ರಜನೀಕಾಂತ್-ಯೋಗಿ ಆದಿತ್ಯನಾಥ್ ಭೇಟಿ: ಕಾಲಿಗೆ ನಮಸ್ಕರಿಸಿದ ಸೂಪರ್ ಸ್ಟಾರ್

Rajinikanth: ನಟ ರಜನೀಕಾಂತ್ ಇಂದು (ಆಗಸ್ಟ್ 19) ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ರನ್ನು ಭೇಟಿ ಆಗಿದ್ದಾರೆ.

ರಜನೀಕಾಂತ್-ಯೋಗಿ ಆದಿತ್ಯನಾಥ್ ಭೇಟಿ: ಕಾಲಿಗೆ ನಮಸ್ಕರಿಸಿದ ಸೂಪರ್ ಸ್ಟಾರ್
ರಜನೀಕಾಂತ್
Follow us
|

Updated on: Aug 19, 2023 | 10:35 PM

ಜೈಲರ್‘ (Jailer) ಸಿನಿಮಾ ಭಾರಿ ಯಶಸ್ವಿಯಾಗಿದೆ. ಕೆಲವೇ ದಿನಗಳಲ್ಲಿ 300 ಕೋಟಿ ಕಲೆಕ್ಷನ್ ದಾಟಿ 500 ಕೋಟಿಯತ್ತ ದಾಪುಗಾಲು ಹಾಕುತ್ತಿದೆ. ತಮ್ಮ ಸಿನಿಮಾ ಇಲ್ಲಿ ಭರ್ಜರಿ ಯಶಸ್ಸು ಕಾಣುತ್ತಿರುವ ಸಮಯದಲ್ಲಿ ರಜನೀಕಾಂತ್ ಉತ್ತರ ಭಾರತಕ್ಕೆ ತೆರಳಿದ್ದು ಆಧ್ಯಾತ್ಮಿಕ ಪ್ರವಾಸದಲ್ಲಿದ್ದಾರೆ. ಹೃಷಿಕೇಶ, ಬದ್ರಿನಾಥ್, ಬಾಬಾ ಗುಹೆ ಇನ್ನಿತರೆ ಧಾರ್ಮಿಕ ಸ್ಥಳಗಳ ಸಂದರ್ಶನ ಮುಗಿಸಿ ಉತ್ತರ ಪ್ರದೇಶಕ್ಕೆ ರಜನೀಕಾಂತ್ (Rajinikanth) ಆಗಮಿಸಿದ್ದು ನಿನ್ನೆಯಷ್ಟೆ ಉತ್ತರ ಪ್ರದೇಶದ ರಾಜ್ಯಪಾಲರ ಭೇಟಿಯಾಗಿದ್ದರು. ಇಂದು (ಆಗಸ್ಟ್ 19) ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥರ ಭೇಟಿ ಆಗಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ ಅವರನ್ನು ಭೇಟಿ ಆಗಿರುವ ನಟ ರಜನೀಕಾಂತ್ ಯೋಗಿವರ ಕಾಲಿಗೆ ನಮಸ್ಕರಿಸಿದ್ದಾರೆ. ವಯಸ್ಸಿನಲ್ಲಿ, ಯೋಗಿ ಆದಿತ್ಯನಾಥರಿಂಗಿಂತಲೂ ಹಿರಿಯರಾದ ರಜನೀಕಾಂತ್, ಸಿಎಂ ಕಾಲಿಗೆ ನಮಸ್ಕರಿಸಿರುವ ಚಿತ್ರ, ವಿಡಿಯೋ ಸಖತ್ ವೈರಲ್ ಆಗಿದೆ. ರಜನೀಕಾಂತ್ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಒಟ್ಟಿಗೆ ‘ಜೈಲರ್’ ಸಿನಿಮಾ ವೀಕ್ಷಿಸಲಿದ್ದಾರೆ. ಆ ಬಳಿಕ ರಜನೀಕಾಂತ್ ಅವರು ಅಯೋಧ್ಯೆಗೆ ಸಹ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯವನ್ನು ವೀಕ್ಷಿಸಲಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಸಿನಿಮಾ ಮಂದಿಗೆ, ಸಿನಿಮಾಗಳಿಗೆ ಸಾಕಷ್ಟು ಬೆಂಬಲವನ್ನು ಇತ್ತೀಚೆಗೆ ನೀಡುತ್ತಿದ್ದಾರೆ. ಈ ಹಿಂದೆ ಬಿಡುಗಡೆ ಆಗಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಹಾಗೂ ‘ದಿ ಕೇರಳ ಸ್ಟೋರಿ’ ಸಿನಿಮಾಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ್ದರು. ತಮ್ಮ ರಾಜ್ಯದಲ್ಲಿ ಬೃಹತ್ ಚಿತ್ರನಗರಿ ನಿರ್ಮಾಣ ಮಾಡಲು ಸಹ ಮುಂದಾಗಿದ್ದು, ಈ ಕುರಿತಂತೆ ಬಾಲಿವುಡ್​ನ ಕೆಲ ಹಿರಿಯ ನಟ, ನಿರ್ಮಾಪಕರನ್ನು ಕರೆಸಿ ಸಭೆ ಸಹ ನಡೆಸಿದ್ದರು. ಇದೀಗ ನಟ ರಜನೀಕಾಂತ್ ಅವರನ್ನು ಭೇಟಿಯಾಗಿದ್ದಾರೆ.

ಇದನ್ನೂ ಓದಿ:‘ಜೈಲರ್’ ಸಿನಿಮಾ ಬಿಡುಗಡೆ ದಿನವೇ ಆಶ್ರಮದಲ್ಲಿ ಸ್ವಾಮಿಗಳ ಸಂಘದಲ್ಲಿ ಕಳೆದ ರಜನೀಕಾಂತ್

ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ ಆಗಸ್ಟ್ 10 ರಂದು ಬಿಡುಗಡೆ ಆಗಿತ್ತು. ಸಿನಿಮಾದಲ್ಲಿ ರಜನೀಕಾಂತ್ ಜೊತೆಗೆ ಶಿವರಾಜ್ ಕುಮಾರ್, ಮೋಹನ್​ಲಾಲ್, ಸುನಿಲ್, ಜಾಕಿ ಶ್ರಾಫ್ ಅವರುಗಳು ನಟಿಸಿದ್ದಾರೆ. ಸಿನಿಮಾದಲ್ಲಿ ಶಿವಣ್ಣನ ಅತಿಥಿ ಪಾತ್ರಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾವು ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಸಕ್ಸಸ್ ಕಂಡಿದ್ದು, ಭಾರಿ ಮೊತ್ತ ಕಲೆಹಾಕಿದೆ. ಸಿನಿಮಾವನ್ನು ನೆಲ್ಸನ್ ನಿರ್ದೇಶನ ಮಾಡಿದ್ದು, ಸನ್ ಪಿಕ್ಚರ್ಸ್ ನಿರ್ಮಾಣ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ