AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಕಂಡಕ್ಟರ್ ಆಗಿದ್ದಾಗ ರಜನಿಕಾಂತ್​​ಗೆ ಹುಡುಗಿ ಮೇಲೆ ಮೂಡಿತ್ತು ಪ್ರೀತಿ; ಆಮೇಲೆ ಏನಾಯ್ತು?

ರಜನಿಕಾಂತ್ ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದಾಗ 10ಜೆ ಬಸ್ ನಂಬರ್​ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗುದೆ. ಅವರು ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದಾಹ ಹುಡಗಿ ಒಬ್ಬಳನ್ನು ನೋಡಿದ್ದರು. ಅವರ ಬಳಿ  ಹೋಗಿ ರಜನಿಕಾಂತ್ ಅವರು ಮದುವೆ ಪ್ರಪೋಸ್ ಮಾಡಿದ್ದರು. ಮುಂದೇನಾಯ್ತು? ಈ ಸ್ಟೋರಿಯಲ್ಲಿದೆ ಉತ್ತರ.

ಬೆಂಗಳೂರಲ್ಲಿ ಕಂಡಕ್ಟರ್ ಆಗಿದ್ದಾಗ ರಜನಿಕಾಂತ್​​ಗೆ ಹುಡುಗಿ ಮೇಲೆ ಮೂಡಿತ್ತು ಪ್ರೀತಿ; ಆಮೇಲೆ ಏನಾಯ್ತು?
ರಜಿನಿ-ಲತಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 12, 2024 | 7:39 AM

Share

ರಜನಿಕಾಂತ್ ಅವರು ಕರ್ನಾಟಕದವರು. ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ನಟನೆಯ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಚೆನ್ನೈ ತೆರಳಿದರು. ಈಗ ಅವರು ಕಾಲಿವುಡ್​ನ ಬಹುಬೇಡಿಕೆಯ ಹೀರೋ ಎನಿಸಿಕೊಂಡಿದ್ದಾರೆ. ರಜನಿಕಾಂತ್ ಅವರು ಫ್ಯಾಮಿಲಿ ಮ್ಯಾನ್ ಕೂಡ ಹೌದು. ಲತಾ ರಂಗಾಚಾರಿ ಅವರನ್ನು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಾ ಇದ್ದಾರೆ. ಅವರಿಗೆ ಜೀವನದಲ್ಲಿ ಈ ಮೊದಲು ಲವ್ ಫೇಲ್ಯೂವರ್ ಆಗಿತ್ತು. ಅವರು ತಮ್ಮ ಬಯೋಗ್ರಾಫಿಯಲ್ಲಿ ಈ ಬಗ್ಗೆ ಹೇಳಿಕೊಂಡಿದ್ದರು.

ರಜನಿಕಾಂತ್ ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದಾಗ 10ಜೆ ಬಸ್ ನಂಬರ್​ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗುದೆ. ಅವರು ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದಾಹ ಹುಡಗಿ ಒಬ್ಬಳನ್ನು ನೋಡಿದ್ದರು. ಅವರ ಬಳಿ  ಹೋಗಿ ರಜನಿಕಾಂತ್ ಅವರು ಮದುವೆ ಪ್ರಪೋಸ್ ಮಾಡಿದ್ದರು. ಆದರೆ, ಆ ಹುಡುಗಿ ಇದನ್ನು ರಿಜೆಕ್ಟ್ ಮಾಡಿದ್ದಳು.

ಇದನ್ನೂ ಓದಿ: ಈ ವಿಶೇಷ ದಿನಕ್ಕೆ ರಿಲೀಸ್ ಆಗಲಿದೆ ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾ

‘ನೀವು ನೋಡೋಕೆ ಕಪ್ಪಿದ್ದೀರಾ, ಕಳ್ಳನ ರೀತಿ ಕಾಣುತ್ತೀರಾ’ ಎಂದು ರಜನಿಕಾಂತ್ ಅವರಿಗೆ ಆ ಹುಡುಗಿ ಹೇಳಿದ್ದಳು. ಈ ಮೂಲಕ ಅವರ ಪ್ರೀತಿ ರಿಜೆಕ್ಟ್ ಆಯಿತು. ಇದು ರಜನಿಕಾಂತ್ ಅವರಿಗೆ ಸಾಕಷ್ಟು ಬೇಸರ ಮೂಡಿಸಿತ್ತು. ಈ ಕಾರಣದಿಂದಲೇ ರಜನಿಕಾಂತ್ ಅವರಿಗೆ ಸುಂದರ ಹುಡುಗಿಯನ್ನು ಮದುವೆ ಆಗಬೇಕು ಎನ್ನುವ ಆಸೆ ಇತ್ತು. ಕೊನೆಗೂ ಅದು ಈಡೇರಿದೆ. ರಜನಿಕಾಂತ್ ಅವರು ಲತಾ ಅವರನ್ನು ಮದುವೆ ಆದರು. ಅವರು ಬೆಳ್ಳಗೆ ಇದ್ದಾರೆ.

1980ರಲ್ಲಿ ಲತಾ ಅವರ ಭೇಟಿ ರಜನಿಕಾಂತ್​ಗೆ ಆಯಿತು. ಕಾಲೇಜ್​ ಒಂದರ ಮ್ಯಾಗಜಿನ್​ಗೆ ಸಂದರ್ಶನ ಮಾಡಲು ಲತಾ ಆಗಮಿಸಿದ್ದರು. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿತ್ತು. ಸಂದರ್ಶನದ ಕೊನೆ ಆಗುವುದರೊಳಗೆ ರಜನಿಕಾಂತ್ ಲತಾಗೆ ಪ್ರಪೋಸ್ ಮಾಡಿದ್ದರು. ವಿಶೇಷ ಎಂದರೆ ಮುಂದಿನ ವರ್ಷ ಅಂದರೆ 1981ರಲ್ಲಿ ಇಬ್ಬರೂ ವಿವಾಹ ಆದರು. ಈ ದಂಪತಿಗೆ ಐಶ್ವರ್ಯಾ ಹಾಗೂ ಸೌಂದರ್ಯಾ ಹೆಸರಿನ ಇಬ್ಬರು ಮಕ್ಕಳಿದ್ದಾರೆ. ರಜನಿ ಸದ್ಯ ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ