AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನೀಕಾಂತ್-ಯೋಗಿ ಆದಿತ್ಯನಾಥ್ ಭೇಟಿ: ಕಾಲಿಗೆ ನಮಸ್ಕರಿಸಿದ ಸೂಪರ್ ಸ್ಟಾರ್

Rajinikanth: ನಟ ರಜನೀಕಾಂತ್ ಇಂದು (ಆಗಸ್ಟ್ 19) ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ರನ್ನು ಭೇಟಿ ಆಗಿದ್ದಾರೆ.

ರಜನೀಕಾಂತ್-ಯೋಗಿ ಆದಿತ್ಯನಾಥ್ ಭೇಟಿ: ಕಾಲಿಗೆ ನಮಸ್ಕರಿಸಿದ ಸೂಪರ್ ಸ್ಟಾರ್
ರಜನೀಕಾಂತ್
ಮಂಜುನಾಥ ಸಿ.
|

Updated on: Aug 19, 2023 | 10:35 PM

Share

ಜೈಲರ್‘ (Jailer) ಸಿನಿಮಾ ಭಾರಿ ಯಶಸ್ವಿಯಾಗಿದೆ. ಕೆಲವೇ ದಿನಗಳಲ್ಲಿ 300 ಕೋಟಿ ಕಲೆಕ್ಷನ್ ದಾಟಿ 500 ಕೋಟಿಯತ್ತ ದಾಪುಗಾಲು ಹಾಕುತ್ತಿದೆ. ತಮ್ಮ ಸಿನಿಮಾ ಇಲ್ಲಿ ಭರ್ಜರಿ ಯಶಸ್ಸು ಕಾಣುತ್ತಿರುವ ಸಮಯದಲ್ಲಿ ರಜನೀಕಾಂತ್ ಉತ್ತರ ಭಾರತಕ್ಕೆ ತೆರಳಿದ್ದು ಆಧ್ಯಾತ್ಮಿಕ ಪ್ರವಾಸದಲ್ಲಿದ್ದಾರೆ. ಹೃಷಿಕೇಶ, ಬದ್ರಿನಾಥ್, ಬಾಬಾ ಗುಹೆ ಇನ್ನಿತರೆ ಧಾರ್ಮಿಕ ಸ್ಥಳಗಳ ಸಂದರ್ಶನ ಮುಗಿಸಿ ಉತ್ತರ ಪ್ರದೇಶಕ್ಕೆ ರಜನೀಕಾಂತ್ (Rajinikanth) ಆಗಮಿಸಿದ್ದು ನಿನ್ನೆಯಷ್ಟೆ ಉತ್ತರ ಪ್ರದೇಶದ ರಾಜ್ಯಪಾಲರ ಭೇಟಿಯಾಗಿದ್ದರು. ಇಂದು (ಆಗಸ್ಟ್ 19) ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥರ ಭೇಟಿ ಆಗಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ ಅವರನ್ನು ಭೇಟಿ ಆಗಿರುವ ನಟ ರಜನೀಕಾಂತ್ ಯೋಗಿವರ ಕಾಲಿಗೆ ನಮಸ್ಕರಿಸಿದ್ದಾರೆ. ವಯಸ್ಸಿನಲ್ಲಿ, ಯೋಗಿ ಆದಿತ್ಯನಾಥರಿಂಗಿಂತಲೂ ಹಿರಿಯರಾದ ರಜನೀಕಾಂತ್, ಸಿಎಂ ಕಾಲಿಗೆ ನಮಸ್ಕರಿಸಿರುವ ಚಿತ್ರ, ವಿಡಿಯೋ ಸಖತ್ ವೈರಲ್ ಆಗಿದೆ. ರಜನೀಕಾಂತ್ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಒಟ್ಟಿಗೆ ‘ಜೈಲರ್’ ಸಿನಿಮಾ ವೀಕ್ಷಿಸಲಿದ್ದಾರೆ. ಆ ಬಳಿಕ ರಜನೀಕಾಂತ್ ಅವರು ಅಯೋಧ್ಯೆಗೆ ಸಹ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯವನ್ನು ವೀಕ್ಷಿಸಲಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಸಿನಿಮಾ ಮಂದಿಗೆ, ಸಿನಿಮಾಗಳಿಗೆ ಸಾಕಷ್ಟು ಬೆಂಬಲವನ್ನು ಇತ್ತೀಚೆಗೆ ನೀಡುತ್ತಿದ್ದಾರೆ. ಈ ಹಿಂದೆ ಬಿಡುಗಡೆ ಆಗಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಹಾಗೂ ‘ದಿ ಕೇರಳ ಸ್ಟೋರಿ’ ಸಿನಿಮಾಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ್ದರು. ತಮ್ಮ ರಾಜ್ಯದಲ್ಲಿ ಬೃಹತ್ ಚಿತ್ರನಗರಿ ನಿರ್ಮಾಣ ಮಾಡಲು ಸಹ ಮುಂದಾಗಿದ್ದು, ಈ ಕುರಿತಂತೆ ಬಾಲಿವುಡ್​ನ ಕೆಲ ಹಿರಿಯ ನಟ, ನಿರ್ಮಾಪಕರನ್ನು ಕರೆಸಿ ಸಭೆ ಸಹ ನಡೆಸಿದ್ದರು. ಇದೀಗ ನಟ ರಜನೀಕಾಂತ್ ಅವರನ್ನು ಭೇಟಿಯಾಗಿದ್ದಾರೆ.

ಇದನ್ನೂ ಓದಿ:‘ಜೈಲರ್’ ಸಿನಿಮಾ ಬಿಡುಗಡೆ ದಿನವೇ ಆಶ್ರಮದಲ್ಲಿ ಸ್ವಾಮಿಗಳ ಸಂಘದಲ್ಲಿ ಕಳೆದ ರಜನೀಕಾಂತ್

ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ ಆಗಸ್ಟ್ 10 ರಂದು ಬಿಡುಗಡೆ ಆಗಿತ್ತು. ಸಿನಿಮಾದಲ್ಲಿ ರಜನೀಕಾಂತ್ ಜೊತೆಗೆ ಶಿವರಾಜ್ ಕುಮಾರ್, ಮೋಹನ್​ಲಾಲ್, ಸುನಿಲ್, ಜಾಕಿ ಶ್ರಾಫ್ ಅವರುಗಳು ನಟಿಸಿದ್ದಾರೆ. ಸಿನಿಮಾದಲ್ಲಿ ಶಿವಣ್ಣನ ಅತಿಥಿ ಪಾತ್ರಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾವು ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಸಕ್ಸಸ್ ಕಂಡಿದ್ದು, ಭಾರಿ ಮೊತ್ತ ಕಲೆಹಾಕಿದೆ. ಸಿನಿಮಾವನ್ನು ನೆಲ್ಸನ್ ನಿರ್ದೇಶನ ಮಾಡಿದ್ದು, ಸನ್ ಪಿಕ್ಚರ್ಸ್ ನಿರ್ಮಾಣ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್