Rajinikanth: ‘ಹುಕುಂ’ ನೀಡಲು ಸಜ್ಜಾದ ರಜನಿಕಾಂತ್​; ‘ಜೈಲರ್​’ ಸಿನಿಮಾದ 2ನೇ ಹಾಡಿನ ಬಿಡುಗಡೆಗೆ ದಿನಾಂಕ ನಿಗದಿ

Jailer Movie Songs: ಅನಿರುದ್ಧ್​ ರವಿಚಂದರ್​ ಅವರು ‘ಜೈಲರ್​’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಕಾವಾಲಾ..’ ಹಾಡು ನೋಡಿ ಖುಷಿಪಟ್ಟಿರುವ ಸಿನಿಪ್ರಿಯರು ‘ಹುಕುಂ’ ಹಾಡನ್ನು ಬರಮಾಡಿಕೊಳ್ಳಲು ಕಾದಿದ್ದಾರೆ.

Rajinikanth: ‘ಹುಕುಂ’ ನೀಡಲು ಸಜ್ಜಾದ ರಜನಿಕಾಂತ್​; ‘ಜೈಲರ್​’ ಸಿನಿಮಾದ 2ನೇ ಹಾಡಿನ ಬಿಡುಗಡೆಗೆ ದಿನಾಂಕ ನಿಗದಿ
ರಜನಿಕಾಂತ್​
Follow us
|

Updated on: Jul 14, 2023 | 3:40 PM

ನಟ ರಜನಿಕಾಂತ್ (Rajinikanth)​ ಅವರು ‘ಜೈಲರ್​’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಹಾಡುಗಳ ಮೂಲಕ ಈ ಸಿನಿಮಾ ಸದ್ದು ಮಾಡುತ್ತಿದೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆದ ‘ಕಾವಾಲಾ..’ ಹಾಡು (Kaavaalaa Song) ಧೂಳೆಬ್ಬಿಸುತ್ತಿದೆ. ಆ ಗೀತೆಯಲ್ಲಿ ತಮನ್ನಾ ಭಾಟಿಯಾ ಅವರು ರಜನಿಕಾಂತ್​ ಜೊತೆ ಬಿಂದಾಸ್​ ಆಗಿ ಕುಣಿದಿದ್ದಾರೆ. ಈಗ ಮತ್ತೊಂದು ಹಾಡಿನ ಬಿಡುಗಡೆಗೆ ‘ಜೈಲರ್​’ ಸಿನಿಮಾ (Jailer Movie) ತಂಡ ಸಿದ್ಧತೆ ಮಾಡಿಕೊಂಡಿದೆ. 2ನೇ ಸಾಂಗ್​ ಹೆಸರು ‘ಹುಕುಂ’. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಜುಲೈ 17ಎಂದು ‘ಹುಕುಂ..’ ಹಾಡು ರಿಲೀಸ್​ ಆಗಲಿದೆ.

ಪ್ರತಿಷ್ಠಿತ ಸನ್​ ಪಿಕ್ಚರ್ಸ್​ ಮೂಲಕ ‘ಜೈಲರ್​’ ಸಿನಿಮಾ ನಿರ್ಮಾಣ ಆಗಿದೆ. ಆಗಸ್ಟ್​ 10ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈಗಲೇ ಪ್ರಚಾರಕ್ಕೆ ಸಖತ್​ ಮಹತ್ವ ನೀಡಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ‘ಕಾವಾಲಾ..’ ಹಾಡು ಹೊಸ ಕ್ರೇಜ್​ ಸೃಷ್ಟಿ ಮಾಡಿದೆ. ಅದೇ ರೀತಿ ‘ಹುಕುಂ..’ ಸಾಂಗ್​ ಕೂಡ ಟ್ರೆಂಡ್​ ಆಗಲಿದೆ ಎಂದು ರಜನಿಕಾಂತ್​ ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಈ ಹಾಡಿನ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದ್ದು, ಆ ಮೂಲಕ ಕೌತುಕ ಮೂಡಿಸುವ ಪ್ರಯತ್ನ ಮಾಡಲಾಗಿದೆ.

ಅನಿರುದ್ಧ್​ ರವಿಚಂದರ್​ ಅವರು ‘ಜೈಲರ್​’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಕಾವಾಲಾ..’ ಹಾಡು ನೋಡಿ ಖುಷಿಪಟ್ಟಿರುವ ಸಿನಿಪ್ರಿಯರು ‘ಹುಕುಂ’ ಹಾಡನ್ನು ಬರಮಾಡಿಕೊಳ್ಳಲು ಕಾದಿದ್ದಾರೆ. ಈ ಸಿನಿಮಾದಲ್ಲಿ ರಜನಿಕಾಂತ್​ ಅವರ ಕೋಡ್​ನೇಮ್​ ಟೈಗರ್​ ಆಗಿರಲಿದೆ ಎಂದು ಊಹಿಸಲಾಗುತ್ತಿದೆ. ‘ಹುಕುಂ’ ಹಾಡಿನಲ್ಲಿ ಆ ಬಗ್ಗೆ ಸುಳಿವು ಸಿಗುವ ಸಾಧ್ಯತೆ ಇದೆ. ಶೀರ್ಷಿಕೆಗೆ ತಕ್ಕಂತೆಯೇ ಈ ಸಿನಿಮಾದಲ್ಲಿ ರಜನಿಕಾಂತ್​ ಅವರು ಜೈಲರ್​ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ: Tamannaah Bhatia: ‘ಇಂಡಿಯನ್​ ಶಕೀರಾ’: ಅಭಿಮಾನಿಗಳು ಕೊಟ್ಟ ಹೊಸ ಬಿರುದನ್ನು ಸ್ವೀಕರಿಸಿದ ತಮನ್ನಾ ಭಾಟಿಯಾ

ನೆಲ್ಸನ್​ ದಿಲೀಪ್​ಕುಮಾರ್​ ಅವರು ‘ಜೈಲರ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಪಾತ್ರವರ್ಗದಲ್ಲಿ ಶಿವರಾಜ್​ಕುಮಾರ್​ ಕೂಡ ನಟಿಸಿರುವುದರಿಂದ ಕನ್ನಡ ಸಿನಿಪ್ರಿಯರ ವಲಯದಲ್ಲೂ ಈ ಚಿತ್ರದ ಬಗ್ಗೆ ನಿರೀಕ್ಷೆ ಮೂಡಿದೆ. ಮೋಹಲ್​ಲಾಲ್​, ಜಾಕಿ ಶ್ರಾಫ್​, ರಮ್ಯಾ ಕೃಷ್ಣನ್​ ಮುಂತಾದ ಘಟಾನುಘಟಿ ಕಲಾವಿದರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಬಹುತಾರಾಗಣದ ಕಾರಣದಿಂದಲೂ ಈ ಸಿನಿಮಾಗೆ ನಿರೀಕ್ಷೆ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್