AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baba Movie: ಮರು ಬಿಡುಗಡೆ ಆಗ್ತಿದೆ ರಜನಿಕಾಂತ್​ ನಟನೆಯ ‘ಬಾಬಾ’; ಇದಕ್ಕೆ ‘ಕಾಂತಾರ’ ಯಶಸ್ಸು ಕಾರಣವೇ?

Rajinikanth | Baba: 20 ವರ್ಷಗಳ ಹಿಂದೆ ಸೋತ ‘ಬಾಬಾ’ ಸಿನಿಮಾವನ್ನು ಈಗ ಮತ್ತೆ ರಿಲೀಸ್​ ಮಾಡುತ್ತಿರುವುದು ಅಚ್ಚರಿ ಮೂಡಿಸಿದೆ. ಈ ಚಿತ್ರಕ್ಕಾಗಿ ರಜನಿಕಾಂತ್​ ಅವರು ಹೊಸದಾಗಿ ಡಬ್ಬಿಂಗ್​ ಮಾಡಿದ್ದಾರೆ.

Baba Movie: ಮರು ಬಿಡುಗಡೆ ಆಗ್ತಿದೆ ರಜನಿಕಾಂತ್​ ನಟನೆಯ ‘ಬಾಬಾ’; ಇದಕ್ಕೆ ‘ಕಾಂತಾರ’ ಯಶಸ್ಸು ಕಾರಣವೇ?
ರಜನಿಕಾಂತ್
TV9 Web
| Edited By: |

Updated on:Dec 05, 2022 | 3:59 PM

Share

ಸೂಪರ್​ ಸ್ಟಾರ್​ ರಜನಿಕಾಂತ್​ (Rajinikanth) ಅವರಿಗೆ ಈಗ 71 ವರ್ಷ ವಯಸ್ಸು. ಇದೇ ಡಿಸೆಂಬರ್​ 12ರಂದು ಅವರು 72ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈ ಸಂದರ್ಭವನ್ನು ಇನ್ನಷ್ಟು ಸ್ಪೆಷಲ್​ ಆಗಿಸಲು ‘ಬಾಬಾ’ (Baba Movie) ಚಿತ್ರವನ್ನು ಮರು ಬಿಡುಗಡೆ ಮಾಡಲಾಗುತ್ತಿದೆ. ರಜನಿಕಾಂತ್​ ನಟನೆಯ ಈ ಸಿನಿಮಾ 2002ರಲ್ಲಿ ತೆರೆಕಂಡಿತ್ತು. ಈಗ ಅದಕ್ಕೆ ಹೊಸ ತಂತ್ರಜ್ಞಾನ ಅಳವಡಿಸಲಾಗಿದೆ. ಹೊಸ ರೂಪದಲ್ಲಿ ಪ್ರೇಕ್ಷಕರ ಮುಂದೆ ಬರಲು ‘ಬಾಬಾ’ ಸಿನಿಮಾ ಸಜ್ಜಾಗಿದೆ. ಅಷ್ಟಕ್ಕೂ ಬರೋಬ್ಬರಿ 20 ವರ್ಷಗಳ ಬಳಿಕ ಈ ಸಿನಿಮಾವನ್ನು ರೀ-ರಿಲೀಸ್​ ಮಾಡಲು ಚಿತ್ರತಂಡದವರು ಯಾಕೆ ಮುಂದಾಗಿದ್ದಾರೆ ಎಂಬ ಪ್ರಶ್ನೆ ಮೂಡುತ್ತಿದೆ. ಇದು ‘ಕಾಂತಾರ’ (Kantara Movie) ಚಿತ್ರದ ಗೆಲುವಿನ ಎಫೆಕ್ಟ್​ ಎಂದು ಊಹಿಸಲಾಗುತ್ತಿದೆ.

2002ರಲ್ಲಿ ತೆರೆಕಂಡಿದ್ದ ‘ಬಾಬಾ’ ಸಿನಿಮಾ ಹೀನಾಯವಾಗಿ ಸೋತಿತ್ತು. ವಿಶೇಷ ಏನೆಂದರೆ ಆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು ಸ್ವತಃ ರಜನಿಕಾಂತ್​! ನಿರ್ಮಾಣದ ಜವಾಬ್ದಾರಿ ಕೂಡ ಅವರದ್ದೇ. ಹಾಗಿದ್ದರೂ ಕೂಡ ಗಲ್ಲಾಪೆಟ್ಟಿಗೆಯಲ್ಲಿ ‘ಬಾಬಾ’ ಗೆಲ್ಲಲಿಲ್ಲ. ವಿತರಕರಿಗೆ ನಷ್ಟ ಆಗಿದೆ ಎಂದು ರಜನಿಕಾಂತ್​ ಅವರು ತಮ್ಮ ಸ್ವಂತ ಹಣ ನೀಡಿ ನಷ್ಟ ಭರಿಸುವ ಕೆಲಸ ಮಾಡಿದ್ದರು.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಇದನ್ನೂ ಓದಿ: Puneeth Rajkumar: ರಜನಿಕಾಂತ್​ ಮೊದಲ ಸಲ ಪುನೀತ್​ ಅವರನ್ನು ನೋಡಿದ್ದು ಎಲ್ಲಿ? ದೇವರ ಸನ್ನಿಧಿಯ ಆ ಘಟನೆಯೇ ರೋಮಾಂಚಕ

20 ವರ್ಷಗಳ ಹಿಂದೆ ಸೋತ ಸಿನಿಮಾವನ್ನು ಈಗ ಮತ್ತೆ ರಿಲೀಸ್​ ಮಾಡುತ್ತಿರುವುದು ಅಚ್ಚರಿ ಮೂಡಿಸಿದೆ. ಈ ಚಿತ್ರಕ್ಕಾಗಿ ಹೊಸದಾಗಿ ಡಬ್ಬಿಂಗ್​ ಮಾಡಲಾಗಿದೆ. ಅಲ್ಲದೆ, ಹೊಸ ರೂಪದಲ್ಲಿ ಟ್ರೇಲರ್​ ಕೂಡ ರಿಲೀಸ್​ ಆಗಿದೆ. 20 ಲಕ್ಷಕ್ಕೂ ಅಧಿಕ ಬಾರಿ ಈ ಟ್ರೇಲರ್​ ವೀಕ್ಷಣೆ ಕಂಡಿದೆ. ಈ ಸಿನಿಮಾಗೆ ಶೇಖರ್​ ಕೃಷ್ಣ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: Rajinikanth: ‘ಅಪ್ಪು ದೇವರ ಮಗು’ ಎಂದು ಕನ್ನಡದಲ್ಲೇ ಮಾತಾಡಿದ ರಜನಿಕಾಂತ್​; ಮಳೆ ಸುರಿದರೂ ಕದಲಲಿಲ್ಲ ತಲೈವಾ

ರೀ-ರಿಲೀಸ್​ ಮಾಡುತ್ತಿರುವುದು ಏಕೆ ಎಂಬ ಪ್ರಶ್ನೆಗೆ ನಿರ್ದೇಶಕರು ಉತ್ತರ ನೀಡಿದ್ದಾರೆ. ಇತ್ತೀಚೆಗಿನ ಸಂದರ್ಶನದಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ. ‘ಫ್ಯಾಂಟಸಿ ಕಥಾಹಂದರದ ಬಗ್ಗೆ ಜನರಿಗೆ ಇತ್ತೀಚಿನ ದಿನಗಳಲ್ಲಿ ಆಸಕ್ತಿ ಹೆಚ್ಚಿದೆ. ‘ಬಾಬಾ’ ಚಿತ್ರ ಅಂದಿನ ಕಾಲಕ್ಕಿಂತಲೂ ಮುಂದಿತ್ತು’ ಎಂದು ಶೇಖರ್​ ಕೃಷ್ಣ ಹೇಳಿದ್ದಾರೆ. ‘ಕಾಂತಾರ’ ಚಿತ್ರವನ್ನು ಗಮನದಲ್ಲಿ ಇಟ್ಟುಕೊಂಡೇ ಈ ರೀತಿ ಹೇಳಿರಬಹುದು ಎಂದು ಸಿನಿಪ್ರಿಯರು ಊಹಿಸಿದ್ದಾರೆ.

‘ಬಾಬಾ’ ಕಥೆ ಏನು?

ಈ ಚಿತ್ರದ ಆರಂಭದಲ್ಲಿ ಹೀರೋಗೆ ದೇವರ ಮೇಲೆ ನಂಬಿಕೆ ಇರುವುದಿಲ್ಲ. ಆದರೆ ಯೋಗಿಯೊಬ್ಬರನ್ನು ಭೇಟಿ ಆದ ಬಳಿಕ ಅವನಿಗೆ ದೇವರ ಮೇಲೆ ನಂಬಿಕೆ ಮೂಡುತ್ತದೆ. ಯೋಗಿ ನೀಡಿದ ವರದಿಂದ ಹೀರೋಗೆ ಸೂಪರ್​ ಪವರ್​ ಬರುತ್ತದೆ. ಅದರಿಂದ ಏನೆಲ್ಲ ಆಗುತ್ತದೆ ಎಂಬುದು ಈ ಸಿನಿಮಾದ ಕಥೆ. ಈ ಬಾರಿಯಾದರೂ ‘ಬಾಬಾ’ ಚಿತ್ರ ಗೆಲ್ಲುತ್ತಾ ಎಂಬುದನ್ನು ಕಾದು ನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:17 pm, Mon, 5 December 22

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ