AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೆಟ್ಟೈಯಾನ್’ ರಿಲೀಸ್ ಸಂದರ್ಭದಲ್ಲೇ ರಜನಿಕಾಂತ್​​ಗೆ ತೀವ್ರ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ನಟ ರಜನಿಕಾಂತ್ ಅವರು ‘ವೆಟ್ಟೈಯನ್’ ಸಿನಿಮಾದ ರಿಲೀಸ್​ಗೆ ಕಾದಿದ್ದಾರೆ. ಈ ಚಿತ್ರ ಅಕ್ಟೋಬರ್ 10ರಂದು ಬಿಡುಗಡೆ ಆಗುತ್ತಿದೆ. ರಜನಿಕಾಂತ್ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ರಿಲೀಸ್ ಸಂದರ್ಭದಲ್ಲಿ ರಜನಿಕಾಂತ್​ಗೆ ಅನಾರೋಗ್ಯ ಆಗಿದೆ.

‘ವೆಟ್ಟೈಯಾನ್’ ರಿಲೀಸ್ ಸಂದರ್ಭದಲ್ಲೇ ರಜನಿಕಾಂತ್​​ಗೆ ತೀವ್ರ ಅನಾರೋಗ್ಯ; ಆಸ್ಪತ್ರೆಗೆ ದಾಖಲು
ರಜಿನಿಕಾಂತ್
ರಾಜೇಶ್ ದುಗ್ಗುಮನೆ
|

Updated on: Oct 01, 2024 | 8:06 AM

Share

ಕಾಲಿವುಡ್ ನಟ ರಜನಿಕಾಂತ್ ಅವರಿಗೆ ಈಗ 73 ವರ್ಷ. ವಯಸ್ಸು ಆದಂತೆ ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಹೆಚ್ಚುತ್ತಿದೆ. ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಆತಂಕಗೊಂಡಿದ್ದಾರೆ. ಅವರ ನಟನೆಯ ‘ವೆಟ್ಟೈಯಾನ್’ ಸಿನಿಮಾ ರಿಲೀಸ್ ಸಂದರ್ಭದಲ್ಲೇ ಈ ರೀತಿ ಆಗಿದೆ.

ರಜನಿಕಾಂತ್ ಅವರಿಗೆ ಸೆಪ್ಟೆಂಬರ್ 30ರ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಕಾರಣದಿಂದ ಅವರನ್ನು ತಕ್ಷಣವೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಈ ವೇಳೆ ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗಿದೆ. ಹೃದಯರೋಗ ತಜ್ಞ ಸಾಯಿ ಸತೀಶ್ ಅವರು ರಜನಿ ಅವರನ್ನು ಪರೀಕ್ಷೆ ಮಾಡಿದ್ದಾರೆ. ಈಗ ರಜನಿಕಾಂತ್ ಆರೋಗ್ಯ ಸುಸ್ಥಿರವಾಗಿದೆ.

ಇಂದು (ಅಕ್ಟೋಬರ್ 1) ಅಪೋಲೋ ಆಸ್ಪತ್ರೆಯಲ್ಲಿ ರಜನಿಕಾಂತ್ ಅವರ ಹೃದಯದ ಪರೀಕ್ಷೆ ನಡೆಯಲಿದೆ. ಈ ವೇಳೆ ಕೆಲವು ಚಿಕಿತ್ಸೆಗಳನ್ನು ರಜನಿಕಾಂತ್​ಗೆ ನೀಡಲಾಗುತ್ತಿದೆ ಎನ್ನಲಾಗಿದೆ. ಸದ್ಯ ರಜನಿಕಾಂತ್ ಫ್ಯಾನ್ಸ್ ಸಾಕಷ್ಟು ಆತಂಕಗೊಂಡಿದ್ದಾರೆ. ಅವರ ಕಡೆಯಿಂದ ಆರೋಗ್ಯದ ಬಗ್ಗೆ ಅಪ್​ಡೇಟ್ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ‘ನೆಲದ ಮೇಲೆ ಮಲಗುತ್ತಿದ್ದರು’: ರಜನಿಕಾಂತ್ ಸರಳತೆಯ ಕೊಂಡಾಡಿದ ಬಿಗ್​-ಬಿ

ಈ ಮೊದಲು ಕೂಡ ರಜನಿಕಾಂತ್ ಅವರು ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಈ ರೀತಿ ಪದೇ ಪದೇ ಆಸ್ಪತ್ರೆಗೆ ದಾಖಲಾಗುತ್ತಿರುವುದರಿಂದ ಆತಂಕ ಹೆಚ್ಚಿದೆ. ಆದಾಗ್ಯೂ ಅವರು ಸಿನಿಮಾ ಕೃಷಿಯನ್ನು ನಿಲ್ಲಿಸಿಲ್ಲ ಅನ್ನೋದು ವಿಶೇಷ.

ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಅಕ್ಟೋಬರ್ 10ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ. ರಜನಿಕಾಂತ್ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ರಿಲೀಸ್ ಸಂದರ್ಭದಲ್ಲಿ ಈ ರೀತಿ ಆಗಿರುವುದು ಸಹಜವಾಗಿಯೇ ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್