AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್ ನಿವಾಸದ ಆವರಣಕ್ಕೆ ನುಗ್ಗಿದ ನೀರು; ವೈರಲ್ ಆಯ್ತು ವಿಡಿಯೋ

ರಜನಿಕಾಂತ್ ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದರು. ಇದಾದ ಬಳಿಕ ಅವರು ಚೇತರಿಕೆ ಕಂಡರು. ಈಗ ಅವರ ನಿವಾಸಕ್ಕೆ ಸಮಸ್ಯೆ ಆಗಿದೆ. ರಜನಿಕಾಂತ್ ಇರುವ ಪೋಯಿಸ್ ಗಾರ್ಡನ್ ಮನೆಯಲ್ಲಿಯೂ ನೀರು ನಗ್ಗಿದೆ. ರಜನಿಕಾಂತ್ ಮನೆ ತಗ್ಗು ಪ್ರದೇಶದಲ್ಲಿ ಇದೆ.

ರಜನಿಕಾಂತ್ ನಿವಾಸದ ಆವರಣಕ್ಕೆ ನುಗ್ಗಿದ ನೀರು; ವೈರಲ್ ಆಯ್ತು ವಿಡಿಯೋ
ರಜನಿ
ರಾಜೇಶ್ ದುಗ್ಗುಮನೆ
|

Updated on: Oct 16, 2024 | 11:29 AM

Share

ಚೆನ್ನೈನಲ್ಲಿ ಭಾರೀ ಮಳೆ ಆಗುತ್ತಿದೆ. ಇದರಿಂದ ಅನೇಕ ಕಡೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣ ಆಗಿದೆ. ರಜನಿಕಾಂತ್ ಇರುವ ಪೋಯಿಸ್ ಗಾರ್ಡನ್ ಮನೆಯಲ್ಲಿಯೂ ನೀರು ನಗ್ಗಿದೆ. ರಜನಿಕಾಂತ್ ಮನೆ ತಗ್ಗು ಪ್ರದೇಶದಲ್ಲಿ ಇರುವುದರಿಂದ ಸಮಸ್ಯೆ ಉಂಟಾಗಿದೆ. ಈ ಸಂದರ್ಭದ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಚೆನ್ನೈಗೆ ಸಂಬಂಧಿಸಿದ ಹಲವು ವಿಡಿಯೋಗಳು ವೈರಲ್ ಆಗಿವೆ. ರಜನಿಕಾಂತ್ ಮನೆಯ ಎದುರಿನ ರಸ್ತೆ ಮಾತ್ರವಲ್ಲದೆ, ಅವರ ಮನೆಯ ಆವರಣದಲ್ಲಿಯೂ ನೀರು ತುಂಬಿದೆ. ಆದರೆ, ನೀರು ಮನೆಯ ಒಳಕ್ಕೆ ನುಗ್ಗಿಲ್ಲ. ರಜನಿಕಾಂತ್ ಹಾಗೂ ಕುಟುಂಬದವರು ವಿಡಿಯೋದಲ್ಲಿ ಕಾಣಿಸಿಲ್ಲ. ಈ ರೀತಿ ಆಗುತ್ತಿರುವುದು ಇದೇ ಮೊದಲೇನು ಅಲ್ಲ. ಈ ಮೊದಲು ಚೆನ್ನೈನಲ್ಲಿ ಭಾರೀ ಮಳೆ ಆದಾಗ ಇದೇ ರೀತಿ ಆಗಿತ್ತು.

ಮಂಗಳವಾರದಿಂದ (ಅಕ್ಟೋಬರ್ 16) ಚೆನ್ನೈನಲ್ಲಿ ಬಿಟ್ಟೂ ಬಿಡದೆ ಮಳೆ ಸುರಿಯುತ್ತಿದೆ. ರಸ್ತೆಗಳೆಲ್ಲ ನೀರಿನಿಂದ ತುಂಬಿ ಹೋಗಿವೆ. ನಗರದಲ್ಲಿ ರೆಡ್ ಅಲರ್ಟ್​ ಘೋಷಣೆ ಆಗಿದೆ. ತಮಿಳುನಾಡು ಸರ್ಜಾ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಬುಧವಾರ ವರ್ಕ್​ಫ್ರಮ್ ಹೋಮ್ ಮಾಡಲು ಸೂಚನೆ ನೀಡಿದೆ.

ರಜನಿಕಾಂತ್ ಅವರು ಇತ್ತಿಚೆಗೆ ಸುದ್ದಿ ಆಗಿದ್ದರು. ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಾಯಿತು. ಅವರ ರಕ್ತನಾಳಗಳು ಉಬ್ಬಿದ್ದವು ಎನ್ನಲಾಗಿದೆ. ಕೆಲ ದಿನ ಆಸ್ಪತ್ರೆಯಲ್ಲಿ ಇದ್ದು ನಂತರ ಡಿಸ್ಚಾರ್ಜ್ ಆದರು. ಕೆಲ ದಿನ ರೆಸ್ಟ್ ಮಾಡಿ ಅವರು ಶೂಟ್​ನಲ್ಲಿ ಭಾಗವಹಿಸಬಹುದು ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ರತನ್ ಟಾಟಾಗೆ ತಲೆಬಾಗಿ ನಮಸ್ಕಾರ ಮಾಡಿದ್ದ ರಜನಿಕಾಂತ್; ನೆನಪು ಹಂಚಿಕೊಂಡ ಸೂಪರ್ ಸ್ಟಾರ್

ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಅಕ್ಟೋಬರ್ 10ರಂದು ರಿಲೀಸ್ ಆಯಿತು. ಈ ಸಿನಿಮಾ ಸಾಧಾರಣ ಗಳಿಕೆ ಮಾಡಿದೆ. ಈಗ ಅವರು ಲೋಕೇಶ್ ಕನಗರಾಜ್ ಅವರ ‘ಕೂಲಿ’ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರವೇ ಅವರು ಸಿನಿಮಾ ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ