Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನೀಕಾಂತ್-ಯೋಗಿ ಆದಿತ್ಯನಾಥ್ ಭೇಟಿ: ಕಾಲಿಗೆ ನಮಸ್ಕರಿಸಿದ ಸೂಪರ್ ಸ್ಟಾರ್

Rajinikanth: ನಟ ರಜನೀಕಾಂತ್ ಇಂದು (ಆಗಸ್ಟ್ 19) ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ರನ್ನು ಭೇಟಿ ಆಗಿದ್ದಾರೆ.

ರಜನೀಕಾಂತ್-ಯೋಗಿ ಆದಿತ್ಯನಾಥ್ ಭೇಟಿ: ಕಾಲಿಗೆ ನಮಸ್ಕರಿಸಿದ ಸೂಪರ್ ಸ್ಟಾರ್
ರಜನೀಕಾಂತ್
Follow us
ಮಂಜುನಾಥ ಸಿ.
|

Updated on: Aug 19, 2023 | 10:35 PM

ಜೈಲರ್‘ (Jailer) ಸಿನಿಮಾ ಭಾರಿ ಯಶಸ್ವಿಯಾಗಿದೆ. ಕೆಲವೇ ದಿನಗಳಲ್ಲಿ 300 ಕೋಟಿ ಕಲೆಕ್ಷನ್ ದಾಟಿ 500 ಕೋಟಿಯತ್ತ ದಾಪುಗಾಲು ಹಾಕುತ್ತಿದೆ. ತಮ್ಮ ಸಿನಿಮಾ ಇಲ್ಲಿ ಭರ್ಜರಿ ಯಶಸ್ಸು ಕಾಣುತ್ತಿರುವ ಸಮಯದಲ್ಲಿ ರಜನೀಕಾಂತ್ ಉತ್ತರ ಭಾರತಕ್ಕೆ ತೆರಳಿದ್ದು ಆಧ್ಯಾತ್ಮಿಕ ಪ್ರವಾಸದಲ್ಲಿದ್ದಾರೆ. ಹೃಷಿಕೇಶ, ಬದ್ರಿನಾಥ್, ಬಾಬಾ ಗುಹೆ ಇನ್ನಿತರೆ ಧಾರ್ಮಿಕ ಸ್ಥಳಗಳ ಸಂದರ್ಶನ ಮುಗಿಸಿ ಉತ್ತರ ಪ್ರದೇಶಕ್ಕೆ ರಜನೀಕಾಂತ್ (Rajinikanth) ಆಗಮಿಸಿದ್ದು ನಿನ್ನೆಯಷ್ಟೆ ಉತ್ತರ ಪ್ರದೇಶದ ರಾಜ್ಯಪಾಲರ ಭೇಟಿಯಾಗಿದ್ದರು. ಇಂದು (ಆಗಸ್ಟ್ 19) ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥರ ಭೇಟಿ ಆಗಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ ಅವರನ್ನು ಭೇಟಿ ಆಗಿರುವ ನಟ ರಜನೀಕಾಂತ್ ಯೋಗಿವರ ಕಾಲಿಗೆ ನಮಸ್ಕರಿಸಿದ್ದಾರೆ. ವಯಸ್ಸಿನಲ್ಲಿ, ಯೋಗಿ ಆದಿತ್ಯನಾಥರಿಂಗಿಂತಲೂ ಹಿರಿಯರಾದ ರಜನೀಕಾಂತ್, ಸಿಎಂ ಕಾಲಿಗೆ ನಮಸ್ಕರಿಸಿರುವ ಚಿತ್ರ, ವಿಡಿಯೋ ಸಖತ್ ವೈರಲ್ ಆಗಿದೆ. ರಜನೀಕಾಂತ್ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಒಟ್ಟಿಗೆ ‘ಜೈಲರ್’ ಸಿನಿಮಾ ವೀಕ್ಷಿಸಲಿದ್ದಾರೆ. ಆ ಬಳಿಕ ರಜನೀಕಾಂತ್ ಅವರು ಅಯೋಧ್ಯೆಗೆ ಸಹ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯವನ್ನು ವೀಕ್ಷಿಸಲಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಸಿನಿಮಾ ಮಂದಿಗೆ, ಸಿನಿಮಾಗಳಿಗೆ ಸಾಕಷ್ಟು ಬೆಂಬಲವನ್ನು ಇತ್ತೀಚೆಗೆ ನೀಡುತ್ತಿದ್ದಾರೆ. ಈ ಹಿಂದೆ ಬಿಡುಗಡೆ ಆಗಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಹಾಗೂ ‘ದಿ ಕೇರಳ ಸ್ಟೋರಿ’ ಸಿನಿಮಾಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ್ದರು. ತಮ್ಮ ರಾಜ್ಯದಲ್ಲಿ ಬೃಹತ್ ಚಿತ್ರನಗರಿ ನಿರ್ಮಾಣ ಮಾಡಲು ಸಹ ಮುಂದಾಗಿದ್ದು, ಈ ಕುರಿತಂತೆ ಬಾಲಿವುಡ್​ನ ಕೆಲ ಹಿರಿಯ ನಟ, ನಿರ್ಮಾಪಕರನ್ನು ಕರೆಸಿ ಸಭೆ ಸಹ ನಡೆಸಿದ್ದರು. ಇದೀಗ ನಟ ರಜನೀಕಾಂತ್ ಅವರನ್ನು ಭೇಟಿಯಾಗಿದ್ದಾರೆ.

ಇದನ್ನೂ ಓದಿ:‘ಜೈಲರ್’ ಸಿನಿಮಾ ಬಿಡುಗಡೆ ದಿನವೇ ಆಶ್ರಮದಲ್ಲಿ ಸ್ವಾಮಿಗಳ ಸಂಘದಲ್ಲಿ ಕಳೆದ ರಜನೀಕಾಂತ್

ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ ಆಗಸ್ಟ್ 10 ರಂದು ಬಿಡುಗಡೆ ಆಗಿತ್ತು. ಸಿನಿಮಾದಲ್ಲಿ ರಜನೀಕಾಂತ್ ಜೊತೆಗೆ ಶಿವರಾಜ್ ಕುಮಾರ್, ಮೋಹನ್​ಲಾಲ್, ಸುನಿಲ್, ಜಾಕಿ ಶ್ರಾಫ್ ಅವರುಗಳು ನಟಿಸಿದ್ದಾರೆ. ಸಿನಿಮಾದಲ್ಲಿ ಶಿವಣ್ಣನ ಅತಿಥಿ ಪಾತ್ರಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾವು ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಸಕ್ಸಸ್ ಕಂಡಿದ್ದು, ಭಾರಿ ಮೊತ್ತ ಕಲೆಹಾಕಿದೆ. ಸಿನಿಮಾವನ್ನು ನೆಲ್ಸನ್ ನಿರ್ದೇಶನ ಮಾಡಿದ್ದು, ಸನ್ ಪಿಕ್ಚರ್ಸ್ ನಿರ್ಮಾಣ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ