Rajinikanth: ‘ಹುಕುಂ’ ನೀಡಲು ಸಜ್ಜಾದ ರಜನಿಕಾಂತ್​; ‘ಜೈಲರ್​’ ಸಿನಿಮಾದ 2ನೇ ಹಾಡಿನ ಬಿಡುಗಡೆಗೆ ದಿನಾಂಕ ನಿಗದಿ

Jailer Movie Songs: ಅನಿರುದ್ಧ್​ ರವಿಚಂದರ್​ ಅವರು ‘ಜೈಲರ್​’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಕಾವಾಲಾ..’ ಹಾಡು ನೋಡಿ ಖುಷಿಪಟ್ಟಿರುವ ಸಿನಿಪ್ರಿಯರು ‘ಹುಕುಂ’ ಹಾಡನ್ನು ಬರಮಾಡಿಕೊಳ್ಳಲು ಕಾದಿದ್ದಾರೆ.

Rajinikanth: ‘ಹುಕುಂ’ ನೀಡಲು ಸಜ್ಜಾದ ರಜನಿಕಾಂತ್​; ‘ಜೈಲರ್​’ ಸಿನಿಮಾದ 2ನೇ ಹಾಡಿನ ಬಿಡುಗಡೆಗೆ ದಿನಾಂಕ ನಿಗದಿ
ರಜನಿಕಾಂತ್​

Updated on: Jul 14, 2023 | 3:40 PM

ನಟ ರಜನಿಕಾಂತ್ (Rajinikanth)​ ಅವರು ‘ಜೈಲರ್​’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಹಾಡುಗಳ ಮೂಲಕ ಈ ಸಿನಿಮಾ ಸದ್ದು ಮಾಡುತ್ತಿದೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆದ ‘ಕಾವಾಲಾ..’ ಹಾಡು (Kaavaalaa Song) ಧೂಳೆಬ್ಬಿಸುತ್ತಿದೆ. ಆ ಗೀತೆಯಲ್ಲಿ ತಮನ್ನಾ ಭಾಟಿಯಾ ಅವರು ರಜನಿಕಾಂತ್​ ಜೊತೆ ಬಿಂದಾಸ್​ ಆಗಿ ಕುಣಿದಿದ್ದಾರೆ. ಈಗ ಮತ್ತೊಂದು ಹಾಡಿನ ಬಿಡುಗಡೆಗೆ ‘ಜೈಲರ್​’ ಸಿನಿಮಾ (Jailer Movie) ತಂಡ ಸಿದ್ಧತೆ ಮಾಡಿಕೊಂಡಿದೆ. 2ನೇ ಸಾಂಗ್​ ಹೆಸರು ‘ಹುಕುಂ’. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಜುಲೈ 17ಎಂದು ‘ಹುಕುಂ..’ ಹಾಡು ರಿಲೀಸ್​ ಆಗಲಿದೆ.

ಪ್ರತಿಷ್ಠಿತ ಸನ್​ ಪಿಕ್ಚರ್ಸ್​ ಮೂಲಕ ‘ಜೈಲರ್​’ ಸಿನಿಮಾ ನಿರ್ಮಾಣ ಆಗಿದೆ. ಆಗಸ್ಟ್​ 10ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈಗಲೇ ಪ್ರಚಾರಕ್ಕೆ ಸಖತ್​ ಮಹತ್ವ ನೀಡಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ‘ಕಾವಾಲಾ..’ ಹಾಡು ಹೊಸ ಕ್ರೇಜ್​ ಸೃಷ್ಟಿ ಮಾಡಿದೆ. ಅದೇ ರೀತಿ ‘ಹುಕುಂ..’ ಸಾಂಗ್​ ಕೂಡ ಟ್ರೆಂಡ್​ ಆಗಲಿದೆ ಎಂದು ರಜನಿಕಾಂತ್​ ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಈ ಹಾಡಿನ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದ್ದು, ಆ ಮೂಲಕ ಕೌತುಕ ಮೂಡಿಸುವ ಪ್ರಯತ್ನ ಮಾಡಲಾಗಿದೆ.

ಅನಿರುದ್ಧ್​ ರವಿಚಂದರ್​ ಅವರು ‘ಜೈಲರ್​’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಕಾವಾಲಾ..’ ಹಾಡು ನೋಡಿ ಖುಷಿಪಟ್ಟಿರುವ ಸಿನಿಪ್ರಿಯರು ‘ಹುಕುಂ’ ಹಾಡನ್ನು ಬರಮಾಡಿಕೊಳ್ಳಲು ಕಾದಿದ್ದಾರೆ. ಈ ಸಿನಿಮಾದಲ್ಲಿ ರಜನಿಕಾಂತ್​ ಅವರ ಕೋಡ್​ನೇಮ್​ ಟೈಗರ್​ ಆಗಿರಲಿದೆ ಎಂದು ಊಹಿಸಲಾಗುತ್ತಿದೆ. ‘ಹುಕುಂ’ ಹಾಡಿನಲ್ಲಿ ಆ ಬಗ್ಗೆ ಸುಳಿವು ಸಿಗುವ ಸಾಧ್ಯತೆ ಇದೆ. ಶೀರ್ಷಿಕೆಗೆ ತಕ್ಕಂತೆಯೇ ಈ ಸಿನಿಮಾದಲ್ಲಿ ರಜನಿಕಾಂತ್​ ಅವರು ಜೈಲರ್​ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ: Tamannaah Bhatia: ‘ಇಂಡಿಯನ್​ ಶಕೀರಾ’: ಅಭಿಮಾನಿಗಳು ಕೊಟ್ಟ ಹೊಸ ಬಿರುದನ್ನು ಸ್ವೀಕರಿಸಿದ ತಮನ್ನಾ ಭಾಟಿಯಾ

ನೆಲ್ಸನ್​ ದಿಲೀಪ್​ಕುಮಾರ್​ ಅವರು ‘ಜೈಲರ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಪಾತ್ರವರ್ಗದಲ್ಲಿ ಶಿವರಾಜ್​ಕುಮಾರ್​ ಕೂಡ ನಟಿಸಿರುವುದರಿಂದ ಕನ್ನಡ ಸಿನಿಪ್ರಿಯರ ವಲಯದಲ್ಲೂ ಈ ಚಿತ್ರದ ಬಗ್ಗೆ ನಿರೀಕ್ಷೆ ಮೂಡಿದೆ. ಮೋಹಲ್​ಲಾಲ್​, ಜಾಕಿ ಶ್ರಾಫ್​, ರಮ್ಯಾ ಕೃಷ್ಣನ್​ ಮುಂತಾದ ಘಟಾನುಘಟಿ ಕಲಾವಿದರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಬಹುತಾರಾಗಣದ ಕಾರಣದಿಂದಲೂ ಈ ಸಿನಿಮಾಗೆ ನಿರೀಕ್ಷೆ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us