AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾರ್ಟಿನ್’ ಜೊತೆ ಕ್ಲ್ಯಾಶ್ ಮಾಡಿಕೊಂಡ ‘ವೆಟ್ಟೈಯನ್’ ಸಿನಿಮಾ; ರಿಲೀಸ್ ದಿನಾಂಕ ರಿವೀಲ್

‘ವೆಟ್ಟೈಯನ್’ ಸಿನಿಮಾ ಟಿಜಿ ಜ್ಞಾನವೇಲ್ ಅವರು ನಿರ್ದೇಶನ ಮಾಡಿದ್ದಾರೆ. ರಜನಿಕಾಂತ್ ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದರು. ಈ ಸಿನಿಮಾದ ರಿಲೀಸ್ ದಿನಾಂಕ ರಿವೀಲ್ ಆಗಿದೆ. ಅಕ್ಟೋಬರ್ 10ರಂದು ಸಿನಿಮಾ ಬಿಡುಗಡೆ ಆಗಲಿದೆ.

‘ಮಾರ್ಟಿನ್’ ಜೊತೆ ಕ್ಲ್ಯಾಶ್ ಮಾಡಿಕೊಂಡ ‘ವೆಟ್ಟೈಯನ್’ ಸಿನಿಮಾ; ರಿಲೀಸ್ ದಿನಾಂಕ ರಿವೀಲ್
ರಜನಿ-ಮಾರ್ಟಿನ್
ರಾಜೇಶ್ ದುಗ್ಗುಮನೆ
|

Updated on: Aug 19, 2024 | 2:50 PM

Share

ರಜನಿಕಾಂತ್ ನಟನೆಯ ‘ವೆಟ್ಟೈಯನ್’ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ರಿಲೀಸ್ ದಿನಾಂಕದ ಬಗ್ಗೆ ಫ್ಯಾನ್ಸ್​ಗೆ ಕುತೂಹಲ ಇತ್ತು. ಈಗ ಈ ಬಗ್ಗೆ ಅಪ್​ಡೇಟ್ ಸಿಕ್ಕಿದೆ. ಅಕ್ಟೋಬರ್ 10ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ತಂಡ ಮಾಹಿತಿ ನೀಡಿದೆ. ಈ ಮೂಲಕ ಕನ್ನಡದ ‘ಮಾರ್ಟಿನ್’ ಹಾಗೂ ತಮಿಳಿನ ‘ಕಂಗುವ’ ಜೊತೆ ಈ ಸಿನಿಮಾ ಸ್ಪರ್ಧೆಗೆ ಇಳಿಯುತ್ತಿದೆ.

ಅಕ್ಟೋಬರ್ 3ರಿಂದ ಅಕ್ಟೋಬರ್ 12ರವರೆಗೆ ನವರಾತ್ರಿ ಇದೆ. ಈ ಹಬ್ಬದ ಪ್ರಯುಕ್ತ ಹಲವು ಸಿನಿಮಾಗಳು ರಿಲೀಸ್ ಆಗುತ್ತಿವೆ. ‘ವೆಟ್ಟೈಯನ್’ ಸಿನಿಮಾ ಕೂಡ ಇದೇ ಸಂದರ್ಭದಲ್ಲಿ ಬಿಡುಗಡೆ ಆಗುತ್ತಿದೆ. ‘ಟಾರ್ಗೆಟ್ ಲಾಕ್ ಆಗಿದೆ. ವೆಟ್ಟೈಯನ್ ಸಿನಿಮಾ ವಿಶ್ವಾದ್ಯಂತ ಅಕ್ಟೋಬರ್ 10ರಂದು ಬಿಡುಗಡೆ ಆಗಲಿದೆ. ಸೂಪರ್​ಸ್ಟಾರ್​ ಅವರು ಸೂಪರ್​ ಕಾಪ್ ಆಗಿ ಬರುತ್ತಿದ್ದಾರೆ. ತಮಿಳು, ಕನ್ನಡ, ತೆಲುಗು ಹಾಗೂ ಹಿಂದಿಯಲ್ಲಿ ಸಿನಿಮಾ ರಿಲೀಸ್ ಆಗಲಿದೆ’ ಎಂದು ಮಾಹಿತಿ ನೀಡಲಾಗಿದೆ. ರಜನಿಕಾಂತ್ ಅವರು ಪೊಲೀಸ್ ಡ್ರೆಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಮೊದಲು ರಜನಿಕಾಂತ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದರು. ‘ನಾನು ವೆಟ್ಟೈಯನ್ ಸಿನಿಮಾದ ಡಬ್ಬಿಂಗ್ ಪೂರ್ಣಗೊಳಿಸಿದ್ದೇನೆ. ದಸರಾದಂದು ಸಿನಿಮಾ ರಿಲೀಸ್ ಆಗಲಿದೆ’ ಎಂದು ರಜನಿಕಾಂತ್ ಹೇಳಿಕೊಂಡಿದ್ದರು. ಅಂತೆಯೇ ಈಗ ಅಕ್ಟೋಬರ್ 10ರಂದು ಸಿನಿಮಾ ಬಿಡುಗಡೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಚೆನ್ನಾಗಿ ಕುಡಿದು ಕಮಲ್ ಹಾಸನ್​ಗೆ ಕಾಲ್ ಮಾಡಿದ್ದ ರಜನಿಕಾಂತ್ ಹೇಳಿದ್ದೇನು?

‘ವೆಟ್ಟೈಯನ್’ ಸಿನಿಮಾ ಟಿಜಿ ಜ್ಞಾನವೇಲ್ ಅವರು ನಿರ್ದೇಶನ ಮಾಡಿದ್ದಾರೆ. ರಜನಿಕಾಂತ್ ಜೊತೆ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಲೈಕಾ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾನ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ
ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ
ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ
ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ದೇವಸ್ಥಾನದ ಬಗ್ಗೆ ಹೇಳಿದ ಶೈನ್
ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ದೇವಸ್ಥಾನದ ಬಗ್ಗೆ ಹೇಳಿದ ಶೈನ್