AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಾಸೆ ಮೂಡಿಸಿತಾ ರಜನಿಕಾಂತ್ ನಟನೆಯ ‘ಕೂಲಿ’ ಟೀಸರ್? ಇಲ್ಲಿವೆ ಕಾರಣ

ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಮೂಲಕ ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಮಟ್ಟದ ಬಿಸ್ನೆಸ್ ಮಾಡಿತ್ತು. ಅವರು ಈಗ ‘ಕೂಲಿ’ ಚಿತ್ರದ ಮೂಲಕ ಎಂಟ್ರಿ ಕೊಡೋಕೆ ರೆಡಿ ಆಗಿದ್ದಾರೆ. ಕೆಲವು ವರದಿಗಳ ಪ್ರಕಾರ, ಅನೇಕರಿಗೆ ಈ ಟೈಟಲ್ ಇಷ್ಟವಾಗಿಲ್ಲ.

ನಿರಾಸೆ ಮೂಡಿಸಿತಾ ರಜನಿಕಾಂತ್ ನಟನೆಯ ‘ಕೂಲಿ’ ಟೀಸರ್? ಇಲ್ಲಿವೆ ಕಾರಣ
ರಜನಿಕಾಂತ್
ರಾಜೇಶ್ ದುಗ್ಗುಮನೆ
|

Updated on: Apr 23, 2024 | 11:56 AM

Share

ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾದ (Coolie Movie) ಟೀಸರ್ ಸೋಮವಾರ (ಏಪ್ರಿಲ್ 22) ರಿಲೀಸ್ ಆಗಿದೆ. ಇದು ರಜನಿಕಾಂತ್ ನಟನೆಯ 171ನೇ ಸಿನಿಮಾ. ಈ ಚಿತ್ರಕ್ಕೆ ಲೋಕೇಶ್ ಕನಗರಾಜ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಕೂಲಿ’ ಟೈಟಲ್ ಏನೋ ಫ್ಯಾನ್ಸ್​ಗೆ ಇಷ್ಟ ಆಗಿದೆ. ಆದರೆ, ಅಂದುಕೊಂಡ ರೀತಿಯಲ್ಲಿ ಟೀಸರ್​ ಮೂಡಿ ಬಂದಿಲ್ಲ ಅನ್ನೋದು ರಜನಿ ಫ್ಯಾನ್ಸ್ ಆರೋಪ. ಇದಕ್ಕೆ ಸಾಕಷ್ಟು ಕಾರಣಗಳನ್ನು ಅವರು ನೀಡಿದ್ದಾರೆ.

ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಮೂಲಕ ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಮಟ್ಟದ ಬಿಸ್ನೆಸ್ ಮಾಡಿತ್ತು. ಅವರು ಈಗ ‘ಕೂಲಿ’ ಚಿತ್ರದ ಮೂಲಕ ಎಂಟ್ರಿ ಕೊಡೋಕೆ ರೆಡಿ ಆಗಿದ್ದಾರೆ. ಕೆಲವು ವರದಿಗಳ ಪ್ರಕಾರ, ಅನೇಕರಿಗೆ ಈ ಟೈಟಲ್ ಇಷ್ಟವಾಗಿಲ್ಲ. ಈಗಾಗಲೇ ‘ಕೂಲಿ ನಂಬರ್ 1’ ರೀತಿಯ ಸಿನಿಮಾಗಳು ಬಂದು ಹೋಗಿವೆ. ಹೀಗಾಗಿ, ಟೈಟಲ್​ ಹೊಸದು ಅನ್ನೋ ಫೀಲ್ ಸಿಗುತ್ತಿಲ್ಲ.

‘ವಿಕ್ರಮ್’ ಸಿನಿಮಾಗೆ ಲೋಕೇಶ್ ಕನಗರಾಜ್ ಅವರು ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಚಿತ್ರದ ಟೀಸರ್ ಮೊದಲ ಬಾರಿಗೆ ರಿಲೀಸ್ ಆದಾಗ ಜನರಲ್ಲಿ ಒಂದು ದೊಡ್ಡ ಕ್ರೇಜ್ ಸೃಷ್ಟಿ ಆಗಿತ್ತು. ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಲೋಕೇಶ್ ಕನಗರಾಜ್ ಅವರ ಕಾಂಬಿನೇಷನ್ ಸಖತ್ ಕ್ರೇಜ್ ಸೃಷ್ಟಿ ಮಾಡಿತ್ತು. ಆದರೆ, ಅಷ್ಟು ದೊಡ್ಡ ಮಟ್ಟದಲ್ಲಿ ಕ್ರೇಜ್ ಸೃಷ್ಟಿ ಮಾಡೋಕೆ ಸಾಧ್ಯವಾಗಿಲ್ಲ.

ಇದನ್ನೂ ಓದಿ: ರಜನಿಕಾಂತ್​ ನಟನೆಯ 171ನೇ ಚಿತ್ರದ ಹೆಸರು ‘ಕೂಲಿ’; ಬಂತು ಭರ್ಜರಿ ಟೀಸರ್​

‘ಕೂಲಿ’ ಸಿನಿಮಾ ‘ಲೋಕೇಶ್ ಸಿನಿಮ್ಯಾಟಿಕ್ ಯೂನಿವರ್ಸ್​’ನ ಭಾಗವಲ್ಲ ಎಂದು ಲೋಕೇಶ್ ಕನಗರಾಜ್ ಹೇಳಿಕೊಂಡಿದ್ದರು. ಆದರೆ, ಟೀಸರ್ ನೋಡಿದ ಎಲ್ಲರಿಗೂ ಟೀಸರ್​ನಲ್ಲಿ ಸಿನಿಮ್ಯಾಟಿಕ್ ಯೂನಿವರ್ಸ್​ನ ಶೇಡ್ ಕಾಣಿಸಿದೆ. ಈ ಮೊದಲು ರಿಲೀಸ್ ಆದ ‘ವಿಕ್ರಮ್’, ‘ಲಿಯೋ’ ಟೀಸರ್ ಮಾದರಿಯಲ್ಲೇ ಇದು ಕೂಡ ಇದೆ ಎಂದು ಅನೇಕರು ಆರೋಪಿಸುತ್ತಿದ್ದಾರೆ. ‘ಕೂಲಿ’ ಸಿನಿಮಾ ಗೋಲ್ಡ್ ಸ್ಮಗ್ಲಿಂಗ್ ಬಗ್ಗೆ ಇದೆ ಎಂದು ಹೇಳಲಾಗುತ್ತಿದೆ. ‘ಲೋಕೇಶ್ ಸಿನಿಮ್ಯಾಟಿಕ್ ಯೂನಿವರ್ಸ್​’ಗಳು ಇದೇ ಮಾದರಿಯ ಸ್ಮಗ್ಲಿಂಗ್ ಬಗ್ಗೆ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ