AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4500 ರೂಪಾಯಿಗೆ ಮಾರಾಟ ಆಯ್ತು ‘ಕೂಲಿ’ ಸಿನಿಮಾ ಬ್ಲಾಕ್ ಟಿಕೆಟ್

‘ಕೂಲಿ’ ಸಿನಿಮಾವನ್ನು ಫಸ್ಟ್ ಡೇ ಫಸ್ಟ್ ಶೋ ನೋಡಲು ಕಾದಿರುವ ಹಲವು ಅಭಿಮಾನಿಗಳಿಗೆ ಟಿಕೆಟ್ ಸಿಗುತ್ತಿಲ್ಲ. ಚೆನ್ನೈನಲ್ಲಿ ಎಲ್ಲ ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್​ಗಳಲ್ಲಿ ಮೊದಲ ದಿನದ ಟಿಕೆಟ್ ಸೋಲ್ಡ್ ಔಟ್ ಆಗಿದೆ. ಈ ಪರಿಸ್ಥಿತಿಯ ಲಾಭ ಪಡೆಯಲು ಕೆಲವರು ದುಬಾರಿ ಬೆಲೆಗೆ ಬ್ಲಾಕ್ ಟಿಕೆಟ್ ಮಾರುತ್ತಿರುವುದು ತಿಳಿದುಬಂದಿದೆ.

4500 ರೂಪಾಯಿಗೆ ಮಾರಾಟ ಆಯ್ತು ‘ಕೂಲಿ’ ಸಿನಿಮಾ ಬ್ಲಾಕ್ ಟಿಕೆಟ್
Rajinikanth
ಮದನ್​ ಕುಮಾರ್​
|

Updated on: Aug 12, 2025 | 7:02 PM

Share

‘ಸೂಪರ್ ಸ್ಟಾರ್’ ರಜನಿಕಾಂತ್ (Rajinikanth) ನಟನೆಯ ಪ್ರತಿ ಸಿನಿಮಾ ಬಿಡುಗಡೆ ಆದಾಗಲೂ ಅಭಿಮಾನಿಗಳ ಕ್ರೇಜ್ ಜೋರಾಗಿ ಇರುತ್ತದೆ. ‘ಕೂಲಿ’ ಸಿನಿಮಾ (Coolie Movie) ಕೂಡ ಅದೇ ರೀತಿಯ ಕ್ರೇಜ್ ಸೃಷ್ಟಿಸಿದೆ. ಈ ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಆಗಸ್ಟ್ 14ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಮೊದಲ ದಿನ ಮೊದಲ ಶೋ ನೋಡಬೇಕು ಎಂಬುದು ಅಭಿಮಾನಿಗಳ ಆಸೆ. ಅದಕ್ಕಾಗಿ ಏನು ಬೇಕಾದರೂ ಮಾಡಲು ಅಭಿಮಾನಿಗಳು ರೆಡಿ ಇರುತ್ತಾರೆ. ಟಿಕೆಟ್ ಸಿಗದೇ ಇದ್ದರೆ ಬ್ಲಾಕ್ ಟಿಕೆಟ್ ಖರೀದಿ ಮಾಡುವವರೂ ಇದ್ದಾರೆ. ವರದಿಗಳ ಪ್ರಕಾರ, ಚೈನ್ನೈನಲ್ಲಿ ‘ಕೂಲಿ’ ಸಿನಿಮಾದ ಬ್ಲಾಕ್ ಟಿಕೆಟ್ (Coolie Movie Black Tickets) 4500 ರೂಪಾಯಿಗೆ ಮಾರಾಟ ಆಗಿದೆ.

ಆಗಸ್ಟ್ 14ಕ್ಕೆ ಚೆನ್ನೈನಲ್ಲಿ ‘ಕೂಲಿ’ ಸಿನಿಮಾದ 130ಕ್ಕೂ ಅಧಿಕ ಶೋಗಳ ಟಿಕೆಟ್ ಸೋಲ್ಡ್ ಔಟ್ ಆಗಿವೆ. ಫಸ್ಟ್ ಡೇ ಫಸ್ಟ್ ಶೋ ನೋಡಬೇಕು ಎಂದು ಆಸೆ ಇಟ್ಟುಕೊಂಡ ಎಷ್ಟೂ ಅಭಿಮಾನಿಗಳಿಗೆ ಟಿಕೆಟ್ ಸಿಗುತ್ತಿಲ್ಲ. ಹಾಗಾಗಿ ಕೆಲವರು ಬ್ಲಾಕ್ ಟಿಕೆಟ್ ಖರೀದಿಸುವುದು ಅನಿವಾರ್ಯ ಆಗಿದೆ. ಚೆನ್ನೈನ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ಗಳಲ್ಲಿ ಮೂಲ ಟಿಕೆಟ್ ಬೆಲೆ ಕಡಿಮೆ ಇದೆ. ಆದರೆ ಬ್ಲಾಕ್​ನಲ್ಲಿ ದುಬಾರಿಗೆ ಬೆಲೆ ಟಿಕೆಟ್ ಮಾರಾಟ ಮಾಡಲಾಗುತ್ತಿದೆ.

‘ಕೂಲಿ’ ಸಿನಿಮಾಗೆ ಈ ಪರಿ ಹೈಪ್ ಹೆಚ್ಚಲು ಕಾರಣ ಕೂಡ ಇದೆ. ಯಶಸ್ವಿ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಬಹುತಾರಾಗಣ ಇದೆ. ಆಮಿರ್ ಖಾನ್, ನಾಗಾರ್ಜುನ, ಉಪೇಂದ್ರ, ಶ್ರುತಿ ಹಾಸನ್, ರಚಿತಾ ರಾಮ್, ಸತ್ಯರಾಜ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಟ್ರೇಲರ್​ನಿಂದ ನಿರೀಕ್ಷೆ ಹೆಚ್ಚಾಗಿದೆ.

ಇದನ್ನೂ ಓದಿ
Image
ರಜನಿಕಾಂತ್ ತಾಯಿ, ಸಹೋದರಿ ಮತ್ತು ಗೆಳತಿಯಾಗಿ ನಟಿಸಿದ ಏಕೈಕ ನಾಯಕಿ ಇವರು
Image
ಕೇರಳಕ್ಕೆ ಬಂದ ರಜನಿಕಾಂತ್: ಅಭಿಮಾನಿಗಳ ಸಂಭ್ರಮ ಹೇಗಿತ್ತು ನೋಡಿ
Image
ಕಂಡಕ್ಟರ್ ಆಗಿದ್ದಾಗಲೇ ರಜನಿಕಾಂತ್ ಸ್ಟೈಲಿಶ್​
Image
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್

ಬಿಡುಗಡೆಗೂ ಮುನ್ನವೇ ‘ಕೂಲಿ’ ಸಿನಿಮಾ ಸೂಪರ್ ಹಿಟ್ ಎನ್ನಲಾಗುತ್ತಿದೆ. ಆ ಪರಿ ಟಿಕೆಟ್ ಬುಕಿಂಗ್ ಆಗುತ್ತಿದೆ. ಬೆಂಗಳೂರಿನಲ್ಲಿ ಕೂಡ ಜನರು ಮುಗಿಬಿದ್ದು ಈ ಸಿನಿಮಾದ ಟಿಕೆಟ್ ಬುಕ್ ಮಾಡುತ್ತಿದ್ದಾರೆ. ಟಿಕೆಟ್ ದರ ಮುಗಿಲುಮುಟ್ಟಿದೆ. 500, 1000 ರೂಪಾಯಿ ಬೆಲೆಯ ಟಿಕೆಟ್​ಗಳು ಕೂಡ ಸೋಲ್ಡ್ ಔಟ್ ಆಗಿವೆ. ಒಟ್ಟಿನಲ್ಲಿ ‘ಕೂಲಿ’ ಸಿನಿಮಾದ ಕ್ರೇಜ್ ಜೋರಾಗಿದೆ.

ಇದನ್ನೂ ಓದಿ: ‘ಕೂಲಿ’ ಚಿತ್ರದ ರಜನಿ ಸಂಭಾವನೆಯಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು; ಉಪೇಂದ್ರ ಪಡೆದಿದ್ದೆಷ್ಟು?

ಅದೇ ದಿನ, ಅಂದರೆ ಆಗಸ್ಟ್ 14ರಂದು ‘ವಾರ್ 2’ ಸಿನಿಮಾ ಕೂಡ ಬಿಡುಗಡೆ ಆಗುತ್ತಿದೆ. ‘ಕೂಲಿ’ ಚಿತ್ರಕ್ಕೆ ‘ವಾರ್ 2’ ಪೈಪೋಟಿ ನೀಡುತ್ತಿದೆ. ಎರಡು ಸಿನಿಮಾಗಳ ನಡುವೆ ಸಖತ್ ಸ್ಪರ್ಧೆ ಇದೆ. ಆದರೆ ಟಿಕೆಟ್ ಬುಕಿಂಗ್ ವಿಚಾರದಲ್ಲಿ ‘ವಾರ್ 2’ ಸಿನಿಮಾ ಕೊಂಚ ಹಿಂದುಳಿದಿದೆ. ಮೊದಲ ದಿನ ಯಾವ ರೀತಿಯ ವಿಮರ್ಶೆ ಬರಲಿದೆ ಎಂಬುದರ ಮೇಲೆ ಈ ಸಿನಿಮಾಗಳ ಭವಿಷ್ಯ ನಿರ್ಧಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು