ಶಿವಣ್ಣನ ಸಿನಿಮಾ ಜತೆ ಕ್ಲ್ಯಾಶ್​ ಆಗಲ್ಲ ರಜನಿಕಾಂತ್​ ಚಿತ್ರ; ‘ಲಾಲ್​ ಸಲಾಂ’ ಬಿಡುಗಡೆ ಮುಂದಕ್ಕೆ

ಸ್ಪೋರ್ಟ್ಸ್​ ಡ್ರಾಮಾ ಹೊಂದಿರುವ ‘ಲಾಲ್ ಸಲಾಂ’ ಸಿನಿಮಾದಲ್ಲಿ ರಜನಿಕಾಂತ್​ ಜೊತೆ ವಿಷ್ಣು ವಿಶಾಲ್, ವಿಕ್ರಾಂತ್ ಅವರು ನಟಿಸಿದ್ದಾರೆ. ತಮಿಳು ಮಾತ್ರವಲ್ಲದೇ ಕನ್ನಡ, ತೆಲುಗು, ಹಿಂದಿ, ಮಲಯಾಳಂನಲ್ಲಿ ಈ ಚಿತ್ರ ತೆರೆಕಾಣಲಿದೆ. ಕಾರಣಾಂತರಗಳಿಂದ ಈ ಸಿನಿಮಾದ ರಿಲೀಸ್​ ಡೇಟ್​ ಮುಂದೂಡಿಕೆ ಆಗಿದೆ.

ಶಿವಣ್ಣನ ಸಿನಿಮಾ ಜತೆ ಕ್ಲ್ಯಾಶ್​ ಆಗಲ್ಲ ರಜನಿಕಾಂತ್​ ಚಿತ್ರ; ‘ಲಾಲ್​ ಸಲಾಂ’ ಬಿಡುಗಡೆ ಮುಂದಕ್ಕೆ
ರಜನಿಕಾಂತ್​

Updated on: Jan 11, 2024 | 5:40 PM

ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಾಲು ಸಾಲು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಸ್ಟಾರ್​ ನಟರ ಅನೇಕ ಚಿತ್ರಗಳು ಹಬ್ಬದ ಆಸುಪಾಸಿನಲ್ಲಿ ತೆರೆಕಾಣುತ್ತಿರುವುದರಿಂದ ಕ್ಲ್ಯಾಶ್ ಆಗುವುದು ಗ್ಯಾರಂಟಿ. ‘ಕ್ಯಾಪ್ಟನ್​ ಮಿಲ್ಲರ್​’, ‘ಗುಂಟೂರು ಖಾರಂ’, ‘ನಾ ಸಾಮಿ ರಂಗ’ ಮುಂತಾದ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ರಜನಿಕಾಂತ್​ (Rajinikanth) ನಟನೆಯ ‘ಲಾಲ್​ ಸಲಾಂ’ ಸಿನಿಮಾ ಕೂಡ ಇದೇ ಸಂದರ್ಭದಲ್ಲಿ ತೆರೆಕಾಣಬೇಕಿತ್ತು. ಆದರೆ ಈಗ ಆ ಸಿನಿಮಾದ ರಿಲೀಸ್​ ದಿನಾಂಕ ಮುಂದೂಡಿಕೆ ಆಗಿದೆ. ಆ ಬಗ್ಗೆ ‘ಲಾಲ್​ ಸಲಾಂ’ (Lal Salaam) ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ.

‘ಲಾಲ್ ಸಲಾಂ’ ಸಿನಿಮಾಗೆ ಐಶ್ವರ್ಯಾ ರಜನಿಕಾಂತ್ ಅವರು ನಿರ್ದೇಶನ ಮಾಡಿದ್ದಾರೆ. ‘ಜೈಲರ್’ ಸಿನಿಮಾದ ಅಭೂತಪೂರ್ವ ಗೆಲುವಿನ ಬಳಿಕ ‘ಸೂಪರ್ ಸ್ಟಾರ್’ ರಜನಿಕಾಂತ್ ಅಭಿನಯಿಸಿರುವ ಈ ಸಿನಿಮಾ ಸಂಕ್ರಾಂತಿ ಹಬ್ಬಕ್ಕೆ ರಿಲೀಸ್​ ಆಗಲಿದೆ ಎಂದು ಈ ಮೊದಲು ತಿಳಿಸಲಾಗಿತ್ತು. ಅದೇ ಸಂದರ್ಭದಲ್ಲಿ (ಜ.12) ಶಿವರಾಜ್​ಕುಮಾರ್​ ನಟನೆಯ ‘ಕ್ಯಾಪ್ಟನ್​ ಮಿಲ್ಲರ್​’ ಕೂಡ ಬಿಡುಗಡೆ ಆಗಲಿದೆ. ಆದರೆ ಈಗ ಆ ಕ್ಲ್ಯಾಶ್​ ತಪ್ಪಿದೆ. ‘ಲಾಲ್ ಸಲಾಂ’ ರಿಲೀಸ್​ ಡೇಟ್​ ಫೆಬ್ರವರಿ 9ಕ್ಕೆ ಮುಂದೂಡಿಕೆ ಆಗಿದೆ.

ಇದನ್ನೂ ಓದಿ: ರಜನಿಕಾಂತ್​ ಹೊಸ ಸಿನಿಮಾ ಹೆಸರು ‘ವೆಟ್ಟೈಯನ್​’​; ಧೂಳೆಬ್ಬಿಸಿದ ಟೈಟಲ್​​ ಟೀಸರ್​

ಸ್ಪೋರ್ಟ್ಸ್​ ಡ್ರಾಮಾ ಹೊಂದಿರುವ ‘ಲಾಲ್ ಸಲಾಂ’ ಸಿನಿಮಾದಲ್ಲಿ ರಜನಿಕಾಂತ್​ ಜೊತೆ ವಿಷ್ಣು ವಿಶಾಲ್, ವಿಕ್ರಾಂತ್ ಅವರು ನಟಿಸಿದ್ದಾರೆ. ವಿಘ್ನೇಶ್, ಸೆಂಥಿಲ್, ಕೆ.ಎಸ್. ರವಿಕುಮಾರ್, ಜೀವಿತಾ, ತಂಬಿ ರಾಮಯ್ಯ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ರಜನಿಕಾಂತ್ ಅವರು ಈ ಸಿನಿಮಾದಲ್ಲಿ ಮೊಯಿದ್ದೀನ್ ಭಾಯ್ ಎಂಬ ಪವರ್‌ಫುಲ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅವರ ಗೆಟಪ್​ ಗಮನ ಸೆಳೆಯುವಂತಿದೆ.

ತಮಿಳು ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ‘ಲೈಕಾ ಪ್ರೊಡಕ್ಷನ್ಸ್‌’ ಮೂಲಕ ಸುಭಾಸ್ಕರನ್‌ ಅವರು ‘ಲಾಲ್​ ಸಲಾಂ’ ಸಿನಿಮಾ ನಿರ್ಮಿಸಿದ್ದಾರೆ. ತಮಿಳುನಾಡಲ್ಲಿ ಈ ಚಿತ್ರದ ವಿತರಣೆ ಹಕ್ಕನ್ನು ‘ರೆಡ್ ಜೈಂಟ್’ ಸಂಸ್ಥೆ ಪಡೆದಿದೆ. ತಮಿಳು ಮಾತ್ರವಲ್ಲದೇ ಕನ್ನಡ, ತೆಲುಗು, ಹಿಂದಿ, ಮಲಯಾಳಂನಲ್ಲಿ ಈ ಚಿತ್ರ ತೆರೆಕಾಣಲಿದೆ. ‘ಲಾಲ್ ಸಲಾಂ’ ಚಿತ್ರಕ್ಕೆ ಎ.ಆರ್. ರೆಹಮಾನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ವಿಷ್ಣು ರಂಗಸಾಮಿ ಛಾಯಾಗ್ರಹಣ, ಬಿ. ಪ್ರವೀಣ್ ಭಾಸ್ಕರ್ ಸಂಕಲನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:29 pm, Thu, 11 January 24

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us