Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಸಿನಿಮಾ ಬಿಡುಗಡೆ ದಿನವೇ ಆಶ್ರಮದಲ್ಲಿ ಸ್ವಾಮಿಗಳ ಸಂಘದಲ್ಲಿ ಕಳೆದ ರಜನೀಕಾಂತ್

Rajinikanth: ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾ ಬಿಡುಗಡೆ ಆದ ಬೆನ್ನಲ್ಲೆ ನಟ ರಜನೀಕಾಂತ್ ಹಿಮಾಲಯಕ್ಕೆ ತೆರಳಿ ದಯಾನಂದ ಸರಸ್ವತಿ ಆಶ್ರಮದಲ್ಲಿ ತಂಗಿದ್ದಾರೆ.

'ಜೈಲರ್' ಸಿನಿಮಾ ಬಿಡುಗಡೆ ದಿನವೇ ಆಶ್ರಮದಲ್ಲಿ ಸ್ವಾಮಿಗಳ ಸಂಘದಲ್ಲಿ ಕಳೆದ ರಜನೀಕಾಂತ್
ರಜನೀಕಾಂತ್
Follow us
ಮಂಜುನಾಥ ಸಿ.
|

Updated on: Aug 11, 2023 | 5:27 PM

ರಜನೀಕಾಂತ್ (Rajinikanth) ನಟನೆಯ ‘ಜೈಲರ್‘ (Jailer) ಸಿನಿಮಾ ನಿನ್ನೆ (ಆಗಸ್ಟ್ 10) ಬಿಡುಗಡೆ ಆಗಿದೆ. ಮಾಸ್ ಅವತಾರದಲ್ಲಿ ರಜನೀಕಾಂತ್ ಕಾಣಿಸಿಕೊಂಡಿದ್ದಾರೆ. ಡ್ಯಾನ್ಸ್, ಫೈಟ್, ಐಟಂ ಹಾಡಿನಲ್ಲಿಯೂ ರಜನೀ ಕಾಣಿಸಿಕೊಂಡಿದ್ದಾರೆ. ಆದರೆ ಸಿನಿಮಾ ಬಿಡುಗಡೆ ಆದ ದಿನವೇ ಎಲ್ಲವುಗಳಿಂದ ದೂರ ಹಿಮಾಲಯಕ್ಕೆ ತೆರಳಿ ಸಾಧು-ಸಂತರ ಸಂಘದಲ್ಲಿ ಸಮಯ ಕಳೆಯುತ್ತಿದ್ದಾರೆ.

ಉತ್ತರಾಖಂಡ್​ನ ದಯಾನಂದ ಸರಸ್ವತಿ ಆಶ್ರಮಕ್ಕೆ ಭೇಟಿ ನೀಡಿರುವ ನಟ ರಜನೀಕಾಂತ್ ಅಲ್ಲಿ ಸಾಮಾನ್ಯರಲ್ಲಿ ಸಾಮಾನ್ಯನಂತೆ ಅಲ್ಲಿನ ಸಾಧು-ಸಂತರೊಟ್ಟಿಗೆ ಒಡನಾಡುತ್ತಿದ್ದಾರೆ. ಗಂಗಾ ನದಿಯ ತಟದಲ್ಲಿ ಸಾಧು-ಸಂತರೊಡನೆ ಧರ್ಮ ಆಸಕ್ತರೊಡನೆ ರಜನೀಕಾಂತ್ ಒಡನಾಡುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಸುಮಾರು ಒಂದು ವಾರಗಳ ವರೆಗೆ ಹಿಮಾಲಯದ ಆಸು-ಪಾಸು ವಿವಿಧ ಆಶ್ರಮ ದೇವಾಲಯಗಳ ಪರ್ಯಟನೆಯನ್ನು ರಜನೀಕಾಂತ್ ಮಾಡಲಿದ್ದಾರೆ. ಪ್ರಸ್ತುತ ದಯಾನಂದ ಸರಸ್ವತಿ ಆಶ್ರಮದಲ್ಲಿ ರಜನೀಕಾಂತ್ ತಂಗಿದ್ದು ಯಾವುದೇ ವಿವಿಐಪಿ ಸವಲತ್ತುಗಳಿಲ್ಲದೆ ಆಶ್ರಮದ ಇತರೆ ವಾಸಿಗಳಂತೆ ಸಾಧಾರಣವಾದ ಜೀವನ ನಡೆಸುತ್ತಾ, ಅವರೊಟ್ಟಿಗೆ ಸೇರಿ ಗುರುಗಳ ಪ್ರವಚನ ಕೇಳುತ್ತಾ ಕಾಲ ಕಳೆಯುತ್ತಿದ್ದಾರೆ.

ಇದನ್ನೂ ಓದಿ:ಜೀವನ ಸಾಗಿಸಲು ಕಾರು ತೊಳೆಯುತ್ತಿದ್ದ ಯುವಕನ ಜೀವನವನ್ನೇ ಬದಲಿಸಿದ ರಜನೀಕಾಂತ್​ರ ಒಂದು ಕರೆ

ರಜನೀಕಾಂತ್​ಗೆ ಹಿಮಾಲಯ ಹೊಸದಲ್ಲ. ಆಧ್ಯಾತ್ಮಿಕತೆಯಲ್ಲಿ ಅಪಾರ ಆಸಕ್ತಿ ಇರಿಸಿಕೊಂಡಿರುವ ರಜನೀಕಾಂತ್ ತಮ್ಮ ಅಧ್ಯಾತ್ಮ ಗುರುಗಳನ್ನು ಭೇಟಿ ಆಗುವ ಸಲುವಾಗಿ ಹಿಮಾಲಯಗಳಿಗೆ ತೆರಳುತ್ತಿರುತ್ತಾರೆ. ಅಲ್ಲಿ ಸಾಮಾನ್ಯರಲ್ಲಿ ಸಾಮಾನ್ಯನಂತೆ ತಿಂಗಳುಗಟ್ಟಲೆ ಸಮಯ ಕಳೆಯುತ್ತಾರೆ. ಆದರೆ ಕೋವಿಡ್ ಹಾಗೂ ಆರೋಗ್ಯ ಸಮಸ್ಯೆಯ ಕಾರಣದಿಂದ ಕಳೆದ ಕೆಲವು ವರ್ಷಗಳಿಂದ ಹಿಮಾಲಯಕ್ಕೆ ಹೋಗಿರಲಿಲ್ಲವಂತೆ ರಜನೀಕಾಂತ್, ಇದೀಗ ‘ಜೈಲರ್’ ಸಿನಿಮಾ ಬಿಡುಗಡೆ ಆದ ಬೆನ್ನಲ್ಲೆ ಹಿಮಾಲಯಕ್ಕೆ ಆಗಮಿಸಿದ್ದಾರೆ ರಜನೀಕಾಂತ್.

ರಜನೀಕಾಂತ್​ರ ‘ಜೈಲರ್’ ಸಿನಿಮಾ ಆಗಸ್ಟ್ 10 ರಂದು ತೆರೆಗೆ ಬಂದಿದೆ. ನೆಲ್ಸನ್ ನಿರ್ದೇಶಿಸಿ ಕಲಾನಿಧಿ ಮಾರನ್ ನಿರ್ಮಾಣ ಮಾಡಿರುವ ಈ ಸಿನಿಮಾ ಮೊದಲ ದಿನ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಮೊದಲ ದಿನ ದೇಶದಾದ್ಯಂತ ಸುಮಾರು 72 ಕೋಟಿ ಹಣವನ್ನು ಕಲೆಕ್ಷನ್ ಮಾಡಿ ಮೊದಲ ದಿನವೇ ಹಿಟ್ ಎನಿಸಿಕೊಂಡಿದೆ. ಸಿನಿಮಾದಲ್ಲಿ ಶಿವರಾಜ್ ಕುಮಾರ್ ಸಹ ನಟಿಸಿದ್ದು ಶಿವಣ್ಣ ಎಂಟ್ರಿ ದೃಶ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ