AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಗೂ ಮುನ್ನವೇ ‘ಕಣ್ಣಪ್ಪ’ ಸಿನಿಮಾ ನೋಡಿ ಭೇಷ್ ಎಂದ ರಜನಿಕಾಂತ್

ಬಹಳ ಅದ್ದೂರಿಯಾಗಿ ‘ಕಣ್ಣಪ್ಪ’ ಸಿನಿಮಾ ನಿರ್ಮಾಣ ಮಾಡಲಾಗಿದೆ. ರಜನಿಕಾಂತ್ ಅವರಿಗೆ ಈ ಚಿತ್ರ ಇಷ್ಟ ಆಗಿದೆ. ವಿಷ್ಣು ಮಂಜು ಅಭಿನಯದ ಈ ಸಿನಿಮಾವನ್ನು ಇತ್ತೀಚೆಗೆ ರಜನಿಕಾಂತ್ ವೀಕ್ಷಿಸಿ, ತಮ್ಮ ವಿಮರ್ಶೆಯನ್ನು ತಿಳಿಸಿದರು. ಇದರಿಂದಾಗಿ ನಿರ್ಮಾಪಕ, ನಟ ಮೋಹನ್ ಬಾಬು ಅವರಿಗೆ ದೊಡ್ಡ ಬೆಂಬಲ ಸಿಕ್ಕಂತಾಗಿದೆ.

ಬಿಡುಗಡೆಗೂ ಮುನ್ನವೇ ‘ಕಣ್ಣಪ್ಪ’ ಸಿನಿಮಾ ನೋಡಿ ಭೇಷ್ ಎಂದ ರಜನಿಕಾಂತ್
Vishnu Manchu, Rajinikanth, Mohan Babu
ಮದನ್​ ಕುಮಾರ್​
|

Updated on: Jun 17, 2025 | 6:20 PM

Share

ವಿಷ್ಣು ಮಂಚು‌ ಅಭಿನಯದ ‘ಕಣ್ಣಪ್ಪ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಇತ್ತೀಚೆಗೆ ಈ ಸಿನಿಮಾವನ್ನು ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅವರು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ. ಅದಕ್ಕೆ ಕಾರಣ ಆಗಿದ್ದು ‘ಕಣ್ಣಪ್ಪ’ (Kannappa) ನಿರ್ಮಾಪಕ ಮೋಹನ್ ಬಾಬು ಮತ್ತು ಕಾಲಿವುಡ್ ನಟ ರಜನಿಕಾಂತ್ ನಡುವೆ ಇರುವ ಸ್ನೇಹ. 30 ವರ್ಷಗಳ ಹಿಂದೆ ತೆಲುಗಿನ ‘ಪೆದರಾಯುಡು’ ಸಿನಿಮಾದಲ್ಲಿ ರಜನಿಕಾಂತ್ ಮತ್ತು ಮೋಹನ್ ಬಾಬು (Mohan Babu) ಅವರು ಒಟ್ಟಿಗೆ ನಟಿಸಿದ್ದರು.

1995ರ ಜೂನ್ 15ರಂದು ‘ಪೆದರಾಯುಡು’ ತೆರೆಕಂಡಿತ್ತು. ಆ ಕಾಲದಲ್ಲಿ ಸಿನಿಮಾ ಸೂಪರ್ ಹಿಟ್ ಆಗಿತ್ತು. ರವಿ ರಾಜ‌ ಪಿನಿಸೆಟ್ಟಿ ಅವರು ನಿರ್ದೇಶನ ಮಾಡಿದ್ದರು. ಈಗ ಆ ಸಿನಿಮಾಗೆ 30 ವರ್ಷ ಕಳೆದಿದೆ. ಆ ಸ್ಮರಣೀಯ ಕ್ಷಣಗಳನ್ನು ರಜನಿಕಾಂತ್ ಮತ್ತು ಮೋಹನ್ ಬಾಬು ಅವರು ಮೆಲುಕು ಹಾಕಿದರು. ಚೆನ್ನೈನಲ್ಲಿ ಅವರಿಬ್ಬರು ಭೇಟಿಯಾದರು. ‘ಪೆದರಾಯುಡು’ ಚಿತ್ರ 30 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಬ್ಬರೂ ಸ್ಟಾರ್ ನಟರು ‘ಕಣ್ಣಪ್ಪ’ ಸಿನಿಮಾವನ್ನು ವೀಕ್ಷಿಸಿದರು.

ಜೂನ್ 27ರಂದು ಜಾಗತಿಕ ಮಟ್ಟದಲ್ಲಿ ‘ಕಣ್ಣಪ್ಪ’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಶಿವನ ಭಕ್ತ ಕಣ್ಣಪ್ಪನ ಕಹಾನಿಯನ್ನು ವಿಶಿಷ್ಟವಾಗಿ ತೋರಿಸಲಾಗುತ್ತಿದೆ. ಸಿನಿಮಾ ನೋಡಿದ ನಂತರ ರಜನಿಕಾಂತ್ ಭಾವುಕರಾದರು ಎಂದು ಚಿತ್ರತಂಡ ತಿಳಿಸಿದೆ. ‘ಇದು ಅಸಾಧಾರಣ ಸಿನಿಮಾ. ಎಮೋಷನ್, ದೃಶ್ಯ ವೈಭವ ಮತ್ತು ಆಧ್ಯಾತ್ಮ ತುಂಬಾ ಚೆನ್ನಾಗಿದೆ’ ಎಂದು ಅವರು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ
Image
ಕೇರಳಕ್ಕೆ ಬಂದ ರಜನಿಕಾಂತ್: ಅಭಿಮಾನಿಗಳ ಸಂಭ್ರಮ ಹೇಗಿತ್ತು ನೋಡಿ
Image
ಕಂಡಕ್ಟರ್ ಆಗಿದ್ದಾಗಲೇ ರಜನಿಕಾಂತ್ ಸ್ಟೈಲಿಶ್​
Image
ರಜನಿಕಾಂತ್ ನಟನೆಯ ‘ಜೈಲರ್ 2’ ಟೀಸರ್ ನೋಡಿದ್ರಾ? ಮತ್ತೆ ಆ್ಯಕ್ಷನ್ ಅವತಾರ
Image
ಸಖತ್ ಶ್ರೀಮಂತ ರಜನಿಕಾಂತ್; ಒಂದು ಚಿತ್ರಕ್ಕೆ ಪಡೆಯೋ ಸಂಭಾವನೆ ಎಷ್ಟು?  

ಈ ಭೇಟಿ ಬಳಿಕ ರಜನಿಕಾಂತ್ ಬಗ್ಗೆ ಮೋಹನ್ ಬಾಬು ಮಾತನಾಡಿ, ‘ನಾನು 22 ವರ್ಷಗಳಿಂದ ನಿರೀಕ್ಷಿಸುತ್ತಿದ್ದ ರಜನಿಕಾಂತ್ ಅವರ ಆಲಿಂಗನ ಇಂದು ದೊರೆತಿದೆ’ ಎಂದು ಹೇಳಿದರು. ಕಣ್ಣಪ್ಪ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ಅವರು ನಿರ್ದೇಶನ‌ ಮಾಡಿದ್ದಾರೆ. ಮಗನ ಸಿನಿಮಾಗೆ ಮೋಹನ್‌ ಬಾಬು ಬಂಡವಾಳ ಹೂಡಿದ್ದಾರೆ. ಬಹುತಾರಾಗಣದ ಈ‌ ಚಿತ್ರವು ತೆಲುಗು, ಕನ್ನಡ, ಮಲಯಾಳಂ, ತಮಿಳು, ಹಿಂದಿ‌ ಭಾಷೆಗಳಲ್ಲಿ‌ ತೆರೆಕಾಣಲಿದೆ.

ಇದನ್ನೂ ಓದಿ: ಮಗನಿಗಾಗಿ ಒಂದಾದ ಧನುಷ್, ಐಶ್ವರ್ಯಾ ರಜನಿಕಾಂತ್; ಫೋಟೋ ವೈರಲ್

‘ಕಣ್ಣಪ್ಪ’ ಸಿನಿಮಾದಲ್ಲಿ ವಿಷ್ಣು ಮಂಚು, ಮೋಹನ್ ಬಾಬು, ಆರ್. ಶರತ್​ಕುಮಾರ್, ಮಧೂ ಮುಂತಾದವರು ನಟಿಸಿದ್ದಾರೆ. ಮೋಹನ್ ಲಾಲ್, ಪ್ರಭಾಸ್, ಅಕ್ಷಯ್ ಕುಮಾರ್, ಕಾಜಲ್ ಅಗರ್​ವಾಲ್ ಮುಂತಾದ ಸ್ಟಾರ್ ಕಲಾವಿದರು ಅತಿಥಿ ಪಾತ್ರಗಳನ್ನು ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ