AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ‘ಹುಕುಂ’ ನೀಡಲು ಸಜ್ಜಾದ ರಜನಿಕಾಂತ್​; ‘ಜೈಲರ್​’ ಸಿನಿಮಾದ 2ನೇ ಹಾಡಿನ ಬಿಡುಗಡೆಗೆ ದಿನಾಂಕ ನಿಗದಿ

Jailer Movie Songs: ಅನಿರುದ್ಧ್​ ರವಿಚಂದರ್​ ಅವರು ‘ಜೈಲರ್​’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಕಾವಾಲಾ..’ ಹಾಡು ನೋಡಿ ಖುಷಿಪಟ್ಟಿರುವ ಸಿನಿಪ್ರಿಯರು ‘ಹುಕುಂ’ ಹಾಡನ್ನು ಬರಮಾಡಿಕೊಳ್ಳಲು ಕಾದಿದ್ದಾರೆ.

Rajinikanth: ‘ಹುಕುಂ’ ನೀಡಲು ಸಜ್ಜಾದ ರಜನಿಕಾಂತ್​; ‘ಜೈಲರ್​’ ಸಿನಿಮಾದ 2ನೇ ಹಾಡಿನ ಬಿಡುಗಡೆಗೆ ದಿನಾಂಕ ನಿಗದಿ
ರಜನಿಕಾಂತ್​
ಮದನ್​ ಕುಮಾರ್​
|

Updated on: Jul 14, 2023 | 3:40 PM

Share

ನಟ ರಜನಿಕಾಂತ್ (Rajinikanth)​ ಅವರು ‘ಜೈಲರ್​’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಹಾಡುಗಳ ಮೂಲಕ ಈ ಸಿನಿಮಾ ಸದ್ದು ಮಾಡುತ್ತಿದೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆದ ‘ಕಾವಾಲಾ..’ ಹಾಡು (Kaavaalaa Song) ಧೂಳೆಬ್ಬಿಸುತ್ತಿದೆ. ಆ ಗೀತೆಯಲ್ಲಿ ತಮನ್ನಾ ಭಾಟಿಯಾ ಅವರು ರಜನಿಕಾಂತ್​ ಜೊತೆ ಬಿಂದಾಸ್​ ಆಗಿ ಕುಣಿದಿದ್ದಾರೆ. ಈಗ ಮತ್ತೊಂದು ಹಾಡಿನ ಬಿಡುಗಡೆಗೆ ‘ಜೈಲರ್​’ ಸಿನಿಮಾ (Jailer Movie) ತಂಡ ಸಿದ್ಧತೆ ಮಾಡಿಕೊಂಡಿದೆ. 2ನೇ ಸಾಂಗ್​ ಹೆಸರು ‘ಹುಕುಂ’. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಜುಲೈ 17ಎಂದು ‘ಹುಕುಂ..’ ಹಾಡು ರಿಲೀಸ್​ ಆಗಲಿದೆ.

ಪ್ರತಿಷ್ಠಿತ ಸನ್​ ಪಿಕ್ಚರ್ಸ್​ ಮೂಲಕ ‘ಜೈಲರ್​’ ಸಿನಿಮಾ ನಿರ್ಮಾಣ ಆಗಿದೆ. ಆಗಸ್ಟ್​ 10ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈಗಲೇ ಪ್ರಚಾರಕ್ಕೆ ಸಖತ್​ ಮಹತ್ವ ನೀಡಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ‘ಕಾವಾಲಾ..’ ಹಾಡು ಹೊಸ ಕ್ರೇಜ್​ ಸೃಷ್ಟಿ ಮಾಡಿದೆ. ಅದೇ ರೀತಿ ‘ಹುಕುಂ..’ ಸಾಂಗ್​ ಕೂಡ ಟ್ರೆಂಡ್​ ಆಗಲಿದೆ ಎಂದು ರಜನಿಕಾಂತ್​ ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಈ ಹಾಡಿನ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದ್ದು, ಆ ಮೂಲಕ ಕೌತುಕ ಮೂಡಿಸುವ ಪ್ರಯತ್ನ ಮಾಡಲಾಗಿದೆ.

ಅನಿರುದ್ಧ್​ ರವಿಚಂದರ್​ ಅವರು ‘ಜೈಲರ್​’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಕಾವಾಲಾ..’ ಹಾಡು ನೋಡಿ ಖುಷಿಪಟ್ಟಿರುವ ಸಿನಿಪ್ರಿಯರು ‘ಹುಕುಂ’ ಹಾಡನ್ನು ಬರಮಾಡಿಕೊಳ್ಳಲು ಕಾದಿದ್ದಾರೆ. ಈ ಸಿನಿಮಾದಲ್ಲಿ ರಜನಿಕಾಂತ್​ ಅವರ ಕೋಡ್​ನೇಮ್​ ಟೈಗರ್​ ಆಗಿರಲಿದೆ ಎಂದು ಊಹಿಸಲಾಗುತ್ತಿದೆ. ‘ಹುಕುಂ’ ಹಾಡಿನಲ್ಲಿ ಆ ಬಗ್ಗೆ ಸುಳಿವು ಸಿಗುವ ಸಾಧ್ಯತೆ ಇದೆ. ಶೀರ್ಷಿಕೆಗೆ ತಕ್ಕಂತೆಯೇ ಈ ಸಿನಿಮಾದಲ್ಲಿ ರಜನಿಕಾಂತ್​ ಅವರು ಜೈಲರ್​ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ: Tamannaah Bhatia: ‘ಇಂಡಿಯನ್​ ಶಕೀರಾ’: ಅಭಿಮಾನಿಗಳು ಕೊಟ್ಟ ಹೊಸ ಬಿರುದನ್ನು ಸ್ವೀಕರಿಸಿದ ತಮನ್ನಾ ಭಾಟಿಯಾ

ನೆಲ್ಸನ್​ ದಿಲೀಪ್​ಕುಮಾರ್​ ಅವರು ‘ಜೈಲರ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಪಾತ್ರವರ್ಗದಲ್ಲಿ ಶಿವರಾಜ್​ಕುಮಾರ್​ ಕೂಡ ನಟಿಸಿರುವುದರಿಂದ ಕನ್ನಡ ಸಿನಿಪ್ರಿಯರ ವಲಯದಲ್ಲೂ ಈ ಚಿತ್ರದ ಬಗ್ಗೆ ನಿರೀಕ್ಷೆ ಮೂಡಿದೆ. ಮೋಹಲ್​ಲಾಲ್​, ಜಾಕಿ ಶ್ರಾಫ್​, ರಮ್ಯಾ ಕೃಷ್ಣನ್​ ಮುಂತಾದ ಘಟಾನುಘಟಿ ಕಲಾವಿದರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಬಹುತಾರಾಗಣದ ಕಾರಣದಿಂದಲೂ ಈ ಸಿನಿಮಾಗೆ ನಿರೀಕ್ಷೆ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ