AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೀರ ಸಿಂಹ ರೆಡ್ಡಿ’ ಚಿತ್ರ ನೋಡಿ ವಿಮರ್ಶೆ ತಿಳಿಸಿದ ರಜನಿಕಾಂತ್​; ಬಾಲಯ್ಯನ ಚಿತ್ರ ಇಷ್ಟ ಆಯ್ತಾ?

ರಜನಿಕಾಂತ್ ಅವರು ಸೂಪರ್​ಸ್ಟಾರ್. ಅವರಿಂದ ಮೆಚ್ಚುಗೆ ಪಡೆದುಕೊಳ್ಳಬೇಕು ಎಂಬುದು ಅನೇಕ ನಿರ್ದೇಶಕರ ಕನಸಾಗಿರುತ್ತದೆ. ಈಗ ಅಂತಹ ಅವಕಾಶವನ್ನು ಗೋಪಿಚಂದ್ ಅವರು ಪಡೆದುಕೊಂಡಿದ್ದಾರೆ.

‘ವೀರ ಸಿಂಹ ರೆಡ್ಡಿ’ ಚಿತ್ರ ನೋಡಿ ವಿಮರ್ಶೆ ತಿಳಿಸಿದ ರಜನಿಕಾಂತ್​; ಬಾಲಯ್ಯನ ಚಿತ್ರ ಇಷ್ಟ ಆಯ್ತಾ?
ರಜನಿಕಾಂತ್​-ನಂದಮೂರಿ ಬಾಲಕೃಷ್ಣ
ರಾಜೇಶ್ ದುಗ್ಗುಮನೆ
|

Updated on:Jan 30, 2023 | 9:28 AM

Share

ಈ ವರ್ಷ ಸಂಕ್ರಾಂತಿ ಪ್ರಯುಕ್ತ ನಂದಮೂರಿ ಬಾಲಕೃಷ್ಣ (Nandamuri Balakrishna) ನಟನೆಯ ‘ವೀರ ಸಿಂಹ ರೆಡ್ಡಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಬಾಲಯ್ಯ ಅವರು ಮತ್ತೊಂದು ಗೆಲುವು ಕಂಡಿದ್ದಾರೆ. ಈ ಚಿತ್ರ ಸಖತ್ ಮಾಸ್ ಆಗಿದೆ. ಇದರಿಂದ ಅವರು ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಈಗ ಈ ಚಿತ್ರವನ್ನು ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅವರು ವೀಕ್ಷಣೆ ಮಾಡಿದ್ದಾರೆ. ಅವರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ನಿರ್ದೇಶಕ ಗೋಪಿಚಂದ್​ ಮಲಿನೇನಿ ಅವರು ಟ್ವೀಟ್ ಮಾಡಿದ್ದಾರೆ.

ರಜನಿಕಾಂತ್ ಅವರು ಸೂಪರ್​ಸ್ಟಾರ್. ಅವರ ಸಿನಿಮಾ ನೋಡೋಕೆ ಅಭಿಮಾನಿಗಳು ಕಾದು ಕೂತಿರುತ್ತಾರೆ. ಅವರಿಂದ ಮೆಚ್ಚುಗೆ ಪಡೆದುಕೊಳ್ಳಬೇಕು ಎಂಬುದು ಅನೇಕ ನಿರ್ದೇಶಕರ ಕನಸಾಗಿರುತ್ತದೆ. ಈಗ ಅಂತಹ ಅವಕಾಶವನ್ನು ಗೋಪಿಚಂದ್ ಅವರು ಪಡೆದುಕೊಂಡಿದ್ದಾರೆ. ರಜನಿಕಾಂತ್ ಅವರು ಕರೆ ಮಾಡಿರುವ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.

‘ರಜನಿಕಾಂತ್ ಅವರು ಕಾಲ್ ಮಾಡಿದ್ದರು. ಅವರು ವೀರ ಸಿಂಹ ರೆಡ್ಡಿ ಚಿತ್ರವನ್ನು ವೀಕ್ಷಿಸಿದ್ದಾರೆ ಮತ್ತು ಇಷ್ಟವಾಗಿದೆ. ನನ್ನ ಚಿತ್ರದ ಬಗ್ಗೆ ಅವರ ಮೆಚ್ಚುಗೆಯ ಮಾತುಗಳು ನನಗೆ ಈ ಜಗತ್ತಿನಲ್ಲಿ ಎಲ್ಲಕ್ಕಿಂತ ಹೆಚ್ಚು. ಧನ್ಯವಾದಗಳು ರಜನಿ ಸರ್’ ಎಂದು ಬರೆದುಕೊಂಡಿದ್ದಾರೆ. ರಜನಿಕಾಂತ್ ಅವರಿಂದ ಈ ಚಿತ್ರಕ್ಕೆ ಮೆಚ್ಚುಗೆ ಸಿಕ್ಕಿದ್ದಕ್ಕೆ ಅನೇಕರು ಖುಷಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಜನಿಕಾಂತ್ ಭೇಟಿ ವೇಳೆ ಪಂಚೆ ಬದಲು ಪ್ಯಾಂಟ್​ ಧರಿಸಿದ್ದಕ್ಕೆ ಕಾರಣ ನೀಡಿದ ನಟ ರಿಷಬ್ ಶೆಟ್ಟಿ

ರಜನಿಕಾಂತ್ ಅವರು ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರವನ್ನು ವೀಕ್ಷಣೆ ಮಾಡಿದ್ದರು. ಈ ಸಿನಿಮಾ ಅವರಿಗೆ ಇಷ್ಟವಾಗಿತ್ತು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಅಲ್ಲದೆ ರಿಷಬ್ ಶೆಟ್ಟಿಯನ್ನು ಸ್ವತಃ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದು ರಿಷಬ್​ ಶೆಟ್ಟಿಗೆ ಖುಷಿ ತಂದಿತ್ತು. ಆ ಬಗ್ಗೆ ರಿಷಬ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡು ರಜನಿಕಾಂತ್​ಗೆ ಧನ್ಯವಾದ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:28 am, Mon, 30 January 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ