AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಸಿಎಂ ಆಗಿದ್ದಕ್ಕೆ ಏನ್ ಹೇಳ್ತೀರಿ? ಕೈ ಮುಗಿದು ಮುಂದಕ್ಕೆ ಹೋದ ರಜನಿಕಾಂತ್

ನಟ ದಳಪತಿ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ರಜನಿಕಾಂತ್ ಅವರಿಗೆ ಪ್ರಶ್ನೆ ಕೇಳಲಾಗಿದೆ. ಆ ಪ್ರಶ್ನೆಗೆ ರಜನಿಕಾಂತ್ ಅವರು ಪ್ರತಿಕ್ರಿಯೆ ನೀಡಿದ ರೀತಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ವಿಡಿಯೋ ವೈರಲ್ ಆಗಿದೆ.

ವಿಜಯ್ ಸಿಎಂ ಆಗಿದ್ದಕ್ಕೆ ಏನ್ ಹೇಳ್ತೀರಿ? ಕೈ ಮುಗಿದು ಮುಂದಕ್ಕೆ ಹೋದ ರಜನಿಕಾಂತ್
Rajinikanth, Vijay
ಮದನ್​ ಕುಮಾರ್​
|

Updated on: May 12, 2026 | 7:30 PM

Share

ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಅವರು ತಮ್ಮ ರಾಜಕೀಯ ಜೀವನದ ಮೊದಲ ಪ್ರಯತ್ನದಲ್ಲೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಈ ರೀತಿ ಸಾಧನೆ ಮಾಡಿದ ವಿಜಯ್ ಕುರಿತು ಕೇಳಲಾದ ಪ್ರಶ್ನೆಗೆ ಸೂಪರ್‌ಸ್ಟಾರ್ ರಜನಿಕಾಂತ್ ಅವರು ಯಾವುದೇ ಉತ್ತರ ನೀಡಿಲ್ಲ. ಬದಲಿಗೆ, ಅವರು ಮೌನಕ್ಕೆ ಶರಣಾಗಿದ್ದಾರೆ.

ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳ ನಂತರ, ರಜನಿಕಾಂತ್ ಅವರು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಈ ವೇಳೆ ಮಾಧ್ಯಮದವರು ‘ವಿಜಯ್ ಸಿಎಂ ಆಗಿರುವ ಬಗ್ಗೆ ನಿಮ್ಮ ಅಭಿಪ್ರಾಯವೇನು?’ ಎಂದು ಪ್ರಶ್ನಿಸಿದಾಗ, ತಲೈವಾ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಕೇವಲ ನಗು ಬೀರುತ್ತಾ, ಕೈಮುಗಿದು ಅಲ್ಲಿಂದ ತೆರಳಿದರು.

ಮೇ 4ರಂದು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದಾಗ, ಡಿಎಂಕೆ ಮತ್ತು ಎಐಎಡಿಎಂಕೆ ಅಂತಹ ಬಲಿಷ್ಠ ಪಕ್ಷಗಳನ್ನು ಹಿಂದಿಕ್ಕಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಈ ಐತಿಹಾಸಿಕ ಸಾಧನೆಗಾಗಿ ರಜನಿಕಾಂತ್ ಅವರು ಎಕ್ಸ್ (ಟ್ವಿಟರ್) ಮೂಲಕ ವಿಜಯ್ ಮತ್ತು ಅವರ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದರು. ‘ಚುನಾವಣೆಯಲ್ಲಿ ಅದ್ಭುತ ವಿಜಯ ಸಾಧಿಸಿದ ತಮಿಳಗ ವೆಟ್ರಿ ಕಳಗಂ ಅಧ್ಯಕ್ಷರಾದ ವಿಜಯ್ ಅವರಿಗೆ ಅಭಿನಂದನೆಗಳು’ ಎಂದು ಬರೆದುಕೊಂಡಿದ್ದರು.

ರಜನಿಕಾಂತ್ ಅವರು 1996ರಿಂದಲೂ ರಾಜಕೀಯ ಪ್ರವೇಶದ ಬಗ್ಗೆ ಸುಳಿವು ನೀಡುತ್ತಾ ಬಂದಿದ್ದರು. 2017ರಲ್ಲಿ ಹೊಸ ಪಕ್ಷ ಸ್ಥಾಪಿಸಿ 234 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಆದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದ ಪ್ರಾಬಲ್ಯ ಮತ್ತು ನಂತರದ ದಿನಗಳಲ್ಲಿ ತಮ್ಮ ಆರೋಗ್ಯದ ಕಾರಣ ನೀಡಿ ರಜನಿಕಾಂತ್ ರಾಜಕೀಯ ಪ್ರವೇಶದ ನಿರ್ಧಾರದಿಂದ ಹಿಂದೆ ಸರಿದಿದ್ದರು. 2021ರಲ್ಲಿ ಅವರು ತಮ್ಮ ‘ರಜನಿ ಮಕ್ಕಳ್ ಮಂಡ್ರಂ’ ಸಂಘಟನೆಯನ್ನು ವಿಸರ್ಜಿಸಿದ್ದರು.

ಇದನ್ನೂ ಓದಿ: ವಿಜಯ್ ಪ್ರಮಾಣವಚನ ನೋಡಲು ಬರಲಿಲ್ಲ ಪತ್ನಿ, ಮಕ್ಕಳು; ಮಿಂಚಿದ್ದು ಮಾತ್ರ ತ್ರಿಶಾ

ತಮ್ಮ ಮೊದಲ ಚುನಾವಣೆಯಲ್ಲೇ 108 ಸ್ಥಾನಗಳನ್ನು ಗೆಲ್ಲುವ ಮೂಲಕ ದಾಖಲೆ ನಿರ್ಮಿಸಿದ ವಿಜಯ್, ನಂತರ 120 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದಾರೆ. ಈ ಮೂಲಕ ಎಂ.ಜಿ. ರಾಮಚಂದ್ರನ್, ಎನ್.ಟಿ. ರಾಮರಾವ್ ಮತ್ತು ಜಯಲಲಿತಾ ಅವರಂತೆ ಚಿತ್ರರಂಗದಿಂದ ಬಂದು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿದ ದಿಗ್ಗಜರ ಸಾಲಿಗೆ ವಿಜಯ್ ಈಗ ಸೇರ್ಪಡೆಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us