AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್ 2’ ಚಿತ್ರತಂಡಕ್ಕೆ ಸೇರ್ಪಡೆಯಾದ ಹೃತಿಕ್ ರೋಷನ್; ರಜನಿ ಜೊತೆ 2 ದಿನ ಶೂಟಿಂಗ್

ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಮತ್ತು ಸನ್ ಪಿಕ್ಚರ್ಸ್ ಸಂಸ್ಥೆ ನಿರ್ಮಿಸುತ್ತಿರುವ ‘ಜೈಲರ್ 2’ ಚಿತ್ರದಲ್ಲಿ ಭಾರತೀಯ ಚಿತ್ರರಂಗದ ದೈತ್ಯ ಪ್ರತಿಭೆಗಳ ದಂಡೇ ಇದೆ. ರಜನಿಕಾಂತ್, ಮೋಹನ್ ಲಾಲ್, ಶಿವರಾಜ್‌ಕುಮಾರ್, ವಿಜಯ್ ಸೇತುಪತಿ ಬಳಿಕ ಹೃತಿಕ್ ರೋಷನ್ ಕೂಡ ಈ ಸಿನಿಮಾಗೆ ಸೇರ್ಪಡೆ ಆಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

‘ಜೈಲರ್ 2’ ಚಿತ್ರತಂಡಕ್ಕೆ ಸೇರ್ಪಡೆಯಾದ ಹೃತಿಕ್ ರೋಷನ್; ರಜನಿ ಜೊತೆ 2 ದಿನ ಶೂಟಿಂಗ್
Hrithik RoshanImage Credit source: PTI
ಮದನ್​ ಕುಮಾರ್​
|

Updated on: Jun 11, 2026 | 8:08 PM

Share

ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದ ಸೀಕ್ವೆಲ್ ‘ಜೈಲರ್ 2’ (Jailer 2) ಬಗ್ಗೆ ದಿನದಿಂದ ದಿನಕ್ಕೆ ಭಾರಿ ಕುತೂಹಲ ಮೂಡುತ್ತಿದೆ. ಈ ಬಹುನಿರೀಕ್ಷಿತ ಸಿನಿಮಾದಲ್ಲಿ ತಲೈವಾ ಜೊತೆ ಬಾಲಿವುಡ್‌ನ ಯಾವ ಸ್ಟಾರ್ ನಟ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ತಾಜಾ ವರದಿಗಳ ಪ್ರಕಾರ, ಬಾಲಿವುಡ್‌ನ ಗ್ರೀಕ್ ಗಾಡ್ ಹೃತಿಕ್ ರೋಷನ್ (Hrithik Roshan) ಈ ಚಿತ್ರದ ಪ್ರಮುಖ ಅತಿಥಿ ಪಾತ್ರಕ್ಕೆ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಮೊದಲಿಗೆ ಈ ಪಾತ್ರಕ್ಕಾಗಿ ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ಅವರನ್ನು ಸಂಪರ್ಕಿಸಲಾಗಿತ್ತು ಎಂಬ ಮಾತುಗಳು ಕೇಳಿಬಂದಿದ್ದವು.

ಶಾರುಖ್ ಖಾನ್ ಅವರು ಸದ್ಯ ತಮ್ಮ ಮುಂಬರುವ ಚಿತ್ರ ‘ಕಿಂಗ್’ ಸೇರಿದಂತೆ ಹಲವು ಪೂರ್ವ ನಿಯೋಜಿತ ಶೂಟಿಂಗ್ ಶೆಡ್ಯೂಲ್‌ಗಳಲ್ಲಿ ಬ್ಯುಸಿಯಾಗಿರುವುದರಿಂದ, ಡೇಟ್ಸ್ ಹೊಂದಿಸಲು ಸಾಧ್ಯವಾಗದೆ ‘ಜೈಲರ್ 2’ ಸಿನಿಮಾದಿಂದ ಹೊರಗುಳಿದಿದ್ದಾರೆ ಎನ್ನಲಾಗಿದೆ. ಶಾರುಖ್ ಅವರ ನಿರ್ಗಮನದ ಬೆನ್ನಲ್ಲೇ ಚಿತ್ರತಂಡ ಹೃತಿಕ್ ರೋಷನ್ ಅವರನ್ನು ಸಂಪರ್ಕಿಸಿದ್ದು, ಅವರು ಚಿತ್ರಕಥೆ ಇಷ್ಟವಾಗಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.

‘ವೆರೈಟಿ ಇಂಡಿಯಾ’ ವರದಿಯ ಪ್ರಕಾರ, ಹೃತಿಕ್ ರೋಷನ್ ಜೂನ್ 22 ಮತ್ತು 23ರಂದು ಚೆನ್ನೈನಲ್ಲಿ ತಮ್ಮ ಪಾತ್ರದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಹೃತಿಕ್ ಅವರ ಪಾತ್ರದ ವಿವರಗಳನ್ನು ಸದ್ಯಕ್ಕೆ ರಹಸ್ಯವಾಗಿಡಲಾಗಿದ್ದರೂ, ಇದು ಕೇವಲ ಬಂದು ಹೋಗುವ ಸಾಧಾರಣ ಅತಿಥಿ ಪಾತ್ರವಲ್ಲ ಎನ್ನಲಾಗಿದೆ. ಚಿತ್ರದ ಕಥೆ ಒಂದು ಪ್ರಮುಖ ತಿರುವು ಪಡೆದುಕೊಳ್ಳುವ ಸಂದರ್ಭದಲ್ಲಿ ಅವರ ಪಾತ್ರದ ಎಂಟ್ರಿಯಾಗಲಿದೆ.

ರಜನಿಕಾಂತ್ ಅವರ ಟೈಗರ್ ಮುತ್ತುವೇಲ್ ಪಾಂಡಿಯನ್ ಪಾತ್ರಕ್ಕೆ ಸಹಾಯ ಮಾಡುವ ಮೂಲಕ ಇಡೀ ಕಥೆಯನ್ನು ಮುಂದಕ್ಕೆ ಕೊಂಡೊಯ್ಯುವಲ್ಲಿ ಈ ಪಾತ್ರ ಅತ್ಯಂತ ನಿರ್ಣಾಯಕವಾಗಿರಲಿದೆ. ಇದಕ್ಕಾಗಿ ಚಿತ್ರತಂಡ ಹೃತಿಕ್ ರೋಷನ್ ಅವರಿಗೆ ಸಂಪೂರ್ಣವಾಗಿ ವಿಭಿನ್ನ ಹಾಗೂ ಹೊಸ ಲುಕ್ ವಿನ್ಯಾಸಗೊಳಿಸುತ್ತಿದೆ. ಜೂನ್ 22ರಂದು ಕ್ಯಾಮೆರಾ ಮುಂದೆ ನಿಲ್ಲುವ ಮುನ್ನವೇ ಹೃತಿಕ್ ಅವರಿಗೆ ವಿಶೇಷ ಲುಕ್ ಟೆಸ್ಟ್ ಕೂಡ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಚಿತ್ರರಂಗಕ್ಕೆ ಬರಲು ಸಜ್ಜಾದ ಹೃತಿಕ್ ರೋಷನ್ ಮಗ ಹೃದಾನ್ ರೋಷನ್

ಹೃತಿಕ್ ರೋಷನ್ ‘ಜೈಲರ್ 2’ ಚಿತ್ರತಂಡ ಸೇರಿರುವುದು ಅಭಿಮಾನಿಗಳಿಗೆ ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ಹೌದು, ಬರೋಬ್ಬರಿ 40 ವರ್ಷಗಳ ಹಿಂದೆ ಅಂದರೆ 1986ರಲ್ಲಿ ತೆರೆಕಂಡ ‘ಭಗವಾನ್ ದಾದಾ’ ಚಿತ್ರದಲ್ಲಿ ಹೃತಿಕ್ ರೋಷನ್ ಬಾಲನಟನಾಗಿ ರಜನಿಕಾಂತ್ ಜೊತೆ ನಟಿಸಿದ್ದರು. ಆ ಸಿನಿಮಾದಲ್ಲಿ ರಜನಿಕಾಂತ್ ಅವರ ಸಾಕುಮಗನ ಪಾತ್ರದಲ್ಲಿ ಹೃತಿಕ್ ಕಾಣಿಸಿಕೊಂಡಿದ್ದರು. ಈಗ ದಶಕಗಳ ನಂತರ ಇಬ್ಬರು ಸೂಪರ್ ಸ್ಟಾರ್‌ಗಳು ಮತ್ತೆ ಒಟ್ಟಿಗೆ ಬೆಳ್ಳಿತೆರೆಯ ಮೇಲೆ ಅಬ್ಬರಿಸಲು ಸಜ್ಜಾಗಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು