AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಕ್ಷಕರೇ ಇಲ್ಲದೇ ರಜನಿಕಾಂತ್​ ಸಿನಿಮಾ ಕ್ಯಾನ್ಸಲ್​; ‘ಲಾಲ್​ ಸಲಾಂ’ ಚಿತ್ರಕ್ಕೆ ಹಿನ್ನಡೆ

ರಜನಿಕಾಂತ್ ಅಭಿನಯದ ಸಿನಿಮಾಗಳ ಬಗ್ಗೆ ಎಲ್ಲ ರಾಜ್ಯಗಳಲ್ಲೂ ಒಂದು ಮಟ್ಟದ ಕ್ರೇಜ್​ ಇದ್ದೇ ಇರುತ್ತದೆ. ಆದರೆ ಇಂದು (ಫೆಬ್ರವರಿ 9) ತೆರೆಕಂಡಿರುವ ‘ಲಾಲ್​ ಸಲಾಂ’ ಸಿನಿಮಾಗೆ ತೆಲುಗು ಭಾಷಿಕ ರಾಜ್ಯಗಳಲ್ಲಿ ಹಿನ್ನಡೆ ಆಗಿದೆ. ಚಿತ್ರಮಂದಿರದತ್ತ ಪ್ರೇಕ್ಷಕರೇ ಬಂದಿಲ್ಲ ಎಂಬ ಕಾರಣಕ್ಕೆ ಅನೇಕ ಕಡೆಗಳಲ್ಲಿ ‘ಲಾಲ್​ ಸಲಾಂ’ ಶೋ ಕ್ಯಾನ್ಸಲ್​ ಆಗಿದೆ. ಈ ಚಿತ್ರಕ್ಕೆ ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆ ಬಂಡವಾಳ ಹೂಡಿದೆ.

ಪ್ರೇಕ್ಷಕರೇ ಇಲ್ಲದೇ ರಜನಿಕಾಂತ್​ ಸಿನಿಮಾ ಕ್ಯಾನ್ಸಲ್​; ‘ಲಾಲ್​ ಸಲಾಂ’ ಚಿತ್ರಕ್ಕೆ ಹಿನ್ನಡೆ
ರಜನಿಕಾಂತ್​
ಮದನ್​ ಕುಮಾರ್​
|

Updated on: Feb 09, 2024 | 5:34 PM

Share

ನಟ ರಜನಿಕಾಂತ್​ (Rajinikanth) ಅವರು ಕಳೆದ ವರ್ಷ ‘ಜೈಲರ್​’ ಸಿನಿಮಾ ಮೂಲಕ ಭಾರಿ ಸದ್ದು ಮಾಡಿದ್ದರು. ಹಾಗಾಗಿ ಅವರ ಹೊಸ ಸಿನಿಮಾ ಮೇಲೆ ನಿರೀಕ್ಷೆ ಮೂಡುವುದು ಸಹಜ. ಈಗ ರಜನಿಕಾಂತ್​ ನಟಿಸಿರುವ ‘ಲಾಲ್​ ಸಲಾಂ’ ಸಿನಿಮಾ (Lal Salaam Movie) ಬಿಡುಗಡೆ ಆಗಿದೆ. ತಮಿಳಿನ ಈ ಚಿತ್ರವು ತೆಲುಗಿಗೂ ಡಬ್​ ಆಗಿ ತೆರೆಕಂಡಿದೆ. ಅಚ್ಚರಿ ಏನೆಂದರೆ, ಈ ಸಿನಿಮಾಗೆ ತೆಲುಗು ಭಾಷಿಕ ರಾಜ್ಯಗಳಲ್ಲಿ ನೀರಸ ಪ್ರತಿಕ್ರಿಯೆ ಸಿಕ್ಕಿದೆ. ಆಂಧ್ರ ಮತ್ತು ತೆಲಂಗಾಣದ ಕೆಲವು ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಕೊರತೆಯಿಂದಾಗಿ ‘ಲಾಲ್​ ಸಲಾಂ’ ಸಿನಿಮಾದ ಶೋ ಕ್ಯಾನ್ಸಲ್​ ಮಾಡಲಾಗಿದೆ ಎಂದು ವರದಿ ಆಗಿದೆ. ರಜನಿಕಾಂತ್​ ನಟನೆಯ ಸಿನಿಮಾಗೆ (Rajinikanth New Movie) ಈ ರೀತಿ ಆಗಿರುವುದು ಅಚ್ಚರಿ ಮೂಡಿಸಿದೆ.

ತೆಲುಗಿಗೆ ಡಬ್​ ಆದ ‘ಜೈಲರ್​’ ಸಿನಿಮಾಗೆ ಆಂಧ್ರ ಮತ್ತು ತೆಲಂಗಾಣದಲ್ಲಿ ಒಟ್ಟು 47 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತ್ತು ಎಂಬ ಮಾಹಿತಿ. ಅದಕ್ಕೆ ಹೋಲಿಸಿದರೆ ‘ಲಾಲ್​ ಸಲಾಂ’ ಸಿನಿಮಾ ಹೀನಾಯವಾಗಿ ಮುಗ್ಗರಿಸಿದಂತೆ ಆಗಿದೆ. ಪ್ರೇಕ್ಷಕರೇ ಇಲ್ಲದೇ ತೆಲುಗು ವರ್ಷನ್​ನ ಶೋಗಳನ್ನು ರದ್ದು ಮಾಡಲಾಗಿದ್ದು, ಕೆಲವರಿಗೆ ಟಿಕೆಟ್​ ಹಣವನ್ನು ರೀ-ಫಂಡ್​ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ರಜನಿಕಾಂತ್​ ಅಭಿಮಾನಿಗಳಿಗೆ ನಿಜಕ್ಕೂ ಇದು ಬೇಸರ ಮೂಡಿಸಿದೆ.

ಇದನ್ನೂ ಓದಿ: 40 ನಿಮಿಷದ ಪಾತ್ರ; ಪ್ರತಿ ನಿಮಿಷಕ್ಕೆ 1 ಕೋಟಿ ರೂ. ಸಂಭಾವನೆ: ದುಬಾರಿ ರಜನಿಕಾಂತ್​

‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆಯ ಮೂಲಕ ನಿರ್ಮಾಣ ಆಗಿರುವ ‘ಲಾಲ್​ ಸಲಾಂ’ ಸಿನಿಮಾಗೆ ರಜನಿಕಾಂತ್​ ಅವರ ಮಗಳು ಐಶ್ವರ್ಯಾ ರಜನಿಕಾಂತ್​ ನಿರ್ದೇಶನ ಮಾಡಿದ್ದಾರೆ. ಒಂದು ಗಂಭೀರವಾದ ವಿಷಯವನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಹಿಂದೂ-ಮುಸ್ಲಿಂ ನಡುವಿನ ಘರ್ಷಣೆ ಮತ್ತು ಸಾಮರಸ್ಯದ ಕಹಾನಿಯನ್ನು ಈ ಸಿನಿಮಾಲ್ಲಿ ತೋರಿಸಲಾಗಿದೆ. ಆದರೆ ಮೊದಲ ದಿನವೇ ಈ ಚಿತ್ರವನ್ನು ನೋಡಲು ತೆಲುಗು ಮಂದಿ ಆಸಕ್ತಿ ತೋರಿಸಿಲ್ಲ. ಸರಿಯಾದ ರೀತಿಯಲ್ಲಿ ಪ್ರಚಾರ ಮಾಡದೇ ಇರುವುದೇ ಈ ರೀತಿ ಆಗಲು ಕಾರಣ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಮೊಯಿದ್ದೀನ್​ ಭಾಯ್​ ಆಗಿ ಧರ್ಮಗಳ ನಡುವೆ ಸಾಮರಸ್ಯ ಮೂಡಿಸಲು ಬಂದ ರಜನಿಕಾಂತ್​

ಹಿನ್ನಡೆ ಆಗಲು ಇನ್ನೊಂದು ಕಾರಣ ಏನೆಂದರೆ, ಈ ಸಿನಿಮಾದಲ್ಲಿ ರಜನಿಕಾಂತ್​ ಅವರದ್ದು ಮುಖ್ಯಪಾತ್ರ ಅಲ್ಲ. ಒಂದು ಅತಿಥಿ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಮೊಯಿದ್ದೀನ್​ ಭಾಯ್​ ಎಂಬ ಪಾತ್ರಕ್ಕೆ ಅವರು ಬಣ್ಣ ಹಚ್ಚಿದ್ದಾರೆ. ಟ್ರೇಲರ್​ನಲ್ಲಿ ಆ ಪಾತ್ರ ಹೈಲೈಟ್​ ಆಗಿದೆ. ಅವರ ಗೆಟಪ್​ ನೋಡಿ ಅಭಿಮಾನಿಗಳಿಗೆ ಕೌತುಕ ಮೂಡಿದೆ. ಅತಿಥಿ ಪಾತ್ರವಾದರೂ ಕೂಡ ಹೆಚ್ಚಿನ ಸ್ಕ್ರೀನ್​ ಸ್ಪೇಸ್​ ನೀಡಲಾಗಿದೆ. ಹಾಗಿದ್ದರೂ ಕೂಡ ಮೊದಲ ದಿನ ಹೆಚ್ಚಿನ ಜನರನ್ನು ಚಿತ್ರಮಂದಿರದತ್ತ ಸೆಳೆದುಕೊಳ್ಳಲು ಈ ಸಿನಿಮಾ ವಿಫಲವಾಗಿದೆ. ರಜನಿಕಾಂತ್​ ಜೊತೆ ವಿಷ್ಣು ವಿಶಾಲ್​, ವಿಕ್ರಾಂತ್​ ಮುಂತಾದವರು ‘ಲಾಲ್​ ಸಲಾಂ’ ಚಿತ್ರದಲ್ಲಿ ನಟಿಸಿದ್ದಾರೆ. ಮಾಜಿ ಕ್ರಿಕೆಟರ್​ ಕಪಿಲ್​ ದೇವ್​ ಕೂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕ್ರಿಕೆಟ್​ ಹಿನ್ನೆಲೆಯಲ್ಲಿ ಈ ಸಿನಿಮಾದ ಕಥೆ ಸಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ