AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ನಿವೃತ್ತಿ ಬಗ್ಗೆ ಕೊನೆಗೂ ಮೌನ ಮುರಿದ ರಜನಿಕಾಂತ್​; ಅವರ ಕೊನೆಯ ಚಿತ್ರ ಯಾವುದು?

ರಜನಿಕಾಂತ್​ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾತು ಹಲವು ವರ್ಷಗಳಿಂದ ಪ್ರಚಲಿತದಲ್ಲಿತ್ತು. ಈ ವರ್ಷ ಅದು ಕೊನೆಗೂ ಸಂಪೂರ್ಣಗೊಳ್ಳುವುದರಲ್ಲಿತ್ತು. ಆದರೆ, ಆ ಸಮಯದಲ್ಲಿ ಅವರು ಆಸ್ಪತ್ರೆಗೆ ದಾಖಲಾದರು.

Rajinikanth: ನಿವೃತ್ತಿ ಬಗ್ಗೆ ಕೊನೆಗೂ ಮೌನ ಮುರಿದ ರಜನಿಕಾಂತ್​; ಅವರ ಕೊನೆಯ ಚಿತ್ರ ಯಾವುದು?
ರಜನೀಕಾಂತ್
ರಾಜೇಶ್ ದುಗ್ಗುಮನೆ
|

Updated on: May 27, 2021 | 5:13 PM

Share

ಐದು ದಶಕಗಳ ಕಾಲ ಚಿತ್ರರಂಗದಲ್ಲಿ ಗಣನೀಯ ಸೇವೆ ನೀಡಿದ ನಟ ರಜನಿಕಾಂತ್​ ಅವರಿಗೆ ಈಗ ಆರೋಗ್ಯ ಕೈಕೊಟ್ಟಿದೆ. ಮೊದಲಿನಷ್ಟು ಜೋಶ್​ ಈಗ ಅವರಲ್ಲಿ ಉಳಿದಿಲ್ಲ. ಕೆಲ ಆ್ಯಕ್ಷನ್​ ದೃಶ್ಯಗಳನ್ನು ಶೂಟ್​ ಮಾಡಬೇಕು ಎನ್ನುವ ಬಯಕೆ ಅವರಿಗಿದ್ದರೂ ಅದಕ್ಕೆ ಅವರ ದೇಹ ಸ್ಪಂದಿಸುವುದಿಲ್ಲ. ಈಗ ರಜನಿಕಾಂತ್​ ಚಿತ್ರರಂಗದಿಂದ ನಿವೃತ್ತಿ ಹೊಂದುವ ಬಗ್ಗೆ ಮೌನ ಮುರಿದಿದ್ದಾರೆ.

ರಜನಿಕಾಂತ್​ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾತು ಹಲವು ವರ್ಷಗಳಿಂದ ಪ್ರಚಲಿತದಲ್ಲಿತ್ತು. ಈ ವರ್ಷ ಅದು ಕೊನೆಗೂ ಸಂಪೂರ್ಣಗೊಳ್ಳುವುದರಲ್ಲಿತ್ತು. ಆದರೆ, ಆ ಸಮಯದಲ್ಲಿ ಅವರು ಆಸ್ಪತ್ರೆಗೆ ದಾಖಲಾದರು. ಈ ಮೂಲಕ ಪಕ್ಷ ಸ್ಥಾಪಿಸುವ ನಿರ್ಧಾರದಿಂದ ಹಿಂದೆ ಸರಿದರು. ಈಗ ಅವರು ಚಿತ್ರರಂಗದಿಂದಲೂ ದೂರ ಸರಿಯುತ್ತಾರೆ ಎನ್ನಲಾಗಿದೆ.

‘ಅಣ್ಣಾಥೆ’ ಸಿನಿಮಾದ ಶೂಟಿಂಗ್​ಗಾಗಿ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಒಂದು ತಿಂಗಳ ಕಾಲ ಅಲ್ಲಿಯೇ ಇದ್ದು, ಶೂಟ್​ ಪೂರ್ಣಗೊಳಿಸಿದ್ದಾರೆ. ಕುಂಬಳಕಾಯಿ ಒಡೆಯುವ ದಿನ ಅಣ್ಣಾಥೆ ತಂಡದ ಕೆಲವರ ಜತೆ ರಜನಿಕಾಂತ್​ ತುಂಬಾನೇ ಭಾವುಕರಾಗಿ ಮಾತನಾಡಿದ್ದರಂತೆ.

ಆರೋಗ್ಯ ಪದೇ ಪದೇ ಕೈಕೊಡುತ್ತಿರುವುದು ರಜನಿಕಾಂತ್​ ಆತಂಕಕ್ಕೆ ಕಾರಣವಾಗಿದೆ. ಹಾಗಂತ ಅವರಿಗೆ ಅಭಿಮಾನಿಗಳಿಗೆ ನಿರಾಸೆ ಮಾಡುವ ಉದ್ದೇಶ ಇಲ್ಲ. ಹೀಗಾಗಿ, ದೇಹ ಸ್ಪಂದಿಸಿದರೆ ಶೀಘ್ರವೇ ಒಂದೆರಡು ಚಿತ್ರಗಳ ಶೂಟಿಂಗ್​ ಮುಗಿಸುವ ಆಲೋಚನೆ ಅವರದ್ದು. ಒಂದೊಮ್ಮೆ ಆರೋಗ್ಯ ಹದಗೆಟ್ಟರೆ ‘ಅಣ್ಣಾಥೆ’ ಅವರ ಕೊನೆಯ ಚಿತ್ರವಾಗಲಿದೆ.

ಐದು ದಶಕಗಳ ಕಾಲ ಸಿನಿಮಾರಂಗದಲ್ಲಿ ಶ್ರಮಿಸಿದ ರಜನಿಕಾಂತ್​ 160ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಸಾಕಷ್ಟು ಚಿತ್ರಗಳು ಸೂಪರ್​ ಹಿಟ್​ ಆಗಿವೆ. ಈಗಲೂ ರಜನಿಕಾಂತ್​ ಫ್ಯಾನ್ಸ್​ ಬಳಗ ತುಂಬಾನೇ ದೊಡ್ಡದಿದೆ. ಹೀಗಾಗಿ, ಅವರ ಆರೋಗ್ಯ ಉತ್ತಮವಾಗಿರಲಿ ಎಂಬುದು ಅಭಿಮಾನಿಗಳ ಆಶಯ.

ಅಣ್ಣಾಥೆ ಸಿನಿಮಾಗೆ ವಿಶ್ವಾಸಮ್​ ಖ್ಯಾತಿ ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕೀರ್ತಿ ಸುರೇಶ್, ನಯನತಾರಾ, ಮೀನಾ, ಪ್ರಕಾಶ್​ ರಾಜ್​ ಮತ್ತು ಖುಷ್ಬೂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಸಿನಿಮಾ ರಿಲೀಸ್​ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಅಣ್ಣಾಥೆ ಶೂಟಿಂಗ್ ಮುಗಿದ ಬೆನ್ನಲ್ಲೇ ಕೊವಿಡ್ ಎರಡನೇ ಡೋಸ್ ಲಸಿಕೆ ಪಡೆದ ರಜನಿಕಾಂತ್

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ