AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೆಟ್ಟೈಯಾನ್’ ರಿಲೀಸ್ ಸಂದರ್ಭದಲ್ಲೇ ರಜನಿಕಾಂತ್​​ಗೆ ತೀವ್ರ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ನಟ ರಜನಿಕಾಂತ್ ಅವರು ‘ವೆಟ್ಟೈಯನ್’ ಸಿನಿಮಾದ ರಿಲೀಸ್​ಗೆ ಕಾದಿದ್ದಾರೆ. ಈ ಚಿತ್ರ ಅಕ್ಟೋಬರ್ 10ರಂದು ಬಿಡುಗಡೆ ಆಗುತ್ತಿದೆ. ರಜನಿಕಾಂತ್ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ರಿಲೀಸ್ ಸಂದರ್ಭದಲ್ಲಿ ರಜನಿಕಾಂತ್​ಗೆ ಅನಾರೋಗ್ಯ ಆಗಿದೆ.

‘ವೆಟ್ಟೈಯಾನ್’ ರಿಲೀಸ್ ಸಂದರ್ಭದಲ್ಲೇ ರಜನಿಕಾಂತ್​​ಗೆ ತೀವ್ರ ಅನಾರೋಗ್ಯ; ಆಸ್ಪತ್ರೆಗೆ ದಾಖಲು
ರಜಿನಿಕಾಂತ್
ರಾಜೇಶ್ ದುಗ್ಗುಮನೆ
|

Updated on: Oct 01, 2024 | 8:06 AM

Share

ಕಾಲಿವುಡ್ ನಟ ರಜನಿಕಾಂತ್ ಅವರಿಗೆ ಈಗ 73 ವರ್ಷ. ವಯಸ್ಸು ಆದಂತೆ ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಹೆಚ್ಚುತ್ತಿದೆ. ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಆತಂಕಗೊಂಡಿದ್ದಾರೆ. ಅವರ ನಟನೆಯ ‘ವೆಟ್ಟೈಯಾನ್’ ಸಿನಿಮಾ ರಿಲೀಸ್ ಸಂದರ್ಭದಲ್ಲೇ ಈ ರೀತಿ ಆಗಿದೆ.

ರಜನಿಕಾಂತ್ ಅವರಿಗೆ ಸೆಪ್ಟೆಂಬರ್ 30ರ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಕಾರಣದಿಂದ ಅವರನ್ನು ತಕ್ಷಣವೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಈ ವೇಳೆ ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗಿದೆ. ಹೃದಯರೋಗ ತಜ್ಞ ಸಾಯಿ ಸತೀಶ್ ಅವರು ರಜನಿ ಅವರನ್ನು ಪರೀಕ್ಷೆ ಮಾಡಿದ್ದಾರೆ. ಈಗ ರಜನಿಕಾಂತ್ ಆರೋಗ್ಯ ಸುಸ್ಥಿರವಾಗಿದೆ.

ಇಂದು (ಅಕ್ಟೋಬರ್ 1) ಅಪೋಲೋ ಆಸ್ಪತ್ರೆಯಲ್ಲಿ ರಜನಿಕಾಂತ್ ಅವರ ಹೃದಯದ ಪರೀಕ್ಷೆ ನಡೆಯಲಿದೆ. ಈ ವೇಳೆ ಕೆಲವು ಚಿಕಿತ್ಸೆಗಳನ್ನು ರಜನಿಕಾಂತ್​ಗೆ ನೀಡಲಾಗುತ್ತಿದೆ ಎನ್ನಲಾಗಿದೆ. ಸದ್ಯ ರಜನಿಕಾಂತ್ ಫ್ಯಾನ್ಸ್ ಸಾಕಷ್ಟು ಆತಂಕಗೊಂಡಿದ್ದಾರೆ. ಅವರ ಕಡೆಯಿಂದ ಆರೋಗ್ಯದ ಬಗ್ಗೆ ಅಪ್​ಡೇಟ್ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ‘ನೆಲದ ಮೇಲೆ ಮಲಗುತ್ತಿದ್ದರು’: ರಜನಿಕಾಂತ್ ಸರಳತೆಯ ಕೊಂಡಾಡಿದ ಬಿಗ್​-ಬಿ

ಈ ಮೊದಲು ಕೂಡ ರಜನಿಕಾಂತ್ ಅವರು ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಈ ರೀತಿ ಪದೇ ಪದೇ ಆಸ್ಪತ್ರೆಗೆ ದಾಖಲಾಗುತ್ತಿರುವುದರಿಂದ ಆತಂಕ ಹೆಚ್ಚಿದೆ. ಆದಾಗ್ಯೂ ಅವರು ಸಿನಿಮಾ ಕೃಷಿಯನ್ನು ನಿಲ್ಲಿಸಿಲ್ಲ ಅನ್ನೋದು ವಿಶೇಷ.

ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಅಕ್ಟೋಬರ್ 10ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ. ರಜನಿಕಾಂತ್ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ರಿಲೀಸ್ ಸಂದರ್ಭದಲ್ಲಿ ಈ ರೀತಿ ಆಗಿರುವುದು ಸಹಜವಾಗಿಯೇ ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​