AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Annatthe: ಅದ್ದೂರಿಯಾಗಿ ಬಿಡುಗಡೆಯಾದ ಅಣ್ಣಾತೆ; ರಜಿನಿ ಫ್ಯಾನ್ಸ್​​ಗೆ ಡಬಲ್ ಸಂಭ್ರಮ

Rajinikanth: ಇಂದು ರಜಿನಿಕಾಂತ್ ನಟನೆಯ ಬಹುನಿರೀಕ್ಷಿತ ‘ಅಣ್ಣಾತೆ’ ಚಿತ್ರ ಬಿಡುಗಡೆಯಾಗಿದೆ. ಬರೋಬ್ಬರಿ 19 ತಿಂಗಳ ನಂತರ ರಜಿನಿ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದು, ಫ್ಯಾನ್ಸ್ ಮುಖದಲ್ಲಿ ಸಂಭ್ರಮ ಮನೆಮಾಡಿದೆ.

Annatthe: ಅದ್ದೂರಿಯಾಗಿ ಬಿಡುಗಡೆಯಾದ ಅಣ್ಣಾತೆ; ರಜಿನಿ ಫ್ಯಾನ್ಸ್​​ಗೆ ಡಬಲ್ ಸಂಭ್ರಮ
ರಜಿನಿಕಾಂತ್
TV9 Web
| Edited By: |

Updated on:Nov 04, 2021 | 9:59 AM

Share

ದೀಪಾವಳಿ ಹಬ್ಬ ರಜಿನಿ ಫ್ಯಾನ್ಸ್​​ಗೆ ಡಬಲ್ ಸಂಭ್ರಮ. ಕಾರಣ, ರಜಿನಿಯ ಬಹುನಿರೀಕ್ಷಿತ ಚಿತ್ರ ‘ಅಣ್ಣಾತೆ’ ಇಂದು ಎಲ್ಲೆಡೆ ಗ್ರ್ಯಾಂಡ್ ರಿಲೀಸ್ ಆಗುತ್ತಿದೆ. ಇದು ಫ್ಯಾನ್ಸ್​​ಗೆ ದೀಪಾವಳಿಯ ಸಂಭ್ರಮದ ಜೊತೆಗೆ, ರಜಿನಿ ಹಬ್ಬದ ಸಂಭ್ರಮವನ್ನೂ ತಂದಿದೆ. ಅಭಿಮಾನಿಗಳು ಚಿತ್ರಮಂದಿರದ ಸುತ್ತ ಅಕ್ಷರಶಃ ಹಬ್ಬದ ವಾತಾವರಣವನ್ನೇ ಸೃಷ್ಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಎಲ್ಲಾ ಕಡೆ ಬೆಳಗ್ಗೆ 8 ಗಂಟೆಯಿಂದಲೇ ಪ್ರದರ್ಶನ ಪ್ರಾರಂಭವಾಗಿದ್ದು, ಎಲ್ಲಾ ಚಿತ್ರಮಂದಿರದಲ್ಲೂ ಮಾರ್ನಿಂಗ್ ಶೋ ಟಿಕೇಟ್ಸ್ ಸೋಲ್ಡ್ ಔಟ್ ಆಗಿದೆ. ಪ್ರಪಂಚದಾದ್ಯಂತ 1200ಕ್ಕೂ ಅಧಿಕ ಸ್ಕ್ರೀನ್ ನಲ್ಲಿ ಅಣ್ಣಾತೆ ರಿಲೀಸ್ ಆಗಿದ್ದು, ವಿಂಟೇಜ್ ರಜಿನಿಯ ದರ್ಶನಕ್ಕೆ ಅಭಿಮಾನಿಗಳು ಕಾದಿದ್ದಾರೆ. ರಜಿನಿಯ ಈ ಹಿಂದಿನ ‘ಮುತ್ತು’, ‘ಪಡಿಯಪ್ಪ’, ‘ಅರುಣಾಚಲಂ’ ಮೊದಲಾದ ಚಿತ್ರಗಳಂತೆ ‘ಅಣ್ಣಾತೆ’ ಮೂಡಿಬಂದಿರುವುದರಿಂದ ನಿರೀಕ್ಷೆ ಇಮ್ಮಡಿಯಾಗಿದೆ.

ರಜಿನಿಯ ಈ ಹಿಂದಿನ ಚಿತ್ರ ‘ದರ್ಬಾರ್’ ಬಿಡುಗಡೆಯಾಗಿದ್ದು ಒಂದೂವರೆ ವರ್ಷದ ಹಿಂದೆ. ಬರೋಬ್ಬರಿ 19 ತಿಂಗಳುಗಳ ನಂತರ ‘ಅಣ್ಣಾತೆ’ಯ ಮುಖಾಂತರ ರಜಿನಿ ಕಮ್​ಬ್ಯಾಕ್ ಮಾಡಿದ್ದು, ಫ್ಯಾನ್ಸ್​​ಗೆ ಸಂತಸ ತಂದಿದೆ. ಅಣ್ಣಾತೆ ಚಿತ್ರದಲ್ಲಿ ಕೀರ್ತಿಸುರೇಶ್ , ನಯನತಾರ, ಪ್ರಕಾಶ್ ರೈ, ಜಗಪತಿಬಾಬು, ಖುಷ್ಬೂ, ಮೀನಾ ಮೊದಲಾದ ಖ್ಯಾತ ತಾರೆಯರು ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ಶಿವ ಆಕ್ಷನ್ ಕಟ್ ಹೇಳಿದ್ದು, ಸನ್ ಪಿಕ್ಚರ್ಸ್ ನಿರ್ಮಿಸಿದೆ.

ಚೆನ್ನೈನಲ್ಲಿ ಅಣ್ಣಾತೆ ಚಿತ್ರದ ಬಿಡುಗಡೆಯ ಸಂಭ್ರಮ:

ಮುಂಬೈನಲ್ಲಿ ಅಣ್ಣಾತೆ ಬಿಡುಗಡೆ ಸಂಭ್ರಮ:

ಬಾಲಾಜಿ ಚಿತ್ರಮಂದಿರಕ್ಕೆ ಭೇಟಿ ನೀಡಿದ ರಜಿನಿ ಸ್ನೇಹಿತ ರಾಜ್ ಬಹದ್ದೂರ್ ನಗರದ ಶ್ರೀ ಬಾಲಾಜಿ ಥಿಯೇಟರ್ ಗೆ ರಜಿನಿಕಾಂತ್ ಸ್ನೇಹಿತ ರಾಜ್ ಬಹದ್ದೂರ್ ಇಂದು ಭೇಟಿ ನೀಡಿದ್ದಾರೆ. ಅವರು ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಿದ್ದು, ನಂತರ ಸಿನಿಮಾ ನೋಡಲು ಬಂದ ಪ್ರೇಕ್ಷಕರಿಗೆ ಅಪ್ಪು ಗಿಡವನ್ನ ವಿತರಿಸಿದ್ದಾರೆ. ಕರ್ನಾಟಕ ರಾಜ್ಯ ರಜಿನಿಕಾಂತ್ ಫ್ಯಾನ್ಸ್ ಅಸೋಸಿಯೇಷನ್ ಅವರಿಂದ ಸಸಿ ವಿತರಣೆ ಮಾಡಲಾಗುತ್ತಿದೆ.

‘ಅಣ್ಣಾತೆ’ ಚಿತ್ರದ ಬಿಡುಗಡೆ ಸಂಭ್ರಮದ ಲೈವ್ ಇಲ್ಲಿ ಲಭ್ಯವಿದೆ: ಇದನ್ನೂ ಓದಿ:

Viral Video: ಮನಿಕೆ ಮಗೆ ಹಿತೆ ಹಾಡಲು ಪ್ರಯತ್ನಿಸಿದ ವ್ಯಕ್ತಿ! ವಿಡಿಯೊ ಮಜವಾಗಿದೆ ನೀವೇ ನೋಡಿ

‘ಆ ದಿನ ಪುನೀತ್ ಡಲ್ ಆಗಿದ್ದರು’; ಅಪ್ಪು ಸಾವಿನ ನಂತರ ಅಚ್ಚರಿಯ ವಿಚಾರ ಬಿಚ್ಚಿಟ್ಟ ಶಿವರಾಜ್​ಕುಮಾರ್​

Published On - 9:55 am, Thu, 4 November 21

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ