‘ವೆಟ್ಟೈಯಾನ್’ ರಿಲೀಸ್ ಸಂದರ್ಭದಲ್ಲೇ ರಜನಿಕಾಂತ್​​ಗೆ ತೀವ್ರ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ನಟ ರಜನಿಕಾಂತ್ ಅವರು ‘ವೆಟ್ಟೈಯನ್’ ಸಿನಿಮಾದ ರಿಲೀಸ್​ಗೆ ಕಾದಿದ್ದಾರೆ. ಈ ಚಿತ್ರ ಅಕ್ಟೋಬರ್ 10ರಂದು ಬಿಡುಗಡೆ ಆಗುತ್ತಿದೆ. ರಜನಿಕಾಂತ್ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ರಿಲೀಸ್ ಸಂದರ್ಭದಲ್ಲಿ ರಜನಿಕಾಂತ್​ಗೆ ಅನಾರೋಗ್ಯ ಆಗಿದೆ.

‘ವೆಟ್ಟೈಯಾನ್’ ರಿಲೀಸ್ ಸಂದರ್ಭದಲ್ಲೇ ರಜನಿಕಾಂತ್​​ಗೆ ತೀವ್ರ ಅನಾರೋಗ್ಯ; ಆಸ್ಪತ್ರೆಗೆ ದಾಖಲು
ರಜಿನಿಕಾಂತ್
Follow us
|

Updated on: Oct 01, 2024 | 8:06 AM

ಕಾಲಿವುಡ್ ನಟ ರಜನಿಕಾಂತ್ ಅವರಿಗೆ ಈಗ 73 ವರ್ಷ. ವಯಸ್ಸು ಆದಂತೆ ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಹೆಚ್ಚುತ್ತಿದೆ. ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಆತಂಕಗೊಂಡಿದ್ದಾರೆ. ಅವರ ನಟನೆಯ ‘ವೆಟ್ಟೈಯಾನ್’ ಸಿನಿಮಾ ರಿಲೀಸ್ ಸಂದರ್ಭದಲ್ಲೇ ಈ ರೀತಿ ಆಗಿದೆ.

ರಜನಿಕಾಂತ್ ಅವರಿಗೆ ಸೆಪ್ಟೆಂಬರ್ 30ರ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಕಾರಣದಿಂದ ಅವರನ್ನು ತಕ್ಷಣವೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಈ ವೇಳೆ ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗಿದೆ. ಹೃದಯರೋಗ ತಜ್ಞ ಸಾಯಿ ಸತೀಶ್ ಅವರು ರಜನಿ ಅವರನ್ನು ಪರೀಕ್ಷೆ ಮಾಡಿದ್ದಾರೆ. ಈಗ ರಜನಿಕಾಂತ್ ಆರೋಗ್ಯ ಸುಸ್ಥಿರವಾಗಿದೆ.

ಇಂದು (ಅಕ್ಟೋಬರ್ 1) ಅಪೋಲೋ ಆಸ್ಪತ್ರೆಯಲ್ಲಿ ರಜನಿಕಾಂತ್ ಅವರ ಹೃದಯದ ಪರೀಕ್ಷೆ ನಡೆಯಲಿದೆ. ಈ ವೇಳೆ ಕೆಲವು ಚಿಕಿತ್ಸೆಗಳನ್ನು ರಜನಿಕಾಂತ್​ಗೆ ನೀಡಲಾಗುತ್ತಿದೆ ಎನ್ನಲಾಗಿದೆ. ಸದ್ಯ ರಜನಿಕಾಂತ್ ಫ್ಯಾನ್ಸ್ ಸಾಕಷ್ಟು ಆತಂಕಗೊಂಡಿದ್ದಾರೆ. ಅವರ ಕಡೆಯಿಂದ ಆರೋಗ್ಯದ ಬಗ್ಗೆ ಅಪ್​ಡೇಟ್ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ‘ನೆಲದ ಮೇಲೆ ಮಲಗುತ್ತಿದ್ದರು’: ರಜನಿಕಾಂತ್ ಸರಳತೆಯ ಕೊಂಡಾಡಿದ ಬಿಗ್​-ಬಿ

ಈ ಮೊದಲು ಕೂಡ ರಜನಿಕಾಂತ್ ಅವರು ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಈ ರೀತಿ ಪದೇ ಪದೇ ಆಸ್ಪತ್ರೆಗೆ ದಾಖಲಾಗುತ್ತಿರುವುದರಿಂದ ಆತಂಕ ಹೆಚ್ಚಿದೆ. ಆದಾಗ್ಯೂ ಅವರು ಸಿನಿಮಾ ಕೃಷಿಯನ್ನು ನಿಲ್ಲಿಸಿಲ್ಲ ಅನ್ನೋದು ವಿಶೇಷ.

ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಅಕ್ಟೋಬರ್ 10ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ. ರಜನಿಕಾಂತ್ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ರಿಲೀಸ್ ಸಂದರ್ಭದಲ್ಲಿ ಈ ರೀತಿ ಆಗಿರುವುದು ಸಹಜವಾಗಿಯೇ ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್