Rajinikanth: ನಿವೃತ್ತಿ ಬಗ್ಗೆ ಕೊನೆಗೂ ಮೌನ ಮುರಿದ ರಜನಿಕಾಂತ್​; ಅವರ ಕೊನೆಯ ಚಿತ್ರ ಯಾವುದು?

ರಜನಿಕಾಂತ್​ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾತು ಹಲವು ವರ್ಷಗಳಿಂದ ಪ್ರಚಲಿತದಲ್ಲಿತ್ತು. ಈ ವರ್ಷ ಅದು ಕೊನೆಗೂ ಸಂಪೂರ್ಣಗೊಳ್ಳುವುದರಲ್ಲಿತ್ತು. ಆದರೆ, ಆ ಸಮಯದಲ್ಲಿ ಅವರು ಆಸ್ಪತ್ರೆಗೆ ದಾಖಲಾದರು.

Rajinikanth: ನಿವೃತ್ತಿ ಬಗ್ಗೆ ಕೊನೆಗೂ ಮೌನ ಮುರಿದ ರಜನಿಕಾಂತ್​; ಅವರ ಕೊನೆಯ ಚಿತ್ರ ಯಾವುದು?
ರಜನೀಕಾಂತ್

Updated on: May 27, 2021 | 5:13 PM

ಐದು ದಶಕಗಳ ಕಾಲ ಚಿತ್ರರಂಗದಲ್ಲಿ ಗಣನೀಯ ಸೇವೆ ನೀಡಿದ ನಟ ರಜನಿಕಾಂತ್​ ಅವರಿಗೆ ಈಗ ಆರೋಗ್ಯ ಕೈಕೊಟ್ಟಿದೆ. ಮೊದಲಿನಷ್ಟು ಜೋಶ್​ ಈಗ ಅವರಲ್ಲಿ ಉಳಿದಿಲ್ಲ. ಕೆಲ ಆ್ಯಕ್ಷನ್​ ದೃಶ್ಯಗಳನ್ನು ಶೂಟ್​ ಮಾಡಬೇಕು ಎನ್ನುವ ಬಯಕೆ ಅವರಿಗಿದ್ದರೂ ಅದಕ್ಕೆ ಅವರ ದೇಹ ಸ್ಪಂದಿಸುವುದಿಲ್ಲ. ಈಗ ರಜನಿಕಾಂತ್​ ಚಿತ್ರರಂಗದಿಂದ ನಿವೃತ್ತಿ ಹೊಂದುವ ಬಗ್ಗೆ ಮೌನ ಮುರಿದಿದ್ದಾರೆ.

ರಜನಿಕಾಂತ್​ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾತು ಹಲವು ವರ್ಷಗಳಿಂದ ಪ್ರಚಲಿತದಲ್ಲಿತ್ತು. ಈ ವರ್ಷ ಅದು ಕೊನೆಗೂ ಸಂಪೂರ್ಣಗೊಳ್ಳುವುದರಲ್ಲಿತ್ತು. ಆದರೆ, ಆ ಸಮಯದಲ್ಲಿ ಅವರು ಆಸ್ಪತ್ರೆಗೆ ದಾಖಲಾದರು. ಈ ಮೂಲಕ ಪಕ್ಷ ಸ್ಥಾಪಿಸುವ ನಿರ್ಧಾರದಿಂದ ಹಿಂದೆ ಸರಿದರು. ಈಗ ಅವರು ಚಿತ್ರರಂಗದಿಂದಲೂ ದೂರ ಸರಿಯುತ್ತಾರೆ ಎನ್ನಲಾಗಿದೆ.

‘ಅಣ್ಣಾಥೆ’ ಸಿನಿಮಾದ ಶೂಟಿಂಗ್​ಗಾಗಿ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಒಂದು ತಿಂಗಳ ಕಾಲ ಅಲ್ಲಿಯೇ ಇದ್ದು, ಶೂಟ್​ ಪೂರ್ಣಗೊಳಿಸಿದ್ದಾರೆ. ಕುಂಬಳಕಾಯಿ ಒಡೆಯುವ ದಿನ ಅಣ್ಣಾಥೆ ತಂಡದ ಕೆಲವರ ಜತೆ ರಜನಿಕಾಂತ್​ ತುಂಬಾನೇ ಭಾವುಕರಾಗಿ ಮಾತನಾಡಿದ್ದರಂತೆ.

ಆರೋಗ್ಯ ಪದೇ ಪದೇ ಕೈಕೊಡುತ್ತಿರುವುದು ರಜನಿಕಾಂತ್​ ಆತಂಕಕ್ಕೆ ಕಾರಣವಾಗಿದೆ. ಹಾಗಂತ ಅವರಿಗೆ ಅಭಿಮಾನಿಗಳಿಗೆ ನಿರಾಸೆ ಮಾಡುವ ಉದ್ದೇಶ ಇಲ್ಲ. ಹೀಗಾಗಿ, ದೇಹ ಸ್ಪಂದಿಸಿದರೆ ಶೀಘ್ರವೇ ಒಂದೆರಡು ಚಿತ್ರಗಳ ಶೂಟಿಂಗ್​ ಮುಗಿಸುವ ಆಲೋಚನೆ ಅವರದ್ದು. ಒಂದೊಮ್ಮೆ ಆರೋಗ್ಯ ಹದಗೆಟ್ಟರೆ ‘ಅಣ್ಣಾಥೆ’ ಅವರ ಕೊನೆಯ ಚಿತ್ರವಾಗಲಿದೆ.

ಐದು ದಶಕಗಳ ಕಾಲ ಸಿನಿಮಾರಂಗದಲ್ಲಿ ಶ್ರಮಿಸಿದ ರಜನಿಕಾಂತ್​ 160ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಸಾಕಷ್ಟು ಚಿತ್ರಗಳು ಸೂಪರ್​ ಹಿಟ್​ ಆಗಿವೆ. ಈಗಲೂ ರಜನಿಕಾಂತ್​ ಫ್ಯಾನ್ಸ್​ ಬಳಗ ತುಂಬಾನೇ ದೊಡ್ಡದಿದೆ. ಹೀಗಾಗಿ, ಅವರ ಆರೋಗ್ಯ ಉತ್ತಮವಾಗಿರಲಿ ಎಂಬುದು ಅಭಿಮಾನಿಗಳ ಆಶಯ.

ಅಣ್ಣಾಥೆ ಸಿನಿಮಾಗೆ ವಿಶ್ವಾಸಮ್​ ಖ್ಯಾತಿ ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕೀರ್ತಿ ಸುರೇಶ್, ನಯನತಾರಾ, ಮೀನಾ, ಪ್ರಕಾಶ್​ ರಾಜ್​ ಮತ್ತು ಖುಷ್ಬೂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಸಿನಿಮಾ ರಿಲೀಸ್​ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಅಣ್ಣಾಥೆ ಶೂಟಿಂಗ್ ಮುಗಿದ ಬೆನ್ನಲ್ಲೇ ಕೊವಿಡ್ ಎರಡನೇ ಡೋಸ್ ಲಸಿಕೆ ಪಡೆದ ರಜನಿಕಾಂತ್

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us