AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ಬಾಕ್ಸಾಫೀಸ್​ನಲ್ಲಿ ದಾಖಲೆ ಬರೆದ ಅಣ್ಣಾಥೆ; ರಜಿನಿ ನಟನೆಯ ಚಿತ್ರ ಇದುವರೆಗೆ ಗಳಿಸಿದ್ದೆಷ್ಟು?

Annatthe Box Office collection: ರಜಿನಿಕಾಂತ್ ನಟನೆಯ ‘ಅಣ್ಣಾಥೆ’ ಚಿತ್ರ ಬಾಕ್ಸಾಫೀಸ್​​ನಲ್ಲಿ ಹಲವು ದಾಖಲೆಗಳನ್ನು ಬರೆದಿದೆ. ಚಿತ್ರದ ಇದುವರೆಗಿನ ಕಲೆಕ್ಷನ್ ರಿಪೋರ್ಟ್ ಇಲ್ಲಿದೆ.

Rajinikanth: ಬಾಕ್ಸಾಫೀಸ್​ನಲ್ಲಿ ದಾಖಲೆ ಬರೆದ ಅಣ್ಣಾಥೆ; ರಜಿನಿ ನಟನೆಯ ಚಿತ್ರ ಇದುವರೆಗೆ ಗಳಿಸಿದ್ದೆಷ್ಟು?
ರಜಿನಿಕಾಂತ್
TV9 Web
| Edited By: |

Updated on: Nov 12, 2021 | 1:44 PM

Share

ರಜಿನಿಕಾಂತ್ ಅಭಿನಯದ ‘ಅಣ್ಣಾಥೆ’ ಚಿತ್ರ ಬಾಕ್ಸಾಫೀಸ್​ನಲ್ಲಿ ಹಲವು ದಾಖಲೆಗಳನ್ನು ಬರೆದಿದೆ. ಕೊವಿಡ್, ಚೆನ್ನೈನಲ್ಲಿ ಮಳೆ ಮೊದಲಾದ ಕಾರಣದಿಂದ ಒಟ್ಟಾರೆ ಗಳಿಕೆಗೆ ಹೊಡೆತ ಬಿದ್ದಿದ್ದರೂ ಕೂಡ, ಚಿತ್ರ ₹ 200 ಕೋಟಿ ಕ್ಲಬ್​ಅನ್ನು ಈಗಾಗಲೇ ದಾಟಿದೆ. ಈ ಮೂಲಕ ರಜಿನಿಕಾಂತ್ ಬಾಕ್ಸಾಫೀಸ್ ಕಿಂಗ್ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. 2021ರಲ್ಲಿ ಅತ್ಯಂತ ವೇಗವಾಗಿ ₹ 200 ಕೋಟಿ ಕ್ಲಬ್​ಗೆ ಸೇರಿದ ಚಿತ್ರ ಎಂಬ ದಾಖಲೆ ‘ಅಣ್ಣಾಥೆ’ ಪಾಲಾಗಿದೆ. ಇದಲ್ಲದೇ ₹ 200 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ ಚಿತ್ರಗಳ ಪೈಕಿ ರಜಿನಿಯ ಚಿತ್ರಗಳೇ ಹೆಚ್ಚಿವೆ ಎಂಬುದು ರಜಿನಿಕಾಂತ್ ಹೊಂದಿರುವ ಹೊಸ ದಾಖಲೆ. ಚಿತ್ರ ಅಂದಾಜು ₹ 210 ಕೋಟಿಗೂ ಅಧಿಕ ಹಣವನ್ನು ಬಾಕ್ಸಾಫೀಸ್​ನಲ್ಲಿ ಗಳಿಸಿದ್ದು, ಚಿತ್ರ ₹ 250 ಕೋಟಿ ಕ್ಲಬ್​ಗೆ ಸೇರುವ ಸಾಧ್ಯತೆ ಇದೆ ಎಂದು ಬಾಕ್ಸಾಫೀಸ್ ಪರಿಣತರು ವಿಶ್ಲೇಷಿಸಿದ್ದಾರೆ.

‘ಅಣ್ಣಾಥೆ’ ಚಿತ್ರ ವಿಶ್ವಾದ್ಯಂತ ಸುಮಾರು 2200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ತಮಿಳುನಾಡು ಒಂದರಲ್ಲೇ 800ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಜನಿ ಚಿತ್ರ ತೆರೆಗೆ ಬಂದಿದೆ. ವಿಶ್ವ ಮಟ್ಟದಲ್ಲಿ ಈ ಸಿನಿಮಾ ಮೊದಲ ದಿನ 70 ಕೋಟಿ ಗಳಿಕೆ ಮಾಡಿತ್ತು. ನವೆಂಬರ್​​ 5ರಂದು ಸಿನಿಮಾ 42.6 ಕೋಟಿ ರೂಪಾಯಿ, ನವೆಂಬರ್​ 6ರಂದು ಚಿತ್ರ 33.71 ಕೋಟಿ ಗಳಿಸಿತ್ತು. ಇದೀಗ ಮೊದಲ ವಾರಾಂತ್ಯಕ್ಕೆ ಚಿತ್ರ ಒಟ್ಟಾರೆ ₹ 202.47 ಕೋಟಿ ಗಳಿಕೆ ಮಾಡಿದೆ.

ಎರಡನೇ ವಾರದ ಮೊದಲ ದಿನದಲ್ಲಿ ಚಿತ್ರವು ಜಗತ್ತಿನಾದ್ಯಂತ ₹ 4.05 ಕೋಟಿ ಗಳಿಸಿದ್ದು, ಇದುವರೆಗೆ ಒಟ್ಟು ₹ 206.52 ಕೋಟಿ ಬಾಚಿಕೊಂಡಿದೆ. ತಮಿಳುನಾಡಿನ ಲೆಕ್ಕಾಚಾರವನ್ನು ಮಾತ್ರ ಪರಿಗಣಿಸಿದರೆ, ಅಲ್ಲಿ ಚಿತ್ರವು, ಒಟ್ಟು ₹ 122.80 ಕೋಟಿ ಗಳಿಸಿದೆ. ಈ ಮೂಲಕ ರಜಿನಿ ಚಿತ್ರ ದಾಖಲೆ ಬರೆದಿದೆ.

‘ಅಣ್ಣಾಥೆ’ ಚಿತ್ರದ ಬಾಕ್ಸಾಫೀಸ್ ಲೆಕ್ಕಾಚಾರ ಇಲ್ಲಿದೆ:

‘ಅಣ್ಣಾಥೆ’ ಸಿನಿಮಾವನ್ನು ಸನ್​ ಪಿಕ್ಚರ್ಸ್​ ನಿರ್ಮಾಣ ಮಾಡಿದೆ. ರಜನಿಕಾಂತ್​, ಕೀರ್ತಿ ಸುರೇಶ್​, ನಯನತಾರಾ, ಮೀನಾ, ಖುಷ್ಬು, ಪ್ರಕಾಶ್ ರಾಜ್, ಜಗಪತಿ ಬಾಬು ಮೊದಲಾದವರು ಪಾತ್ರವರ್ಗದಲ್ಲಿದ್ದಾರೆ. ದೀಪಾವಳಿ ನಿಮಿತ್ತ ಈ ಸಿನಿಮಾ ನವೆಂಬರ್​ 4ರಂದು ತೆರೆಗೆ ಬಂದಿತ್ತು. ಚಿತ್ರಕ್ಕೆ ಎಲ್ಲ ಕಡೆಗಳಿಂದ ಒಳ್ಳೆಯ ಪ್ರತಿಕ್ರಿಯೆ ಲಭ್ಯವಾಗಿದೆ.

ಇದನ್ನೂ ಓದಿ:

ಮಂಕಾಗಿದ್ದ ಚಿತ್ರಮಂದಿರಗಳ ವಹಿವಾಟಿಗೆ ಮರುಜೀವ ನೀಡಿದ ಅಣ್ಣಾಥೆ, ಸೂರ್ಯವಂಶಿ, ಎಟರ್ನಲ್ಸ್​

1947ರಲ್ಲಿ ಭಾರತಕ್ಕೆ ಲಭಿಸಿದ್ದು ಸ್ವಾತಂತ್ರ್ಯವಲ್ಲ, ಭಿಕ್ಷೆ ಎಂದ ಕಂಗನಾ ವಿರುದ್ಧ ತಿರುಗಿಬಿದ್ದ ಬಿಜೆಪಿ; ಪದ್ಮ ಪ್ರಶಸ್ತಿ ಹಿಂಪಡೆಯಲು ಆಗ್ರಹಿಸಿದ ಕಾಂಗ್ರೆಸ್

Follow Us
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್