AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ನಿವೃತ್ತಿ ಬಗ್ಗೆ ಕೊನೆಗೂ ಮೌನ ಮುರಿದ ರಜನಿಕಾಂತ್​; ಅವರ ಕೊನೆಯ ಚಿತ್ರ ಯಾವುದು?

ರಜನಿಕಾಂತ್​ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾತು ಹಲವು ವರ್ಷಗಳಿಂದ ಪ್ರಚಲಿತದಲ್ಲಿತ್ತು. ಈ ವರ್ಷ ಅದು ಕೊನೆಗೂ ಸಂಪೂರ್ಣಗೊಳ್ಳುವುದರಲ್ಲಿತ್ತು. ಆದರೆ, ಆ ಸಮಯದಲ್ಲಿ ಅವರು ಆಸ್ಪತ್ರೆಗೆ ದಾಖಲಾದರು.

Rajinikanth: ನಿವೃತ್ತಿ ಬಗ್ಗೆ ಕೊನೆಗೂ ಮೌನ ಮುರಿದ ರಜನಿಕಾಂತ್​; ಅವರ ಕೊನೆಯ ಚಿತ್ರ ಯಾವುದು?
ರಜನೀಕಾಂತ್
Follow us
ರಾಜೇಶ್ ದುಗ್ಗುಮನೆ
|

Updated on: May 27, 2021 | 5:13 PM

ಐದು ದಶಕಗಳ ಕಾಲ ಚಿತ್ರರಂಗದಲ್ಲಿ ಗಣನೀಯ ಸೇವೆ ನೀಡಿದ ನಟ ರಜನಿಕಾಂತ್​ ಅವರಿಗೆ ಈಗ ಆರೋಗ್ಯ ಕೈಕೊಟ್ಟಿದೆ. ಮೊದಲಿನಷ್ಟು ಜೋಶ್​ ಈಗ ಅವರಲ್ಲಿ ಉಳಿದಿಲ್ಲ. ಕೆಲ ಆ್ಯಕ್ಷನ್​ ದೃಶ್ಯಗಳನ್ನು ಶೂಟ್​ ಮಾಡಬೇಕು ಎನ್ನುವ ಬಯಕೆ ಅವರಿಗಿದ್ದರೂ ಅದಕ್ಕೆ ಅವರ ದೇಹ ಸ್ಪಂದಿಸುವುದಿಲ್ಲ. ಈಗ ರಜನಿಕಾಂತ್​ ಚಿತ್ರರಂಗದಿಂದ ನಿವೃತ್ತಿ ಹೊಂದುವ ಬಗ್ಗೆ ಮೌನ ಮುರಿದಿದ್ದಾರೆ.

ರಜನಿಕಾಂತ್​ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾತು ಹಲವು ವರ್ಷಗಳಿಂದ ಪ್ರಚಲಿತದಲ್ಲಿತ್ತು. ಈ ವರ್ಷ ಅದು ಕೊನೆಗೂ ಸಂಪೂರ್ಣಗೊಳ್ಳುವುದರಲ್ಲಿತ್ತು. ಆದರೆ, ಆ ಸಮಯದಲ್ಲಿ ಅವರು ಆಸ್ಪತ್ರೆಗೆ ದಾಖಲಾದರು. ಈ ಮೂಲಕ ಪಕ್ಷ ಸ್ಥಾಪಿಸುವ ನಿರ್ಧಾರದಿಂದ ಹಿಂದೆ ಸರಿದರು. ಈಗ ಅವರು ಚಿತ್ರರಂಗದಿಂದಲೂ ದೂರ ಸರಿಯುತ್ತಾರೆ ಎನ್ನಲಾಗಿದೆ.

‘ಅಣ್ಣಾಥೆ’ ಸಿನಿಮಾದ ಶೂಟಿಂಗ್​ಗಾಗಿ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಒಂದು ತಿಂಗಳ ಕಾಲ ಅಲ್ಲಿಯೇ ಇದ್ದು, ಶೂಟ್​ ಪೂರ್ಣಗೊಳಿಸಿದ್ದಾರೆ. ಕುಂಬಳಕಾಯಿ ಒಡೆಯುವ ದಿನ ಅಣ್ಣಾಥೆ ತಂಡದ ಕೆಲವರ ಜತೆ ರಜನಿಕಾಂತ್​ ತುಂಬಾನೇ ಭಾವುಕರಾಗಿ ಮಾತನಾಡಿದ್ದರಂತೆ.

ಆರೋಗ್ಯ ಪದೇ ಪದೇ ಕೈಕೊಡುತ್ತಿರುವುದು ರಜನಿಕಾಂತ್​ ಆತಂಕಕ್ಕೆ ಕಾರಣವಾಗಿದೆ. ಹಾಗಂತ ಅವರಿಗೆ ಅಭಿಮಾನಿಗಳಿಗೆ ನಿರಾಸೆ ಮಾಡುವ ಉದ್ದೇಶ ಇಲ್ಲ. ಹೀಗಾಗಿ, ದೇಹ ಸ್ಪಂದಿಸಿದರೆ ಶೀಘ್ರವೇ ಒಂದೆರಡು ಚಿತ್ರಗಳ ಶೂಟಿಂಗ್​ ಮುಗಿಸುವ ಆಲೋಚನೆ ಅವರದ್ದು. ಒಂದೊಮ್ಮೆ ಆರೋಗ್ಯ ಹದಗೆಟ್ಟರೆ ‘ಅಣ್ಣಾಥೆ’ ಅವರ ಕೊನೆಯ ಚಿತ್ರವಾಗಲಿದೆ.

ಐದು ದಶಕಗಳ ಕಾಲ ಸಿನಿಮಾರಂಗದಲ್ಲಿ ಶ್ರಮಿಸಿದ ರಜನಿಕಾಂತ್​ 160ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಸಾಕಷ್ಟು ಚಿತ್ರಗಳು ಸೂಪರ್​ ಹಿಟ್​ ಆಗಿವೆ. ಈಗಲೂ ರಜನಿಕಾಂತ್​ ಫ್ಯಾನ್ಸ್​ ಬಳಗ ತುಂಬಾನೇ ದೊಡ್ಡದಿದೆ. ಹೀಗಾಗಿ, ಅವರ ಆರೋಗ್ಯ ಉತ್ತಮವಾಗಿರಲಿ ಎಂಬುದು ಅಭಿಮಾನಿಗಳ ಆಶಯ.

ಅಣ್ಣಾಥೆ ಸಿನಿಮಾಗೆ ವಿಶ್ವಾಸಮ್​ ಖ್ಯಾತಿ ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕೀರ್ತಿ ಸುರೇಶ್, ನಯನತಾರಾ, ಮೀನಾ, ಪ್ರಕಾಶ್​ ರಾಜ್​ ಮತ್ತು ಖುಷ್ಬೂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಸಿನಿಮಾ ರಿಲೀಸ್​ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಅಣ್ಣಾಥೆ ಶೂಟಿಂಗ್ ಮುಗಿದ ಬೆನ್ನಲ್ಲೇ ಕೊವಿಡ್ ಎರಡನೇ ಡೋಸ್ ಲಸಿಕೆ ಪಡೆದ ರಜನಿಕಾಂತ್

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ