AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್​ ಕಡೆಯಿಂದ ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಖುಷಿಪಟ್ಟ ಫ್ಯಾನ್ಸ್​

ರಜನಿಕಾಂತ್ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿತ್ತು. ಈ ಕಾರಣಕ್ಕೆ ಅವರು ಪಕ್ಷ ಕಟ್ಟುವ ನಿರ್ಧಾರದಿಂದ ಹಿಂದೆ ಸರಿದರು. ಇದಲ್ಲದೆ, ರಜನಿ ಏಕಾಏಕಿ ಅಮೆರಿಕಕ್ಕೆ ತೆರಳಿದ್ದು ಸಾಕಷ್ಟು ಆತಂಕ ಸೃಷ್ಟಿ ಮಾಡಿತ್ತು.

ರಜನಿಕಾಂತ್​ ಕಡೆಯಿಂದ ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಖುಷಿಪಟ್ಟ ಫ್ಯಾನ್ಸ್​
ಮೆಗಾಸ್ಟಾರ್ ರಜನೀಕಾಂತ್
TV9 Web
| Edited By: |

Updated on: Aug 26, 2021 | 3:00 PM

Share

ರಜನಿಕಾಂತ್​ ಅಭಿಮಾನಿ ಬಳಗ ಹಿರಿದಾಗುತ್ತಲೇ ಇದೆ. ವಯಸ್ಸು 70 ದಾಟಿದರೂ ಅವರು ಸಿನಿಮಾ ಮಾಡುವ ಕಾಯಕವನ್ನು ನಿಲ್ಲಿಸಿಲ್ಲ. ಅನೇಕ ದಶಕಗಳಿಂದ ಸಿನಿಮಾ ರಂಗದಲ್ಲಿ ಇರುವ ಅವರು ಈಗ ‘ಅಣ್ಣಾಥೆ’ ಚಿತ್ರದ ಕೆಲಸ ಪೂರ್ಣಗೊಳಿಸಿದ್ದಾರೆ. ಇದರ ಡಬ್ಬಿಂಗ್​ ಕೆಲಸ ಪೂರ್ಣಗೊಂಡಿದ್ದು, ನವೆಂಬರ್​ನಲ್ಲಿ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ. ಈ ಮಧ್ಯೆ, ರಜನಿ 169ನೇ ಸಿನಿಮಾದ ಬಗ್ಗೆ ಹೊಸ ಅಪ್​ಡೇಟ್​ ಒಂದು ಕೇಳಿ ಬಂದಿದೆ. ಈ ಚಿತ್ರವನ್ನು ಯಾರು ನಿರ್ದೇಶನ ಮಾಡುತ್ತಿದ್ದಾರೆ ಎಂಬುದಕ್ಕೆ ಮೂಲಗಳಿಂದ ಉತ್ತರ ಸಿಕ್ಕಿದೆ.

ರಜನಿಕಾಂತ್ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿತ್ತು. ಈ ಕಾರಣಕ್ಕೆ ಅವರು ಪಕ್ಷ ಕಟ್ಟುವ ನಿರ್ಧಾರದಿಂದ ಹಿಂದೆ ಸರಿದರು. ಇದಲ್ಲದೆ, ರಜನಿ ಏಕಾಏಕಿ ಅಮೆರಿಕಕ್ಕೆ ತೆರಳಿದ್ದು ಸಾಕಷ್ಟು ಆತಂಕ ಸೃಷ್ಟಿ ಮಾಡಿತ್ತು. ಅಲ್ಲಿಂದ ಬಂದ ನಂತರದಲ್ಲಿ ಸೂಪರ್​ ಸ್ಟಾರ್​ ಮತ್ತೆ ಶೂಟಿಂಗ್​​ನಲ್ಲಿ ಪಾಲ್ಗೊಂಡಿದ್ದು ಅವರ ಅಭಿಮಾನಿ ಬಳಗಕ್ಕೆ ಖುಷಿ ನೀಡಿದೆ. ಈಗ ಅವರ ಫ್ಯಾನ್ಸ್​ಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.

ರಜನಿ 169ನೇ ಸಿನಿಮಾವನ್ನು ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದೆ. ಕಾರ್ತಿಕ್​ ಸುಬ್ಬರಾಜು ಸೇರಿ ಸಾಕಷ್ಟು ನಿರ್ದೇಶಕರ ಹೆಸರು ಈ ವದಂತಿ ಪಟ್ಟಿಯಲ್ಲಿದೆ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ಮಾಹಿತಿ ಎಂದರೆ, ರಜನಿ ಅವರು  ಖ್ಯಾತ ನಿರ್ದೇಶಕ ಪಾಂಡಿರಾಜ್​ ಜತೆ ಸಿನಿಮಾ ಮಾಡೋಕೆ ಒಪ್ಪಿದ್ದಾರೆ ಎನ್ನಲಾಗಿದೆ.

ಫ್ಯಾಮಿಲಿ ಎಂಟರ್​ಟೇನ್​ಮೆಂಟ್​ ಸಿನಿಮಾಗಳನ್ನು ನಿರ್ದೇಶನ ಮಾಡೋಕೆ ಪಾಂಡಿರಾಜ್​ ಹೆಸರುವಾಸಿ. ರಜನಿ ಜತೆ ಮಾಡುತ್ತಿರುವ ಸಿನಿಮಾ ಕೂಡ ಹೀಗೆಯೇ ಇರಲಿದೆ ಎನ್ನಲಾಗಿದೆ. ಈ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ಸಿಗುವ ಸಾಧ್ಯತೆ ಇದೆ ಎಂಬ ಸುದ್ದಿ ಜೋರಾಗಿದೆ. ಸದ್ಯ, ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಅಣ್ಣಾಥೆ’ ಸಿನಿಮಾವನ್ನು ಸನ್​ ಪಿಕ್ಚರ್ಸ್​ ನಿರ್ಮಾಣ ಮಾಡುತ್ತಿದೆ. ರಜನಿಕಾಂತ್​, ಕೀರ್ತಿ ಸುರೇಶ್​, ನಯನತಾರಾ, ಮೀನಾ, ಖುಷ್ಬು, ಪ್ರಕಾಶ್ ರಾಜ್, ಜಗಪತಿ ಬಾಬು ಮೊದಲಾದವರು ಪಾತ್ರವರ್ಗದಲ್ಲಿದ್ದಾರೆ. ದೀಪಾವಳಿ ನಿಮಿತ್ತ ಈ ಸಿನಿಮಾ ನವೆಂಬರ್​ 4ರಂದು ತೆರೆಗೆ ಬರುತ್ತಿದೆ. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟರೂ ಅಚ್ಚರಿ ಇಲ್ಲ.

ಇದನ್ನೂ ಓದಿ: ರಾಜಕೀಯದಿಂದ ಹಿಂದೆ ಸರಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ರಾಜ್ಯಕ್ಕೆ ತೆರಳಿದ ರಜನಿಕಾಂತ್​

ರಾಜಕೀಯದಿಂದ ಹಿಂದೆ ಸರಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ರಾಜ್ಯಕ್ಕೆ ತೆರಳಿದ ರಜನಿಕಾಂತ್​

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ