AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್​ 169ನೇ ಸಿನಿಮಾಗೆ ನಿರ್ದೇಶಕ ಫಿಕ್ಸ್​; ‘ಬೀಸ್ಟ್’ ಡೈರೆಕ್ಟರ್​ ಜತೆ ಕೈ ಜೋಡಿಸಿದ ಸೂಪರ್​ ಸ್ಟಾರ್​

ನೆಲ್ಸನ್​ ದಿಲೀಪ್​ ಕುಮಾರ್ ಅವರು ‘ಬೀಸ್ಟ್’ ಚಿತ್ರದ ಕೊನೆಯ ಹಂತದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುವ ನಿರೀಕ್ಷೆ ಇದೆ. ನೆಲ್ಸನ್​ ದಿಲೀಪ್​ ಅವರು ಈ ಮೊದಲು ‘ಡಾಕ್ಟರ್​​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್​ ಹಿಟ್​ ಆಗಿತ್ತು.

ರಜನಿಕಾಂತ್​ 169ನೇ ಸಿನಿಮಾಗೆ ನಿರ್ದೇಶಕ ಫಿಕ್ಸ್​; ‘ಬೀಸ್ಟ್’ ಡೈರೆಕ್ಟರ್​ ಜತೆ ಕೈ ಜೋಡಿಸಿದ ಸೂಪರ್​ ಸ್ಟಾರ್​
ರಜನಿಕಾಂತ್​-ನೆಲ್ಸನ್​
TV9 Web
| Edited By: |

Updated on:Feb 08, 2022 | 1:21 PM

Share

‘ಸೂಪರ್​ ಸ್ಟಾರ್​’ ರಜನಿಕಾಂತ್​ಗೆ (Rajanikanth) ವಯಸ್ಸು 71 ಆಗಿದೆ. ಆದಾಗ್ಯೂ ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್​ ಆಗಿದ್ದಾರೆ. ಚಿತ್ರರಂಗದಲ್ಲಿ ಈವರೆಗೆ 168 ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ರಜನಿಕಾಂತ್​​ ನಟನೆಯ ‘ಅಣ್ಣಾಥೆ’ ಚಿತ್ರ (Annaatthe Movie) ಸೂಪರ್ ಹಿಟ್​ ಆಗಿತ್ತು. ಈಗ ರಜನಿಕಾಂತ್ ನಟನೆಯ 169ನೇ ಸಿನಿಮಾ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಚಿತ್ರಕ್ಕೆ ಯುವ ನಿರ್ದೇಶಕರು ಆಯ್ಕೆ ಆಗಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ. ಈ ಸಿನಿಮಾ ಶೀಘ್ರವೇ ಸೆಟ್ಟೇರಲಿದೆ ಎನ್ನಲಾಗಿದೆ. ಈ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ನೆಲ್ಸನ್​ ದಿಲೀಪ್​ ಕುಮಾರ್ ಅವರು ‘ಬೀಸ್ಟ್’ ಚಿತ್ರದ ಕೊನೆಯ ಹಂತದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುವ ನಿರೀಕ್ಷೆ ಇದೆ. ನೆಲ್ಸನ್​ ದಿಲೀಪ್​ ಅವರು ಈ ಮೊದಲು ‘ಡಾಕ್ಟರ್​​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಅವರು ರಜನಿಕಾಂತ್​ ಜತೆ ಈಗ ಕೈಜೋಡಿಸುತ್ತಿದ್ದಾರೆ ಅನ್ನೋದು ವಿಶೇಷ.

‘ರಜನಿಕಾಂತ್ ಮತ್ತು ನೆಲ್ಸನ್ ಮುಂದಿನ ಚಿತ್ರಕ್ಕಾಗಿ ಜೊತೆಯಾಗುತ್ತಿದ್ದಾರೆ. ಇದು ವಿಶಿಷ್ಟವಾದ ಸಿನಿಮಾ ಆಗಿರಲಿದ್ದು, ಏಪ್ರಿಲ್ ಅಂತ್ಯ/ಮೇ ಆರಂಭದಲ್ಲಿ ಚಿತ್ರ ಸೆಟ್ಟೇರಲಿದೆ. ಆ ನಂತರ ವೇಗವಾಗಿ ಶೂಟಿಂಗ್​ ಪೂರ್ಣಗೊಳಿಸಿ, ಮುಂದಿನ ವರ್ಷದ ಸಂಕ್ರಾಂತಿ ವೇಳೆಗೆ ಸಿನಿಮಾ ತೆರೆಗೆ ತರುವ ಆಲೋಚನೆಯಲ್ಲಿ ಚಿತ್ರ ತಂಡ ಇದೆ’ ಎಂದು ಮೂಲಗಳು ತಿಳಿಸಿರುವುದಾಗಿ ತಮಿಳು ಮಾಧ್ಯಮಗಳು ವರದಿ ಮಾಡಿವೆ.

ವಿಶೇಷ ವಿಡಿಯೋದೊಂದಿಗೆ ಈ ಸಿನಿಮಾ ಬಗ್ಗೆ ಅಧಿಕೃತ ಘೋಷಣೆ ಮಾಡಲು ಚಿತ್ರತಂಡ ಪ್ಲ್ಯಾನ್​ ರೂಪಿಸಿದೆ. ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಿಸಲಿದ್ದು, ಅನಿರುದ್ಧ್ ಸಂಗೀತ ಮತ್ತು ಹಿನ್ನೆಲೆ ಸಂಗೀತವನ್ನು ಮಾಡಲಿದ್ದಾರೆ.

ಬೀಸ್ಟ್​ vs ಕೆಜಿಎಫ್​ 

ಸ್ಟಾರ್​ ನಟರ ಸಿನಿಮಾ ರಿಲೀಸ್ ಆಗುತ್ತಿದೆ ಎಂದರೆ ಅದರ ಎದುರು ಒಂದಷ್ಟು ಚಿತ್ರಗಳು ರಿಲೀಸ್​ಗೆ ಸಿದ್ಧವಾಗುತ್ತದೆ. ಈಗ ‘ಕೆಜಿಎಫ್​ 2’ ಎದುರು ದೊಡ್ಡದೊಡ್ಡ ಚಿತ್ರಗಳು ಸ್ಪರ್ಧೆಗೆ ಇಳಿಯೋಕೆ ರೆಡಿ ಆಗಿವೆ. ಹೊಸ ವರ್ಷದ ಪ್ರಯುಕ್ತ ‘ಬೀಸ್ಟ್​’ ಸಿನಿಮಾ ತಂಡ ಹೊಸ ಪೋಸ್ಟರ್​ ರಿಲೀಸ್​ ಮಾಡಿತ್ತು. ಈ ಪೋಸ್ಟರ್​ನಲ್ಲಿ ಏಪ್ರಿಲ್​ನಲ್ಲಿ ಚಿತ್ರಮಂದಿರಕ್ಕೆ ಲಗ್ಗೆ ಇಡುವ ಬಗ್ಗೆ ತಂಡ ಘೋಷಣೆ ಮಾಡಿದೆ. ಅದು ‘ಕೆಜಿಎಫ್​ 2’ ಎದುರೇ ಆಗಿರಲಿದೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ.

‘ಕೆಜಿಎಫ್​ 2’ ತಮಿಳಿಗೂ ಡಬ್​ ಆಗಿ ತೆರೆಕಾಣುತ್ತಿದೆ. ಒಂದೊಮ್ಮೆ ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್​ ಆಗದೇ ಇದ್ದರೆ ಈ ಚಿತ್ರದ ಕಮಾಯಿ ಹೆಚ್ಚಲಿದೆ. ಇದಕ್ಕೆ ತಡೆ ನೀಡಬೇಕು ಎಂದು ಪರಭಾಷಿಗರು ಪ್ಲ್ಯಾನ್​ ರೂಪಿಸಿದಂತಿದೆ. ಈ ಕಾರಣಕ್ಕೆ ಕಾಲಿವುಡ್​ನಿಂದ ‘ಬೀಸ್ಟ್​’ ಚಿತ್ರವನ್ನು ಸ್ಪರ್ಧೆಗೆ ಇಳಿಸಲು ಪ್ಲ್ಯಾನ್​ ಮಾಡಿದ್ದಾರೆ ಎನ್ನಲಾಗುತ್ತಿದೆ.

ಪೂಜಾ ಹೆಗ್ಡೆ ಈ ಸಿನಿಮಾದ ನಾಯಕಿ. ಅವರು ಇದೇ ಮೊದಲ ಬಾರಿಗೆ ವಿಜಯ್​ಗೆ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ನೆಲ್ಸನ್​ ದಿಲೀಪ್​ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಸನ್​ ಪಿಕ್ಚರ್ಸ್​ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ಇದನ್ನೂ ಓದಿ: ‘ಕೆಜಿಎಫ್​ 2’ ಎದುರು ಸ್ಪರ್ಧೆಗೆ ಇಳಿದ ತಮಿಳು ಸ್ಟಾರ್ ನಟನ ​ ಸಿನಿಮಾ; ಗೆಲ್ಲೋದು ಯಶ್​ ಎಂದ ಫ್ಯಾನ್ಸ್​

‘ಕೆಜಿಎಫ್​ 2’ ಎದುರು ಪರಭಾಷೆ ಚಿತ್ರಗಳ ಮುಖಾಮುಖಿ; ಯಶ್​ಗೆ ಪೈಪೋಟಿ ನೀಡೋರು ಯಾರೆಲ್ಲ?

Published On - 12:54 pm, Tue, 8 February 22

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!