AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ‘ಹುಕುಂ’ ನೀಡಲು ಸಜ್ಜಾದ ರಜನಿಕಾಂತ್​; ‘ಜೈಲರ್​’ ಸಿನಿಮಾದ 2ನೇ ಹಾಡಿನ ಬಿಡುಗಡೆಗೆ ದಿನಾಂಕ ನಿಗದಿ

Jailer Movie Songs: ಅನಿರುದ್ಧ್​ ರವಿಚಂದರ್​ ಅವರು ‘ಜೈಲರ್​’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಕಾವಾಲಾ..’ ಹಾಡು ನೋಡಿ ಖುಷಿಪಟ್ಟಿರುವ ಸಿನಿಪ್ರಿಯರು ‘ಹುಕುಂ’ ಹಾಡನ್ನು ಬರಮಾಡಿಕೊಳ್ಳಲು ಕಾದಿದ್ದಾರೆ.

Rajinikanth: ‘ಹುಕುಂ’ ನೀಡಲು ಸಜ್ಜಾದ ರಜನಿಕಾಂತ್​; ‘ಜೈಲರ್​’ ಸಿನಿಮಾದ 2ನೇ ಹಾಡಿನ ಬಿಡುಗಡೆಗೆ ದಿನಾಂಕ ನಿಗದಿ
ರಜನಿಕಾಂತ್​
ಮದನ್​ ಕುಮಾರ್​
|

Updated on: Jul 14, 2023 | 3:40 PM

Share

ನಟ ರಜನಿಕಾಂತ್ (Rajinikanth)​ ಅವರು ‘ಜೈಲರ್​’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಹಾಡುಗಳ ಮೂಲಕ ಈ ಸಿನಿಮಾ ಸದ್ದು ಮಾಡುತ್ತಿದೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆದ ‘ಕಾವಾಲಾ..’ ಹಾಡು (Kaavaalaa Song) ಧೂಳೆಬ್ಬಿಸುತ್ತಿದೆ. ಆ ಗೀತೆಯಲ್ಲಿ ತಮನ್ನಾ ಭಾಟಿಯಾ ಅವರು ರಜನಿಕಾಂತ್​ ಜೊತೆ ಬಿಂದಾಸ್​ ಆಗಿ ಕುಣಿದಿದ್ದಾರೆ. ಈಗ ಮತ್ತೊಂದು ಹಾಡಿನ ಬಿಡುಗಡೆಗೆ ‘ಜೈಲರ್​’ ಸಿನಿಮಾ (Jailer Movie) ತಂಡ ಸಿದ್ಧತೆ ಮಾಡಿಕೊಂಡಿದೆ. 2ನೇ ಸಾಂಗ್​ ಹೆಸರು ‘ಹುಕುಂ’. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಜುಲೈ 17ಎಂದು ‘ಹುಕುಂ..’ ಹಾಡು ರಿಲೀಸ್​ ಆಗಲಿದೆ.

ಪ್ರತಿಷ್ಠಿತ ಸನ್​ ಪಿಕ್ಚರ್ಸ್​ ಮೂಲಕ ‘ಜೈಲರ್​’ ಸಿನಿಮಾ ನಿರ್ಮಾಣ ಆಗಿದೆ. ಆಗಸ್ಟ್​ 10ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈಗಲೇ ಪ್ರಚಾರಕ್ಕೆ ಸಖತ್​ ಮಹತ್ವ ನೀಡಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ‘ಕಾವಾಲಾ..’ ಹಾಡು ಹೊಸ ಕ್ರೇಜ್​ ಸೃಷ್ಟಿ ಮಾಡಿದೆ. ಅದೇ ರೀತಿ ‘ಹುಕುಂ..’ ಸಾಂಗ್​ ಕೂಡ ಟ್ರೆಂಡ್​ ಆಗಲಿದೆ ಎಂದು ರಜನಿಕಾಂತ್​ ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಈ ಹಾಡಿನ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದ್ದು, ಆ ಮೂಲಕ ಕೌತುಕ ಮೂಡಿಸುವ ಪ್ರಯತ್ನ ಮಾಡಲಾಗಿದೆ.

ಅನಿರುದ್ಧ್​ ರವಿಚಂದರ್​ ಅವರು ‘ಜೈಲರ್​’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಕಾವಾಲಾ..’ ಹಾಡು ನೋಡಿ ಖುಷಿಪಟ್ಟಿರುವ ಸಿನಿಪ್ರಿಯರು ‘ಹುಕುಂ’ ಹಾಡನ್ನು ಬರಮಾಡಿಕೊಳ್ಳಲು ಕಾದಿದ್ದಾರೆ. ಈ ಸಿನಿಮಾದಲ್ಲಿ ರಜನಿಕಾಂತ್​ ಅವರ ಕೋಡ್​ನೇಮ್​ ಟೈಗರ್​ ಆಗಿರಲಿದೆ ಎಂದು ಊಹಿಸಲಾಗುತ್ತಿದೆ. ‘ಹುಕುಂ’ ಹಾಡಿನಲ್ಲಿ ಆ ಬಗ್ಗೆ ಸುಳಿವು ಸಿಗುವ ಸಾಧ್ಯತೆ ಇದೆ. ಶೀರ್ಷಿಕೆಗೆ ತಕ್ಕಂತೆಯೇ ಈ ಸಿನಿಮಾದಲ್ಲಿ ರಜನಿಕಾಂತ್​ ಅವರು ಜೈಲರ್​ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ: Tamannaah Bhatia: ‘ಇಂಡಿಯನ್​ ಶಕೀರಾ’: ಅಭಿಮಾನಿಗಳು ಕೊಟ್ಟ ಹೊಸ ಬಿರುದನ್ನು ಸ್ವೀಕರಿಸಿದ ತಮನ್ನಾ ಭಾಟಿಯಾ

ನೆಲ್ಸನ್​ ದಿಲೀಪ್​ಕುಮಾರ್​ ಅವರು ‘ಜೈಲರ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಪಾತ್ರವರ್ಗದಲ್ಲಿ ಶಿವರಾಜ್​ಕುಮಾರ್​ ಕೂಡ ನಟಿಸಿರುವುದರಿಂದ ಕನ್ನಡ ಸಿನಿಪ್ರಿಯರ ವಲಯದಲ್ಲೂ ಈ ಚಿತ್ರದ ಬಗ್ಗೆ ನಿರೀಕ್ಷೆ ಮೂಡಿದೆ. ಮೋಹಲ್​ಲಾಲ್​, ಜಾಕಿ ಶ್ರಾಫ್​, ರಮ್ಯಾ ಕೃಷ್ಣನ್​ ಮುಂತಾದ ಘಟಾನುಘಟಿ ಕಲಾವಿದರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಬಹುತಾರಾಗಣದ ಕಾರಣದಿಂದಲೂ ಈ ಸಿನಿಮಾಗೆ ನಿರೀಕ್ಷೆ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ