AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ‘ಹುಕುಂ’ ನೀಡಲು ಸಜ್ಜಾದ ರಜನಿಕಾಂತ್​; ‘ಜೈಲರ್​’ ಸಿನಿಮಾದ 2ನೇ ಹಾಡಿನ ಬಿಡುಗಡೆಗೆ ದಿನಾಂಕ ನಿಗದಿ

Jailer Movie Songs: ಅನಿರುದ್ಧ್​ ರವಿಚಂದರ್​ ಅವರು ‘ಜೈಲರ್​’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಕಾವಾಲಾ..’ ಹಾಡು ನೋಡಿ ಖುಷಿಪಟ್ಟಿರುವ ಸಿನಿಪ್ರಿಯರು ‘ಹುಕುಂ’ ಹಾಡನ್ನು ಬರಮಾಡಿಕೊಳ್ಳಲು ಕಾದಿದ್ದಾರೆ.

Rajinikanth: ‘ಹುಕುಂ’ ನೀಡಲು ಸಜ್ಜಾದ ರಜನಿಕಾಂತ್​; ‘ಜೈಲರ್​’ ಸಿನಿಮಾದ 2ನೇ ಹಾಡಿನ ಬಿಡುಗಡೆಗೆ ದಿನಾಂಕ ನಿಗದಿ
ರಜನಿಕಾಂತ್​
ಮದನ್​ ಕುಮಾರ್​
|

Updated on: Jul 14, 2023 | 3:40 PM

Share

ನಟ ರಜನಿಕಾಂತ್ (Rajinikanth)​ ಅವರು ‘ಜೈಲರ್​’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಹಾಡುಗಳ ಮೂಲಕ ಈ ಸಿನಿಮಾ ಸದ್ದು ಮಾಡುತ್ತಿದೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆದ ‘ಕಾವಾಲಾ..’ ಹಾಡು (Kaavaalaa Song) ಧೂಳೆಬ್ಬಿಸುತ್ತಿದೆ. ಆ ಗೀತೆಯಲ್ಲಿ ತಮನ್ನಾ ಭಾಟಿಯಾ ಅವರು ರಜನಿಕಾಂತ್​ ಜೊತೆ ಬಿಂದಾಸ್​ ಆಗಿ ಕುಣಿದಿದ್ದಾರೆ. ಈಗ ಮತ್ತೊಂದು ಹಾಡಿನ ಬಿಡುಗಡೆಗೆ ‘ಜೈಲರ್​’ ಸಿನಿಮಾ (Jailer Movie) ತಂಡ ಸಿದ್ಧತೆ ಮಾಡಿಕೊಂಡಿದೆ. 2ನೇ ಸಾಂಗ್​ ಹೆಸರು ‘ಹುಕುಂ’. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಜುಲೈ 17ಎಂದು ‘ಹುಕುಂ..’ ಹಾಡು ರಿಲೀಸ್​ ಆಗಲಿದೆ.

ಪ್ರತಿಷ್ಠಿತ ಸನ್​ ಪಿಕ್ಚರ್ಸ್​ ಮೂಲಕ ‘ಜೈಲರ್​’ ಸಿನಿಮಾ ನಿರ್ಮಾಣ ಆಗಿದೆ. ಆಗಸ್ಟ್​ 10ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈಗಲೇ ಪ್ರಚಾರಕ್ಕೆ ಸಖತ್​ ಮಹತ್ವ ನೀಡಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ‘ಕಾವಾಲಾ..’ ಹಾಡು ಹೊಸ ಕ್ರೇಜ್​ ಸೃಷ್ಟಿ ಮಾಡಿದೆ. ಅದೇ ರೀತಿ ‘ಹುಕುಂ..’ ಸಾಂಗ್​ ಕೂಡ ಟ್ರೆಂಡ್​ ಆಗಲಿದೆ ಎಂದು ರಜನಿಕಾಂತ್​ ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಈ ಹಾಡಿನ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದ್ದು, ಆ ಮೂಲಕ ಕೌತುಕ ಮೂಡಿಸುವ ಪ್ರಯತ್ನ ಮಾಡಲಾಗಿದೆ.

ಅನಿರುದ್ಧ್​ ರವಿಚಂದರ್​ ಅವರು ‘ಜೈಲರ್​’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಕಾವಾಲಾ..’ ಹಾಡು ನೋಡಿ ಖುಷಿಪಟ್ಟಿರುವ ಸಿನಿಪ್ರಿಯರು ‘ಹುಕುಂ’ ಹಾಡನ್ನು ಬರಮಾಡಿಕೊಳ್ಳಲು ಕಾದಿದ್ದಾರೆ. ಈ ಸಿನಿಮಾದಲ್ಲಿ ರಜನಿಕಾಂತ್​ ಅವರ ಕೋಡ್​ನೇಮ್​ ಟೈಗರ್​ ಆಗಿರಲಿದೆ ಎಂದು ಊಹಿಸಲಾಗುತ್ತಿದೆ. ‘ಹುಕುಂ’ ಹಾಡಿನಲ್ಲಿ ಆ ಬಗ್ಗೆ ಸುಳಿವು ಸಿಗುವ ಸಾಧ್ಯತೆ ಇದೆ. ಶೀರ್ಷಿಕೆಗೆ ತಕ್ಕಂತೆಯೇ ಈ ಸಿನಿಮಾದಲ್ಲಿ ರಜನಿಕಾಂತ್​ ಅವರು ಜೈಲರ್​ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ: Tamannaah Bhatia: ‘ಇಂಡಿಯನ್​ ಶಕೀರಾ’: ಅಭಿಮಾನಿಗಳು ಕೊಟ್ಟ ಹೊಸ ಬಿರುದನ್ನು ಸ್ವೀಕರಿಸಿದ ತಮನ್ನಾ ಭಾಟಿಯಾ

ನೆಲ್ಸನ್​ ದಿಲೀಪ್​ಕುಮಾರ್​ ಅವರು ‘ಜೈಲರ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಪಾತ್ರವರ್ಗದಲ್ಲಿ ಶಿವರಾಜ್​ಕುಮಾರ್​ ಕೂಡ ನಟಿಸಿರುವುದರಿಂದ ಕನ್ನಡ ಸಿನಿಪ್ರಿಯರ ವಲಯದಲ್ಲೂ ಈ ಚಿತ್ರದ ಬಗ್ಗೆ ನಿರೀಕ್ಷೆ ಮೂಡಿದೆ. ಮೋಹಲ್​ಲಾಲ್​, ಜಾಕಿ ಶ್ರಾಫ್​, ರಮ್ಯಾ ಕೃಷ್ಣನ್​ ಮುಂತಾದ ಘಟಾನುಘಟಿ ಕಲಾವಿದರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಬಹುತಾರಾಗಣದ ಕಾರಣದಿಂದಲೂ ಈ ಸಿನಿಮಾಗೆ ನಿರೀಕ್ಷೆ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ