AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾರ್ಟಿನ್’ ಜೊತೆ ಕ್ಲ್ಯಾಶ್ ಮಾಡಿಕೊಂಡ ‘ವೆಟ್ಟೈಯನ್’ ಸಿನಿಮಾ; ರಿಲೀಸ್ ದಿನಾಂಕ ರಿವೀಲ್

‘ವೆಟ್ಟೈಯನ್’ ಸಿನಿಮಾ ಟಿಜಿ ಜ್ಞಾನವೇಲ್ ಅವರು ನಿರ್ದೇಶನ ಮಾಡಿದ್ದಾರೆ. ರಜನಿಕಾಂತ್ ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದರು. ಈ ಸಿನಿಮಾದ ರಿಲೀಸ್ ದಿನಾಂಕ ರಿವೀಲ್ ಆಗಿದೆ. ಅಕ್ಟೋಬರ್ 10ರಂದು ಸಿನಿಮಾ ಬಿಡುಗಡೆ ಆಗಲಿದೆ.

‘ಮಾರ್ಟಿನ್’ ಜೊತೆ ಕ್ಲ್ಯಾಶ್ ಮಾಡಿಕೊಂಡ ‘ವೆಟ್ಟೈಯನ್’ ಸಿನಿಮಾ; ರಿಲೀಸ್ ದಿನಾಂಕ ರಿವೀಲ್
ರಜನಿ-ಮಾರ್ಟಿನ್
ರಾಜೇಶ್ ದುಗ್ಗುಮನೆ
|

Updated on: Aug 19, 2024 | 2:50 PM

Share

ರಜನಿಕಾಂತ್ ನಟನೆಯ ‘ವೆಟ್ಟೈಯನ್’ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ರಿಲೀಸ್ ದಿನಾಂಕದ ಬಗ್ಗೆ ಫ್ಯಾನ್ಸ್​ಗೆ ಕುತೂಹಲ ಇತ್ತು. ಈಗ ಈ ಬಗ್ಗೆ ಅಪ್​ಡೇಟ್ ಸಿಕ್ಕಿದೆ. ಅಕ್ಟೋಬರ್ 10ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ತಂಡ ಮಾಹಿತಿ ನೀಡಿದೆ. ಈ ಮೂಲಕ ಕನ್ನಡದ ‘ಮಾರ್ಟಿನ್’ ಹಾಗೂ ತಮಿಳಿನ ‘ಕಂಗುವ’ ಜೊತೆ ಈ ಸಿನಿಮಾ ಸ್ಪರ್ಧೆಗೆ ಇಳಿಯುತ್ತಿದೆ.

ಅಕ್ಟೋಬರ್ 3ರಿಂದ ಅಕ್ಟೋಬರ್ 12ರವರೆಗೆ ನವರಾತ್ರಿ ಇದೆ. ಈ ಹಬ್ಬದ ಪ್ರಯುಕ್ತ ಹಲವು ಸಿನಿಮಾಗಳು ರಿಲೀಸ್ ಆಗುತ್ತಿವೆ. ‘ವೆಟ್ಟೈಯನ್’ ಸಿನಿಮಾ ಕೂಡ ಇದೇ ಸಂದರ್ಭದಲ್ಲಿ ಬಿಡುಗಡೆ ಆಗುತ್ತಿದೆ. ‘ಟಾರ್ಗೆಟ್ ಲಾಕ್ ಆಗಿದೆ. ವೆಟ್ಟೈಯನ್ ಸಿನಿಮಾ ವಿಶ್ವಾದ್ಯಂತ ಅಕ್ಟೋಬರ್ 10ರಂದು ಬಿಡುಗಡೆ ಆಗಲಿದೆ. ಸೂಪರ್​ಸ್ಟಾರ್​ ಅವರು ಸೂಪರ್​ ಕಾಪ್ ಆಗಿ ಬರುತ್ತಿದ್ದಾರೆ. ತಮಿಳು, ಕನ್ನಡ, ತೆಲುಗು ಹಾಗೂ ಹಿಂದಿಯಲ್ಲಿ ಸಿನಿಮಾ ರಿಲೀಸ್ ಆಗಲಿದೆ’ ಎಂದು ಮಾಹಿತಿ ನೀಡಲಾಗಿದೆ. ರಜನಿಕಾಂತ್ ಅವರು ಪೊಲೀಸ್ ಡ್ರೆಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಮೊದಲು ರಜನಿಕಾಂತ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದರು. ‘ನಾನು ವೆಟ್ಟೈಯನ್ ಸಿನಿಮಾದ ಡಬ್ಬಿಂಗ್ ಪೂರ್ಣಗೊಳಿಸಿದ್ದೇನೆ. ದಸರಾದಂದು ಸಿನಿಮಾ ರಿಲೀಸ್ ಆಗಲಿದೆ’ ಎಂದು ರಜನಿಕಾಂತ್ ಹೇಳಿಕೊಂಡಿದ್ದರು. ಅಂತೆಯೇ ಈಗ ಅಕ್ಟೋಬರ್ 10ರಂದು ಸಿನಿಮಾ ಬಿಡುಗಡೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಚೆನ್ನಾಗಿ ಕುಡಿದು ಕಮಲ್ ಹಾಸನ್​ಗೆ ಕಾಲ್ ಮಾಡಿದ್ದ ರಜನಿಕಾಂತ್ ಹೇಳಿದ್ದೇನು?

‘ವೆಟ್ಟೈಯನ್’ ಸಿನಿಮಾ ಟಿಜಿ ಜ್ಞಾನವೇಲ್ ಅವರು ನಿರ್ದೇಶನ ಮಾಡಿದ್ದಾರೆ. ರಜನಿಕಾಂತ್ ಜೊತೆ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಲೈಕಾ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾನ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ