AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಓಂ ಚಿತ್ರದ ಎದುರು ನನ್ನ ಬಾಷಾ ಏನೂ ಅಲ್ಲ’; ಉಪ್ಪಿ ಬಗ್ಗೆ ರಜನಿ ಮೆಚ್ಚುಗೆಯ ಮಾತು

ರಜನಿಕಾಂತ್ ಅವರು ಉಪೇಂದ್ರ ಅವರ ನಿರ್ದೇಶನ ಕೌಶಲ್ಯವನ್ನು ಮೆಚ್ಚಿಕೊಂಡಿದ್ದಾರೆ. ಲೋಕೇಶ್ ಕನಗರಾಜ್ ಸೇರಿದಂತೆ ಅನೇಕ ನಿರ್ದೇಶಕರು ಉಪೇಂದ್ರರಿಂದ ಸ್ಫೂರ್ತಿ ಪಡೆದಿದ್ದಾರೆ ಎಂದು ರಜನಿ ಹೇಳಿದ್ದಾರೆ. ‘ಓಂ’ ಮತ್ತು ‘ತರ್ಲೆ ನನ್ಮಗ’ ಮುಂತಾದ ಚಿತ್ರಗಳು ಕಲ್ಟ್ ಕ್ಲಾಸಿಕ್ ಆಗಿವೆ. ಉಪೇಂದ್ರ ಅವರ ಚಿತ್ರಗಳ ವಿಶಿಷ್ಟ ಶೈಲಿ ಅನೇಕರಿಗೆ ಮಾದರಿಯಾಗಿದೆ.

‘ಓಂ ಚಿತ್ರದ ಎದುರು ನನ್ನ ಬಾಷಾ ಏನೂ ಅಲ್ಲ’; ಉಪ್ಪಿ ಬಗ್ಗೆ ರಜನಿ ಮೆಚ್ಚುಗೆಯ ಮಾತು
ಉಪೇಂದ್ರ-ರಜನಿ
ರಾಜೇಶ್ ದುಗ್ಗುಮನೆ
|

Updated on:Aug 12, 2025 | 9:02 AM

Share

ಉಪೇಂದ್ರ ಅವರ ನಿರ್ದೇಶನಕ್ಕೆ ಫಿದಾ ಆಗದವರೇ ಇಲ್ಲ. ಅಂತಹ ಸಿನಿಮಾಗಳನ್ನು ಅವರು ತಮ್ಮ ವೃತ್ತಿ ಜೀವನದಲ್ಲಿ ನೀಡಿದ್ದಾರೆ. ಅವರ ಸ್ಟೈಲ್ ಅನೇಕ ನಿರ್ದೇಶಕರಿಗೆ ಸ್ಫೂರ್ತಿ ಎಂದರೂ ತಪ್ಪಾಗಲಾರದು. ನಿರ್ದೇಶಕ ಲೋಕೇಶ್ ಕನಗರಾಜ್ ಸೇರಿದಂತೆ ಅನೇಕ ನಿರ್ದೇಶಕರು ತಮ್ಮ ಸಿನಿಮಾ ಮೇಕಿಂಗ್​ನಲ್ಲಿ ಉಪೇಂದ್ರ ಪ್ರಭಾವ ಇದೆ ಎಂದು ಒಪ್ಪಿಕೊಂಡಿದ್ದು ಇದೆ. ಈಗ ತಮಿಳಿನ ಸೂಪರ್​ಸ್ಟಾರ್ ರಜನಿಕಾಂತ್ ಅವರು ಉಪ್ಪಿಯನ್ನು (Upendra) ಹೊಗಳಿದ್ದಾರೆ.

ತಮಿಳಿನ ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ಅವರ ‘ಕೂಲಿ’ ಸಿನಿಮಾ ಆಗಸ್ಟ್ 14ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ರಜನಿಕಾಂತ್ ಹೀರೋ. ಉಪೇಂದ್ರ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಆಮಿರ್ ಖಾನ್, ಅಕ್ಕಿನೇನಿ ನಾಗಾರ್ಜುನ ಸೇರಿದಂತೆ ಅನೇಕರು ಸಿನಿಮಾದಲ್ಲಿ ಇದ್ದಾರೆ. ಈ ಚಿತ್ರಕ್ಕೆ ಈಗಾಗಲೇ ಸಾಕಷ್ಟು ಹೈಪ್ ಸೃಷ್ಟಿ ಆಗಿದೆ. ಈ ಚಿತ್ರದ ಈವೆಂಟ್​ನಲ್ಲಿ ರಜನಿ ಅವರು ಉಪೇಂದ್ರ ಬಗ್ಗೆ ಮಾತನಾಡಿದರು.

ಇದನ್ನೂ ಓದಿ
Image
21ನೇ ವಯಸ್ಸಿಗೆ ಮದುವೆ ಆದ ಸ್ಟಾರ್ ನಟಿ; ಆ ಹೀರೋಯಿನ್ ಬಗ್ಗೆ ಇಲ್ಲಿದೆ ವಿವರ
Image
‘ಸು ಫ್ರಮ್ ಸೋ’ಗೆ 3ನೇ ಸೋಮವಾರವೂ ತಗ್ಗದ ಕಲೆಕ್ಷನ್; 100 ಕೋಟಿ ಕ್ಲಬ್ ಪಕ್ಕಾ
Image
ಗೇಲ್ ಜೊತೆ ಚಂದನ್ ಶೆಟ್ಟಿ ವಿಡಿಯೋ ಸಾಂಗ್; ಕನ್ನಡ ಹಾಡಿಗೆ ಎಗ್ಸೈಟ್ ಆದ್ರು
Image
‘ಕಾಟೇರ’ ಕಲೆಕ್ಷನ್​ ದಾಖಲೆ ಮುರಿಯಲು ‘ಸು ಫ್ರಮ್ ಸೋ’ಗೆ ಬೇಕು ಕೆಲವೇ ಕೋಟಿ

‘ಉಪೇಂದ್ರ ಅವರ ಅತಿಥಿ ಪಾತ್ರ ಸಿನಿಮಾದಲ್ಲಿ ಇದೆ ಎಂದು ನಿರ್ದೇಶಕರು ಹೇಳಿದರು. ಉಪೇಂದ್ರ ಭಾರತದ ಅನೇಕ ನಿರ್ದೇಶಕರಿಗೆ ಸ್ಫೂರ್ತಿ. ಹಿಂದಿ, ಮಲಯಾಳಂ, ತಮಿಳು, ತೆಲುಗು ಹೀಗೆ ಎಲ್ಲ ನಿರ್ದೇಶಕರು ಬಂದಿದ್ದು ಉಪೇಂದ್ರ ಅವರನ್ನು ನೋಡಿ. ಎಂತಹ ಅದ್ಭುತ ನಿರ್ದೇಶಕರು’ ಎಂದಿದ್ದಾರೆ ರಜನಿಕಾಂತ್.

ಉಪ್ಪಿ ಬಗ್ಗೆ ರಜನಿ ಮಾತು

‘ಉಪೇಂದ್ರಗೆ ನಟನೆಗಿಂತ ನಿರ್ದೇಶನದ ಬಗ್ಗೆ ಹೆಚ್ಚು ಪ್ಯಾಷನ್. ಅವರು ಶಿವರಾಜ್​ಕುಮಾರ್ ಜೊತೆ ಓಂ ಸಿನಿಮಾ ಮಾಡಿದ್ದರು. ನನಗೆ ಹೇಗೆ ಬಾಷಾ ಚಿತ್ರವೋ, ಅಲ್ಲಿ ಓಮ್. ಈ ಸಿನಿಮಾ ನನ್ನ ಬಾಷಾ ಚಿತ್ರಕ್ಕಿಂತ ದೊಡ್ಡದು. ಲೋಕೇಶ್ ಕನಗರಾಜ್ ಈಗ ಮಾಡುತ್ತಿರುವ ಪಾತ್ರಗಳನ್ನು ಉಪ್ಪಿ, ಆಗಲೇ ಮಾಡಿದ್ದರು’ ಎಂದು ಮೆಚ್ಚುಗೆ ಸೂಚಿಸಿದರು.

ಇದನ್ನೂ ಓದಿ: ‘ಕೂಲಿ’ ಚಿತ್ರದ ರಜನಿ ಸಂಭಾವನೆಯಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು; ಉಪೇಂದ್ರ ಪಡೆದಿದ್ದೆಷ್ಟು?

ಉಪೇಂದ್ರ ನಿರ್ದೇಶನದಲ್ಲಿ ಮೂಡಿ ಬಂದ, ‘ಓಂ’, ‘ತರ್ಲೆ ನನ್ಮಗ’, ‘ಶ್’, ‘ಎ’ ಹಾಗೂ ‘ಉಪೇಂದ್ರ ಸಿನಿಮಾಗಳು ಕಲ್ಟ್ ಕ್ಲಾಸಿಕ್ ಎನಿಸಿಕೊಂಡಿವೆ. ಒಂದಕ್ಕಿಂತ ಒಂದು ಸಿನಿಮಾಗಳು ಭಿನ್ನವಾಗಿವೆ. ಈಗ ಅವರು ನಿರ್ದೇಶನಕ್ಕಿಂತ ಹೆಚ್ಚಾಗಿ ನಟನೆಯಲ್ಲಿ ತೊಡಗಿಕೊಂಡಿದ್ದಾರೆ. ಅವರು ‘ಪ್ರಜಾಕೀಯ’ ಪಕ್ಷ ಆರಂಭಿಸಿ, ಚುನಾವಣೆ ಕೂಡ ಎದುರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:01 am, Tue, 12 August 25

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ