟೆಂಬರ್ 11ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಒಂದು ವೇಳೆ ಹೃತಿಕ ರೋಷನ್ ಈ ಪ್ರಾಜೆಕ್ಟ್‌ಗೆ ಗ್ರೀನ್ ಸಿಗ್ನಲ್ ನೀಡಿದರೆ, ಚಿತ್ರದ ಹೈಪ್ ಮತ್ತೊಂದು ಹಂತಕ್ಕೆ ತಲುಪುವುದು ಖಚಿತ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ